3:09 AM Monday7 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಖ್ಯಾತ ಪತ್ರಕರ್ತ ಸುರೇಶ್ ಬೆಳಗಜೆ ಪುತ್ರನ ಕಲ್ಯಾಣ ವೈಭವ: ಕೋವಿಡ್ ಶಿಷ್ಟಾಚಾರದಲ್ಲಿ ಸರಳವಾಗಿ ನಡೆದ ವಿವಾಹ ಮಹೋತ್ಸವ

30/01/2022, 21:54

ಮಂಗಳೂರು(reporterkarnataka.com) ಹಿರಿಯ ಪತ್ರಕರ್ತ ಸುರೇಶ್ ಬೆಳಗಜೆ ಹಾಗೂ ಉಷಾ ಬೆಳಗಜೆ ಅವರ ಪುತ್ರ ಸುಕೇಶ್ ಬೆಳಗಜೆ ಅವರ ವಿವಾಹ ಶ್ರೀರಂಜಿತಾ ಅವರ ಜತೆ ಬಂಟ್ವಾಳದಲ್ಲಿ ಮಾಣಿಯ ಜನಭವನದಲ್ಲಿ ನಡೆಯಿತು.

ಸುರೇಶ್ ಬೆಳಗಜೆ ಅವರು ಪ್ರಜಾವಾಣಿಯಲ್ಲಿ ಸುಮಾರು 23 ವರ್ಷ, ಉದಯವಾಣಿಯಲ್ಲಿ 9 ವರ್ಷ, ಸುದ್ದಿ ಬಿಡುಗಡೆಯಲ್ಲಿ ಒಂದು ವರ್ಷ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದರು. ಹಾಗೆ ಸಾಕಷ್ಟು ಕಿರಿಯ ಪತ್ರಕರ್ತರಿಗೆ ಗುರುವಿನ ಸ್ಥಾನದಲ್ಲಿ ನಿಂತು ಮಾರ್ಗದರ್ಶನ ಮಾಡಿದ್ದರು.

ಸುರೇಶ ಬೆಳಗಜೆ-  ಉಷಾ ಬೆಳಗಜೆ ಅವರ ಪುತ್ರ ಸುಕೇಶ್ ಬೆಳಗಜೆ ಅವರನ್ನು ವರಿಸಿದ ವಧು ಶ್ರೀರಂಜಿತಾ ಅವರು ಮಂಗಳೂರು ಮಹಾನಗರ ಪಾಲಿಕೆಯ ನಿವೃತ್ತ ಅಧಿಕಾರಿ ಸತ್ಯನಾರಾಯಣ ಭಟ್ ಮತ್ತು ಪಾರ್ವತಿ ದಂಪತಿಯ ಪುತ್ರಿ.

ಮದುವೆ ಸಮಾರಂಭ ಜನವರಿ 26ರಂದು ನಡೆಯಿತು. ಕೋವಿಡ್ ಕಾರಣಕ್ಕೆ ನಿಗದಿತ ಮಿತಿಯಲ್ಲಿ ಆಹ್ವಾನಪತ್ರ ನೀಡಿದ್ದು, ಕಡಿಮೆ ಜನರ ಉಪಸ್ಥಿತಿಯಲ್ಲಿ ವಿವಾಹ ನೆರವೇರಿತು. ಬಳಿಕ ರಾತ್ರಿ ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಬೆಳಗಜೆ ಮನೆಯಲ್ಲಿ ವಧೂ ಗೃಹಪ್ರವೇಶವೂ ಕೋವಿಡ್ ಶಿಷ್ಟಾಚಾರದೊಂದಿಗೆ ನೆರವೇರಿತು.

ಇತ್ತೀಚಿನ ಸುದ್ದಿ

ಜಾಹೀರಾತು