4:01 PM Wednesday12 - November 2025
ಬ್ರೇಕಿಂಗ್ ನ್ಯೂಸ್
ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ

ಇತ್ತೀಚಿನ ಸುದ್ದಿ

ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

16/10/2025, 10:07

ಬೆಂಗಳೂರು(reporterkarnataka.com): ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ʼಗ್ರಾಮಾಭಿವೃದ್ಧಿಯ ಹೊಸ ಹಾದಿ-ಯುಕ್ತಧಾರʼ ಮಾರ್ಗಸೂಚಿಗಳನ್ನು ಅನುಸರಿಸಿ 2026-27ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸುವ ಸಂಬಂಧ ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಿಗೆ ಮಾರ್ಗದರ್ಶನ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಅಕುಶಲ ಕೆಲಸಕ್ಕೆ ಬೇಡಿಕೆ ಸಲ್ಲಿಸುವ ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ವರ್ಷದಲ್ಲಿ 100 ದಿನಗಳ ಅಕುಶಲ ಕೆಲಸ ಖಾತ್ರಿ ಪಡಿಸುತ್ತದೆ. ಕೂಲಿಕಾರರಿಗೆ ಸಕಾಲದಲ್ಲಿ ಅಕುಶಲ ಕೆಲಸ ಒದಗಿಸುವುದರೊಂದಿಗೆ ಬಹುಬಾಳಿಕೆ ಆಸ್ತಿಗಳನ್ನು ಸೃಜಿಸಲಾಗುತ್ತದೆ. ಹೀಗೆ ಸೃಜಿಸುವ ಆಸ್ತಿಗಳನ್ನು ಪ್ರತಿ ವರ್ಷ ಅಕ್ಟೋಬರ್‌ ಮಾಹೆಯಿಂದ ನವೆಂಬರ್‌ ಮಾಹೆವರೆಗೆ ಎಲ್ಲಾ ಗ್ರಾಮಪಂಚಾಯಿತಿಗಳಲ್ಲಿ ಕಾರ್ಮಿಕ ಆಯವ್ಯಯವನ್ನು ಸಿದ್ಧಪಡಿಸಲಾಗುತ್ತಿತ್ತು. ಈ ಬಾರಿ 2026-27ನೆ ಆರ್ಥಿಕ ಸಾಲಿನ ಕಾರ್ಮಿಕ ಆಯವ್ಯಯವನ್ನು ವೈಜ್ಞಾನಿಕವಾಗಿ ಸಿದ್ದಪಡಿಸಲು ʼಯುಕ್ತಧಾರʼ ತಂತ್ರಾಂಶವನ್ನು ಜಾರಿಗೊಳಿಸಲಾಗಿದೆ ಎಂದೂ ಸಚಿವರು ಮಾಹಿತಿ ನೀಡಿದ್ದಾರೆ.

ಪರೀಕ್ಷಾರ್ಥ ತಾಲ್ಲೂಕಿಗೊಂದು ಗ್ರಾಮ ಪಂಚಾಯತಿಯಲ್ಲಿ ಈಗಾಗಲೆ ತಂತ್ರಾಂಶದಡಿ ಆಯವ್ಯಯವನ್ನು ಸಿದ್ದಪಡಿಸಲಾಗಿತ್ತು, ಕಾರ್ಮಿಕ ಆಯವ್ಯಯವನ್ನು ಸಿದ್ದಪಡಿಸಲು ಎಲ್ಲಾ ಗ್ರಾಮಪಂಚಾಯಿತಿಗಳಿಗೂ ಈ ತಂತ್ರಾಂಶ ಸೌಲಭ್ಯವನ್ನು ವಿಸ್ತರಿಸಲಾಗಿದ್ದು ಈ ತಂತ್ರಾಂಶದ ಮೂಲಕವೇ ಮುಂದಿನ ಆಯವ್ಯಯ ಸಿದ್ದಪಡಿಸಬೇಕಿದೆ ಎಂದು ತಿಳಿಸಿರುವ ಸಚಿವರು ಈಗಾಗಲೇ ಅನುಷ್ಠಾನ ಅಧಿಕಾರಿಗಳಿಗೆ ತಾಂತ್ರಿಕ ತರಬೇತಿ ನೀಡಲಾಗಿದೆ. ಮಹಾತ್ಮಗಾಂಧಿ ನರೇಗಾ ಯೋಜನೆಯ 2026-27ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸುವ ಉದ್ದೇಶದಿಂದ “ಯುಕ್ತಧಾರ” ಮೂಲಕ ಸಿದ್ದಪಡಿಸಲಾದ ಕಾರ್ಮಿಕ ಆಯವ್ಯಯವನ್ನು ಗ್ರಾಮ ಸಭೆಯಲ್ಲಿ ಸಿದ್ಧಪಡಿಸಲು ಗ್ರಾಮ ಪಂಚಾಯತಿಗಳ ಅಭಿವೃದ್ಧಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕಾಗಿದೆ ಎಂದೂ ಸಚಿವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು