3:47 PM Sunday21 - June 2026
ಬ್ರೇಕಿಂಗ್ ನ್ಯೂಸ್
Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ

ಇತ್ತೀಚಿನ ಸುದ್ದಿ

ಖ್ಯಾತ ಹೃದಯ ತಜ್ಞ ಡಾ. ದೇವಿಪ್ರಸಾದ್ ಶೆಟ್ಟಿ ಶೀಘ್ರ ಕೇಂದ್ರ ಸಂಪುಟಕ್ಕೆ? : ಆರೋಗ್ಯ ಖಾತೆಯ ಜವಾಬ್ದಾರಿ?

25/05/2021, 22:48

ನವದೆಹಲಿ(reporterkarnataka news): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದ ವಿಸ್ತರಣೆ ಶೀಘ್ರದಲ್ಲೇ ನಡೆಯಲಿದ್ದು, ವಿಶ್ವ ಪ್ರಸಿದ್ಧ ಹೃದಯ ತಜ್ಞ, ತುಳುನಾಡಿನ ಪುತ್ರ

ಡಾ. ದೇವಿಪ್ರಸಾದ್ ಶೆಟ್ಟಿ ಅವರು ಸಂಪುಟ ಸೇರುವ ಸಾಧ್ಯತೆಗಳಿವೆ ಎಂದು ವಿಶ್ವಸನೀಯ ಮೂಲಗಳಿಂದ ತಿಳಿದು ಬಂದಿದೆ.

ಕೊರೊನಾ ಎರಡನೇ ಅಲೆಯ ಆರ್ಭಟ ಹಾಗೂ ಬರಲಿದೆ ಎನ್ನಲಾದ ಮೂರನೇ ಅಲೆಯ ಹಿನ್ನೆಲೆಯಲ್ಲಿ ಬೆಂಗಳೂರಿನ ನಾರಾಯಣ ಹೃದಯಾಲಯದ ಮುಖ್ಯಸ್ಥರೂ ಆಗಿರುವ ಡಾ. ದೇವಿಪ್ರಸಾದ್ ಶೆಟ್ಟಿ ಅವರನ್ನು ಕೇಂದ್ರ ಆರೋಗ್ಯ ಸಚಿವರನ್ನಾಗಿ ನೇಮಕ ಮಾಡುವ ಸಾಧ್ಯತೆಗಳಿವೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಈಗಿರುವ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ ಅವರ ಕಾರ್ಯವೈಖರಿ ಈಗಾಗಲೇ ಸಾರ್ವಜನಿಕರ ಟೀಕೆಗೆ ಒಳಗಾಗಿದೆ. ಅಷ್ಟೇ ಅಲ್ಲದೆ ಕೊರೊನಾವನ್ನು ಪರಿಣಾಮಕಾರಿಯಾಗಿ ಎದುರಿಸಲು ಡಾ. ಹರ್ಷವರ್ಧನ ನೇತೃತ್ವದ ಆರೋಗ್ಯ ಇಲಾಖೆ ವಿಫಲವಾಗಿದೆ ಎಂಬ ಆರೋಪವಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವರನ್ನು ಬದಲಾಯಿಸುವ ನಿರ್ಧಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಬಂದಿದ್ದಾರೆ ಎನ್ನಲಾಗಿದೆ.

ಕೊರೊನಾ ಮೂರನೇ ಅಲೆಯ ಟಾಸ್ಕ್ ಫೋರ್ಸ್ ಅಧ್ಯಕ್ಷರೂ ಆಗಿರುವ ಡಾ. ದೇವಿಪ್ರಸಾದ್ ಶೆಟ್ಟಿ ಅವರ ಹೆಗಲಿಗೆ ಆರೋಗ್ಯ ಇಲಾಖೆಯ ಜವಾಬ್ದಾರಿಯನ್ನು ಕೊಟ್ಟು ಹರ್ಷವರ್ಧನ ಅವರಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ನೀಡುವ

ಕುರಿತು ಕೇಂದ್ರ ಚಿಂತನೆ ನಡೆಸಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು