5:17 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಪತ್ನಿ ರಾಜೇಶ್ವರಿ ತೇಜಸ್ವಿ ಇನ್ನಿಲ್ಲ

14/12/2021, 11:14

ಬೆಂಗಳೂರು(reporterkarnataka.com): ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ತೇಜಸ್ವಿ(84)ಇಂದು ನಿಧನರಾದರು.

ಅಲ್ಪಕಾಲದ ಅನಾರೋಗ್ಯದಿಂದ ಅವರು ಇತ್ತೀಚೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

ರಾಜೇಶ್ವರಿ ತೇಜಸ್ವಿ- 1937ರಲ್ಲಿ ಬೆಂಗಳೂರಿನ ಕಲಾಸಿಪಾಳ್ಯಂ ಹೊಸ ಬಡಾವಣೆಯಲ್ಲಿ ತೀರಾ ಸಾಮಾನ್ಯ ಕುಟುಂಬದಲ್ಲಿ ಹುಟ್ಟಿದವರು. ಹೆಣ್ಣುಮಕ್ಕಳಿಗೂ ತಮ್ಮ ಕಾಲ ಮೇಲೆ ನಿಂತುಕೊಳ್ಳುವ ವಿದ್ಯಾಭ್ಯಾಸ ಕೊಡಬೇಕೆನ್ನುವ ತಮ್ಮ ತಂದೆಯ ಉದಾತ್ತ ಧ್ಯೇಯದಿಂದಾಗಿ ತತ್ವಶಾಸ್ತ್ರದಲ್ಲಿ ಆನರ್ಸ್ ಮತ್ತು ಎಂ.ಎ ಮಾಡಲು ಮಾನಸ ಗಂಗೋತ್ರಿ ಮೈಸೂರಿಗೆ ಬಂದರು. ಅಲ್ಲಿ ಪೂರ್ಣಚಂದ್ರ ತೇಜಸ್ವಿಯವರ ಪರಿಚಯವಾಗಿ ಪ್ರೀತಿಸಿದರು. ಆನಂತರ ಇವರ ಬದುಕಿನ ದಿಕ್ಕೇ ಬದಲಾಯಿಸಿತು. 1966ರಲ್ಲಿ  ವಿವಾಹವಾದರು. ‘ನನ್ನ ತೇಜಸ್ವಿ’ ರಾಜೇಶ್ವರಿ ಅವರ ಮೊಟ್ಟ ಮೊದಲ ಪುಸ್ತಕ. ಈಗ ಅದು ಐದನೇ ಮುದ್ರಣ ಕಂಡಿದೆ. 

ಇವರ ಹವ್ಯಾಸವೂ ವಿಭಿನ್ನವಾಗಿದೆ. ಕ್ರೋಶ-ಟೈಲರಿಂಗ್, ಮೊಮ್ಮಕ್ಕಳು ಮತ್ತು ನೆರೆಹೊರೆಯ ಮಕ್ಕಳಿಗೆ Stamp collection. ಇವತ್ತಿಗೆ E-mail ಇದ್ದರೂ ಅಪರೂಪದ Stamp collection ಮಾಡಿದ್ದಾರೆ. ‘ನಮ್ಮ ಮನೆಗೂ ಬಂದರು ಗಾಂಧೀಜಿ’ ಇವರ ಎರಡನೆಯ ಪುಸ್ತಕ. ರಾಜೇಶ್ವರಿ ಅವರಿಗೆ ಇಬ್ಬರು ಹೆಣ್ಣುಮಕ್ಕಳಿದ್ದು ಇಬ್ಬರೂ ಸಾಫ್ಟ್ ವೇರ್ ಇಂಜಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸದ್ಯ ರಾಜೇಶ್ವರಿ ತೇಜಸ್ವಿಯವರು ಅಪರೂಪದ ಹವ್ಯಾಸಗಳೊಂದಿಗೆ ಮೂಡಿಗೆರೆಯಲ್ಲಿ ಕಾಫಿತೋಟವನ್ನ ನೋಡಿಕೊಳುತ್ತಾ ಇದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು