5:00 AM Tuesday25 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

16/10/2025, 10:07

ಬೆಂಗಳೂರು(reporterkarnataka.com): ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ʼಗ್ರಾಮಾಭಿವೃದ್ಧಿಯ ಹೊಸ ಹಾದಿ-ಯುಕ್ತಧಾರʼ ಮಾರ್ಗಸೂಚಿಗಳನ್ನು ಅನುಸರಿಸಿ 2026-27ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸುವ ಸಂಬಂಧ ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಿಗೆ ಮಾರ್ಗದರ್ಶನ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಅಕುಶಲ ಕೆಲಸಕ್ಕೆ ಬೇಡಿಕೆ ಸಲ್ಲಿಸುವ ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ವರ್ಷದಲ್ಲಿ 100 ದಿನಗಳ ಅಕುಶಲ ಕೆಲಸ ಖಾತ್ರಿ ಪಡಿಸುತ್ತದೆ. ಕೂಲಿಕಾರರಿಗೆ ಸಕಾಲದಲ್ಲಿ ಅಕುಶಲ ಕೆಲಸ ಒದಗಿಸುವುದರೊಂದಿಗೆ ಬಹುಬಾಳಿಕೆ ಆಸ್ತಿಗಳನ್ನು ಸೃಜಿಸಲಾಗುತ್ತದೆ. ಹೀಗೆ ಸೃಜಿಸುವ ಆಸ್ತಿಗಳನ್ನು ಪ್ರತಿ ವರ್ಷ ಅಕ್ಟೋಬರ್‌ ಮಾಹೆಯಿಂದ ನವೆಂಬರ್‌ ಮಾಹೆವರೆಗೆ ಎಲ್ಲಾ ಗ್ರಾಮಪಂಚಾಯಿತಿಗಳಲ್ಲಿ ಕಾರ್ಮಿಕ ಆಯವ್ಯಯವನ್ನು ಸಿದ್ಧಪಡಿಸಲಾಗುತ್ತಿತ್ತು. ಈ ಬಾರಿ 2026-27ನೆ ಆರ್ಥಿಕ ಸಾಲಿನ ಕಾರ್ಮಿಕ ಆಯವ್ಯಯವನ್ನು ವೈಜ್ಞಾನಿಕವಾಗಿ ಸಿದ್ದಪಡಿಸಲು ʼಯುಕ್ತಧಾರʼ ತಂತ್ರಾಂಶವನ್ನು ಜಾರಿಗೊಳಿಸಲಾಗಿದೆ ಎಂದೂ ಸಚಿವರು ಮಾಹಿತಿ ನೀಡಿದ್ದಾರೆ.

ಪರೀಕ್ಷಾರ್ಥ ತಾಲ್ಲೂಕಿಗೊಂದು ಗ್ರಾಮ ಪಂಚಾಯತಿಯಲ್ಲಿ ಈಗಾಗಲೆ ತಂತ್ರಾಂಶದಡಿ ಆಯವ್ಯಯವನ್ನು ಸಿದ್ದಪಡಿಸಲಾಗಿತ್ತು, ಕಾರ್ಮಿಕ ಆಯವ್ಯಯವನ್ನು ಸಿದ್ದಪಡಿಸಲು ಎಲ್ಲಾ ಗ್ರಾಮಪಂಚಾಯಿತಿಗಳಿಗೂ ಈ ತಂತ್ರಾಂಶ ಸೌಲಭ್ಯವನ್ನು ವಿಸ್ತರಿಸಲಾಗಿದ್ದು ಈ ತಂತ್ರಾಂಶದ ಮೂಲಕವೇ ಮುಂದಿನ ಆಯವ್ಯಯ ಸಿದ್ದಪಡಿಸಬೇಕಿದೆ ಎಂದು ತಿಳಿಸಿರುವ ಸಚಿವರು ಈಗಾಗಲೇ ಅನುಷ್ಠಾನ ಅಧಿಕಾರಿಗಳಿಗೆ ತಾಂತ್ರಿಕ ತರಬೇತಿ ನೀಡಲಾಗಿದೆ. ಮಹಾತ್ಮಗಾಂಧಿ ನರೇಗಾ ಯೋಜನೆಯ 2026-27ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸುವ ಉದ್ದೇಶದಿಂದ “ಯುಕ್ತಧಾರ” ಮೂಲಕ ಸಿದ್ದಪಡಿಸಲಾದ ಕಾರ್ಮಿಕ ಆಯವ್ಯಯವನ್ನು ಗ್ರಾಮ ಸಭೆಯಲ್ಲಿ ಸಿದ್ಧಪಡಿಸಲು ಗ್ರಾಮ ಪಂಚಾಯತಿಗಳ ಅಭಿವೃದ್ಧಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕಾಗಿದೆ ಎಂದೂ ಸಚಿವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು