8:06 PM Thursday25 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಕ್ವಾಂಟಮ್ ಕಂಪ್ಯೂಟಿಂಗ್ ಜ್ಞಾನದಿಂದ ಭವಿಷ್ಯದ ಸವಾಲುಗಳಿಗೆ ಉತ್ತರ: ಡಾ. ತ್ಯಾಗರಾಜು ಜಿ.ಎಸ್.

23/08/2024, 13:33

ಮಂಗಳೂರು(reporterkarnataka.com): ಇಂದಿನ ವೇಗದ ಜಗತ್ತಿನಲ್ಲಿ ‘ಕ್ವಾಂಟಮ್ ಕಂಪ್ಯೂಟಿಂಗ್’ ತಾಂತ್ರಿಕತೆಯ ಮಹತ್ವ ಹೆಚ್ಚುತ್ತಿದೆ. ಹೆಚ್ಚುತ್ತಿರುವ ಡೇಟಾ ಉತ್ಪಾದನೆಯ ಜತೆ ಶಾಸ್ತ್ರೀಯ ಕಂಪ್ಯೂಟರ್ ತಂತ್ರಜ್ಞಾನ ಹೊಂದಿಕೊಳ್ಳಲು ಕಷ್ಟವಾಗುತ್ತಿರುವುದು ‘ಕ್ವಾಂಟಮ್ ಕಂಪ್ಯೂಟಿಂಗ್’ನ ಮಹತ್ವ ಹೆಚ್ಚಿಸಿದೆ. ಇದರಿಂದಾಗಿ ಸಂಕೀರ್ಣ ಸಮಸ್ಯೆಗಳನ್ನೂ ತ್ವರಿತ ಹಾಗೂ ಪರಿಪಕ್ವತೆಯಿಂದ ನಿರ್ವಹಿಸಲು ಸಾಧ್ಯವಾಗಿದೆ. ಹಾಗಾಗಿಯೇ ತಾಂತ್ರಿಕ ರಂಗದ ದಿಗ್ಗಜ ಕಂಪೆನಿಗಳ ಪೈಕಿ ಗೂಗಲ್ ಕೂಡಾ ‘ಕ್ವಾಂಟಮ್ ಕಂಪ್ಯೂಟಿಂಗ್, ಕೃತಕ ಬುದ್ದಿಮತ್ತೆಯ ತಂತ್ರಜ್ಞರಿಗೆ ಹೊಸತನದ ಸವಾಲುಗಳಾಗಿ ಮಣೆ ಹಾಕುತ್ತಿದೆ. ಈ ನೆಲೆಯಲ್ಲಿ ಇಂದಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಭವಿಷ್ಯದ ಸವಾಲುಗಳಿಗೆ ಉತ್ತರಿಸಲು ಸನ್ನದ್ಧರಾಗಿಸುವ ಜವಾಬ್ದಾರಿ ನಮಗಿದೆ ಎಂದು ಉಜಿರೆ ಎಸ್‌ಡಿಎಂಐಟಿಯ ಇನ್ಫರ್ಮೇಶನ್ ಸೈನ್ಸ್ ಇಂಜಿನಿಯರಿಂಗ್ ಪ್ರಾಧ್ಯಾಪಕ , ವಿಭಾಗ ಮುಖ್ಯಸ್ಥ ಡಾ. ತ್ಯಾಗರಾಜು ಜಿ.ಎಸ್. ಹೇಳಿದರು.
ಅವರು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾನಿಲಯದ ಸಹಯೋಗದಲ್ಲಿ ಕೆನರಾ ಇಂಜಿನಿರಿಂಗ್ ಕಾಲೇಜಿನಲ್ಲಿ ಗುರುವಾರ ಇನ್ಫರ್ಮೇಶನ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ಗುರುವಾರ ‘ಕ್ವಾಂಟಮ್ ಕಂಪ್ಯೂಟಿಂಗ್’ ಕುರಿತಂತೆ ಆರಂಭಗೊಂಡ ಮೂರು ದಿನಗಳ ಬೋಧಕರ ಜ್ಞಾನಾಭಿವೃದ್ಧಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಡಾ. ನಾಗೇಶ್ ಹೆಚ್. ಆರ್. ಅಧ್ಯಕ್ಷತೆ ವಹಿಸಿದ್ದರು. ವಿಭಾಗ ಮುಖ್ಯಸ್ಥ ಡಾ. ಹೆಚ್. ಮನೋಜ್ ಗಡಿಯಾರ್ ಸ್ವಾಗತಿಸಿದರು. ಕಾರ್ಯಕ್ರಮ ಸಂಯೋಜಕರಾದ ಸಹ ಪ್ರಾಧ್ಯಾಪಕಿ ಡಾ. ಉಷಾ ಜಿ.ಆರ್. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಾಯಕ ಪ್ರಾಧ್ಯಾಪಕ ರಂಗನಾಥ್ ಕೆ. ವಂದಿಸಿದರು. ಸುಷ್ಮಾ ಎಂ.ಡಿ. ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದ ಮುಂದಿನ ಎರಡು ದಿನಗಳಲ್ಲಿ ಬೆಂಗಳೂರಿನ ಕ್ವಾಂಟಮ್ ರಿಸರ್ಚ್ ಲ್ಯಾಬ್ ಸ್ಥಾಪಕ ಸಿಇಒ ದೊರೈ ಕಾರ್ತಿಗಣೇಶ್, ಮಂಗಳೂರು ಸೆವೆನ್ ಎಡ್ಜ್ ಪ್ರೈ.ಲಿ ಹಿರಿಯ ಪ್ರಬಂಧಕ ಪ್ರಶಾಂತ್ ಕುಮಾರ್ ಎ, ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು