5:09 PM Thursday10 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಖ್ಯಾತ ಪತ್ರಕರ್ತ ಸುರೇಶ್ ಬೆಳಗಜೆ ಪುತ್ರನ ಕಲ್ಯಾಣ ವೈಭವ: ಕೋವಿಡ್ ಶಿಷ್ಟಾಚಾರದಲ್ಲಿ ಸರಳವಾಗಿ ನಡೆದ ವಿವಾಹ ಮಹೋತ್ಸವ

30/01/2022, 21:54

ಮಂಗಳೂರು(reporterkarnataka.com) ಹಿರಿಯ ಪತ್ರಕರ್ತ ಸುರೇಶ್ ಬೆಳಗಜೆ ಹಾಗೂ ಉಷಾ ಬೆಳಗಜೆ ಅವರ ಪುತ್ರ ಸುಕೇಶ್ ಬೆಳಗಜೆ ಅವರ ವಿವಾಹ ಶ್ರೀರಂಜಿತಾ ಅವರ ಜತೆ ಬಂಟ್ವಾಳದಲ್ಲಿ ಮಾಣಿಯ ಜನಭವನದಲ್ಲಿ ನಡೆಯಿತು.

ಸುರೇಶ್ ಬೆಳಗಜೆ ಅವರು ಪ್ರಜಾವಾಣಿಯಲ್ಲಿ ಸುಮಾರು 23 ವರ್ಷ, ಉದಯವಾಣಿಯಲ್ಲಿ 9 ವರ್ಷ, ಸುದ್ದಿ ಬಿಡುಗಡೆಯಲ್ಲಿ ಒಂದು ವರ್ಷ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದರು. ಹಾಗೆ ಸಾಕಷ್ಟು ಕಿರಿಯ ಪತ್ರಕರ್ತರಿಗೆ ಗುರುವಿನ ಸ್ಥಾನದಲ್ಲಿ ನಿಂತು ಮಾರ್ಗದರ್ಶನ ಮಾಡಿದ್ದರು.

ಸುರೇಶ ಬೆಳಗಜೆ-  ಉಷಾ ಬೆಳಗಜೆ ಅವರ ಪುತ್ರ ಸುಕೇಶ್ ಬೆಳಗಜೆ ಅವರನ್ನು ವರಿಸಿದ ವಧು ಶ್ರೀರಂಜಿತಾ ಅವರು ಮಂಗಳೂರು ಮಹಾನಗರ ಪಾಲಿಕೆಯ ನಿವೃತ್ತ ಅಧಿಕಾರಿ ಸತ್ಯನಾರಾಯಣ ಭಟ್ ಮತ್ತು ಪಾರ್ವತಿ ದಂಪತಿಯ ಪುತ್ರಿ.

ಮದುವೆ ಸಮಾರಂಭ ಜನವರಿ 26ರಂದು ನಡೆಯಿತು. ಕೋವಿಡ್ ಕಾರಣಕ್ಕೆ ನಿಗದಿತ ಮಿತಿಯಲ್ಲಿ ಆಹ್ವಾನಪತ್ರ ನೀಡಿದ್ದು, ಕಡಿಮೆ ಜನರ ಉಪಸ್ಥಿತಿಯಲ್ಲಿ ವಿವಾಹ ನೆರವೇರಿತು. ಬಳಿಕ ರಾತ್ರಿ ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಬೆಳಗಜೆ ಮನೆಯಲ್ಲಿ ವಧೂ ಗೃಹಪ್ರವೇಶವೂ ಕೋವಿಡ್ ಶಿಷ್ಟಾಚಾರದೊಂದಿಗೆ ನೆರವೇರಿತು.

ಇತ್ತೀಚಿನ ಸುದ್ದಿ

ಜಾಹೀರಾತು