9:56 AM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಖ್ಯಾತ ಹಿಂದುಸ್ಥಾನಿ ಸಂಗೀತ ವಿದುಷಿ ವಿಜಯಾ ಕಿಶೋರ್ ಗೆ ಸ್ವರ ಶ್ರದ್ಧಾಂಜಲಿ

09/12/2024, 19:44

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಧಾರವಾಡದ ವೈಷ್ಣವಿ ಪಂಚಮುಖಿ ಅವರು ತಮ್ಮ ಸುಶ್ರಾವ್ಯ ಗಾಯನದಿಂದ ಸಂಗೀತಾ ಪ್ರಿಯರ ಮನ ಸೂರೆಗೊಂಡರು.
ಅವರು ಬಳ್ಳಾರಿ ನಗರದಲ್ಲಿ ಏರ್ಪಡಿಸಿದ ದಿ. ವಿಜಯಾ ಕಿಶೋರ್, ಖ್ಯಾತ ಹಿಂದುಸ್ಥಾನಿ ಸಂಗೀತ ವಿದೂಷಿ, ಅವರ ಮೂರನೇ ಪುಣ್ಯತಿಥಿ ಅಂಗವಾಗಿ ಆಯೋಜಿಸಿದ ‘ಸ್ವರ ಶ್ರದ್ಧಾಂಜಲಿ’ ಕಾರ್ಯಕ್ರಮದಲ್ಲಿ ಭಾಗವಸಿದ್ದರು.

ಬಾಗೇಶ್ರೀ ರಾಗದಲ್ಲಿ ‘ಮೊರೇ ಮನಾ ಚೀಸನ್ನು ವಿಲಂಬಿತ ಏಕ್ ತಾಳದಲ್ಲಿ ಆರಂಭಿಸಿ ದೃತ್ ತೀತಾಳಡಲ್ಲಿ ಕೌನ್ ಕರತ್ ತೊರೆ ಮಿಲನ ಪಿಯಾರವಾ ಪ್ರಸ್ತುತ ಪಡಿಸಿದರು. ನಂತರ ಒಂದು ತರಾನಾ ಹಾಡಿ ಸ್ವರಗಳ ಮೇಲೆ ಹಾಗೂ ತಾನುಗಳ ಮೇಲೆ ತಮ್ಮ ಹಿಡಿತವನ್ನು ಪ್ರದರ್ಶಿಸಿದರು.
ಸುಗಮ ಸಂಗೀತದಲ್ಲಿ ಜನಪ್ರಿಯ ದಾಸರ ಪದಗಳು ಹಾಗೂ ಒಂದು ಅಭಂಗ್ ಪ್ರಸ್ತುತ ಪಡಿಸಿ ಶ್ರೂತ್ರುಗಳ ಮೆಚ್ಚಿಗೆ ಪಡೆದರು.
ಅವರಿಗೆ ತಬಲಾದಲ್ಲಿ ಅವರ ಪತಿ ಜಯತೀರ್ಥ ಪಂಚಮುಖಿ ಸಾಥ್ ನೀಡಿದರೆ ಹಾರ್ಮೋನಿಯಂ ಸಾಥ್ ದೊಡ್ಡಬಸವ, ತಾಳದಲ್ಲಿ ಅವರ ಮಗ ಸುಮನ್ಯು ನೀಡಿದರು.
ಇದಕ್ಕೂ ಮೊದಲು ವಿಜಯಾ ಕಿಶೋರ್ ಅವರ ಶಿಷ್ಯರು ಗಳಾದ ಕುಮಾರ ಶಶಾಂಕ್, ಕುಮಾರ ಆಭಯ ಹಾಗೂ ಕುಮಾರ ಶಮಂತ್ ರಾಗ ಕೇದಾರದಲ್ಲಿ ಛೋಟಾ ಖ್ಯಾಲ್ ಹಾಗೂ ದಾಸರ ಪದ ಮತ್ತು ವಚನ ಪ್ರಸ್ತುತಪಡಿಸಿದರು.
ಜಯಲಕ್ಷ್ಮಿ, ಸಾನ್ವಿ ಹಾಗೂ ಕುಮಾರ್ ಆಯುಷ್ ರಾಗ ಯಮನದಲ್ಲಿ ಛೋಟಾ ಖಾಲಿ ಹಾಗೂ ದಸ್ಕ್ರಾ ಪದ ಮತ್ತು ವಚನ ಗಾಯನ ಮಾಡಿದರು.
ಸನ್ನಿಧಿ ಶುದ್ಧ ಸಾರ್ನ್ಗ್ ರಾಗದಲ್ಲಿ ಒಂದು ಛೋಟಾ ಖ್ಯಾಲ್ ಹಾಗೂ ದಾಸರ ಪದ ಮತ್ತು ವಚನ ಹಾಡಿದರು.
ಹಿರಿಯ ಶಿಷ್ಯೆ ಸಂಧ್ಯಾ ಕೊಳಚಲಂ ಅವರು ಸುಗಮ ಸಂಗೀತದಲ್ಲಿ ಭಾವಗೀತೆ, ದಸರ ಪದ, ವಚನ ಪ್ರಸ್ತುತ ಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು