11:44 AM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಖ್ಯಾತ ಹೃದಯ ತಜ್ಞ ಡಾ. ದೇವಿಪ್ರಸಾದ್ ಶೆಟ್ಟಿ ಶೀಘ್ರ ಕೇಂದ್ರ ಸಂಪುಟಕ್ಕೆ? : ಆರೋಗ್ಯ ಖಾತೆಯ ಜವಾಬ್ದಾರಿ?

25/05/2021, 22:48

ನವದೆಹಲಿ(reporterkarnataka news): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದ ವಿಸ್ತರಣೆ ಶೀಘ್ರದಲ್ಲೇ ನಡೆಯಲಿದ್ದು, ವಿಶ್ವ ಪ್ರಸಿದ್ಧ ಹೃದಯ ತಜ್ಞ, ತುಳುನಾಡಿನ ಪುತ್ರ

ಡಾ. ದೇವಿಪ್ರಸಾದ್ ಶೆಟ್ಟಿ ಅವರು ಸಂಪುಟ ಸೇರುವ ಸಾಧ್ಯತೆಗಳಿವೆ ಎಂದು ವಿಶ್ವಸನೀಯ ಮೂಲಗಳಿಂದ ತಿಳಿದು ಬಂದಿದೆ.

ಕೊರೊನಾ ಎರಡನೇ ಅಲೆಯ ಆರ್ಭಟ ಹಾಗೂ ಬರಲಿದೆ ಎನ್ನಲಾದ ಮೂರನೇ ಅಲೆಯ ಹಿನ್ನೆಲೆಯಲ್ಲಿ ಬೆಂಗಳೂರಿನ ನಾರಾಯಣ ಹೃದಯಾಲಯದ ಮುಖ್ಯಸ್ಥರೂ ಆಗಿರುವ ಡಾ. ದೇವಿಪ್ರಸಾದ್ ಶೆಟ್ಟಿ ಅವರನ್ನು ಕೇಂದ್ರ ಆರೋಗ್ಯ ಸಚಿವರನ್ನಾಗಿ ನೇಮಕ ಮಾಡುವ ಸಾಧ್ಯತೆಗಳಿವೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಈಗಿರುವ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ ಅವರ ಕಾರ್ಯವೈಖರಿ ಈಗಾಗಲೇ ಸಾರ್ವಜನಿಕರ ಟೀಕೆಗೆ ಒಳಗಾಗಿದೆ. ಅಷ್ಟೇ ಅಲ್ಲದೆ ಕೊರೊನಾವನ್ನು ಪರಿಣಾಮಕಾರಿಯಾಗಿ ಎದುರಿಸಲು ಡಾ. ಹರ್ಷವರ್ಧನ ನೇತೃತ್ವದ ಆರೋಗ್ಯ ಇಲಾಖೆ ವಿಫಲವಾಗಿದೆ ಎಂಬ ಆರೋಪವಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವರನ್ನು ಬದಲಾಯಿಸುವ ನಿರ್ಧಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಬಂದಿದ್ದಾರೆ ಎನ್ನಲಾಗಿದೆ.

ಕೊರೊನಾ ಮೂರನೇ ಅಲೆಯ ಟಾಸ್ಕ್ ಫೋರ್ಸ್ ಅಧ್ಯಕ್ಷರೂ ಆಗಿರುವ ಡಾ. ದೇವಿಪ್ರಸಾದ್ ಶೆಟ್ಟಿ ಅವರ ಹೆಗಲಿಗೆ ಆರೋಗ್ಯ ಇಲಾಖೆಯ ಜವಾಬ್ದಾರಿಯನ್ನು ಕೊಟ್ಟು ಹರ್ಷವರ್ಧನ ಅವರಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ನೀಡುವ

ಕುರಿತು ಕೇಂದ್ರ ಚಿಂತನೆ ನಡೆಸಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು