7:26 AM Saturday10 - January 2026
ಬ್ರೇಕಿಂಗ್ ನ್ಯೂಸ್
ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ…

ಇತ್ತೀಚಿನ ಸುದ್ದಿ

ಲೇಡಿಗೋಶನ್ ಆಸ್ಪತ್ರೆಯಲ್ಲಿ ಗುಟುಕು ನೀರಿಲ್ಲ!: ಬಾಣಂತಿ-ಮಕ್ಕಳ ಪರದಾಟ; ಅಚಾನಕ್ ಸಮಸ್ಯೆ ಎನ್ನುತ್ತಾರೆ ಶಾಸಕರು

08/08/2021, 20:14

ಮಂಗಳೂರು(reporterkarnataka.com): ಶತಮಾನದ ಇತಿಹಾಸವಿರುವ ಜೆಲ್ಲೆಯ ಹೆರಿಗೆ ಆಸ್ಪತ್ರೆಯಾದ ಮಂಗಳೂರು ಲೇಡಿಗೋಶನ್ ಆಸ್ಪತ್ರೆ ನೀರಿನ ಸಮಸ್ಯೆಯಿಂದ ತತ್ತರಿಸಿ ಹೋಗಿದೆ. ನೀರಿಲ್ಲದೆ 100ಕ್ಕೂ ಹೆಚ್ಚು ಬಾಣಂತಿಯರು ಹಾಗೂ ನವಜಾತ ಶಿಶುಗಳು ತೊಂದರೆಗೀಡಾಗಿದ್ದಾರೆ.

ಲೇಡಿಗೋಶನ್ ಆಸ್ಪತ್ರೆಗೆ ಜಿಲ್ಲೆಯ ವಿವಿಧ ಕಡೆಗಳಿಂದ ಹಾಗೂ ಹೊರ ಜಿಲ್ಲೆಗಳಿಂದ ಹೆರಿಗೆಗಾಗಿ ಆಗಮಿಸುತ್ತಾರೆ. ಇತರ ಕಾಯಿಲೆಗಳ ಚಿಕಿತ್ಸೆಗೂ ಮಹಿಳೆಯರು ಇಲ್ಲಿ ದಾಖಲಾಗುತ್ತಾರೆ. ಪ್ರಸ್ತುತ 100ಕ್ಕೂ ಅಧಿಕ ಬಾಣಂತಿಯರು ಹಾಗೂ ಅವರ ನವಜಾತ ಶಿಶುಗಳು ಆರೈಕೆ ಪಡೆಯುತ್ತಿದೆ. ಇತರ ಕಾಯಿಲೆಗಳ ಚಿಕಿತ್ಸೆಗೆ ಬಂದವರು ಸೇರಿ 250ಕ್ಕೂ ಹೆಚ್ಚು ಮಹಿಳೆಯರು ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗೆ ಹೆರಿಗೆಗೆ ದಾಖಲಾದ ಗರ್ಭಿಣಿಯರು ಇದ್ದಾರೆ. ಆದರೆ ಏನೂ ಮಾಡುವುದು ಮನುಷ್ಯರ ಮೂಲಭೂತ ಅವಶ್ಯಕತೆಗಳಲ್ಲಿ ಒಂದಾಗಿರುವ ನೀರು ಸರಬರಾಜು ನಿಂತು ಹೋಗಿದೆ. ಕಾರಣ ಏನೆಂದರೆ ಲೇಡಿಗೋಶನ್ ಆಸ್ಪತ್ರೆಯ ಓವರ್ ಹೆಡ್ ಟ್ಯಾಂಕ್ ಗೆ ನೀರು ಲಿಫ್ಟ್ ಮಾಡುವ  ಪಂಪ್ ಹಾಳಾಗಿದೆ. ಹಾಗಾದರೆ ಇಷ್ಟೊಂದು ದೊಡ್ಡ ಆಸ್ಪತ್ರೆಗೆ ಸ್ಟಾಂಡ್ ಬೈ ಪಂಪಿನ ವ್ಯವಸ್ಥೆ ಇಲ್ಲವೇ ಎಂದು ನೀವು ಯೋಚಿಸಬಹುದು. ಪರ್ಯಾಯ ಪಂಪ್ ಸೆಟ್ ನ ವ್ಯವಸ್ಥೆಯೂ ಇದೆ. ಆದರೆ ಅದು ಕೂಡ ಈ ಮುನ್ನವೇ ಕೆಟ್ಟು ಹೋಗಿದೆ. ಅದನ್ನು ಇನ್ನೂ ದುರಸ್ತಿ ಮಾಡಿಲ್ಲ. ಈಗ ಇನ್ನೊಂದು ಪಂಪ್ ಸೆಟ್ ಕೂಡ ಕೆಟ್ಟು ಹೋಗಿದೆ. ಇದಕ್ಕೆಲ್ಲ ಲೇಡಿಗೋಶನ್ ಆಸ್ಪತ್ರೆ ಆಡಳಿತ ಹಾಗೂ ಜಿಲ್ಲಾಡಳಿತದ ನಿರ್ಲಕ್ಷ್ಯ ವೇ ಕಾರಣವಾಗಿದೆ ಎಂದು ಸಾರ್ವಜನಿಕರು ದೂರುತ್ತಾರೆ.

ಇದೊಂದು ಅಚಾನಕ್ ಆಗಿರುವ ಸಮಸ್ಯೆ. ಇದರ ಬಗ್ಗೆ ರಾಜಕೀಯ ಬೇಡ. ಹೊಸ ಪಂಪ್ ಅಳವಡಿಸಲಾಗುವುದು ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದ್ದಾರೆ.

ಪಂಪ್ ಸೆಟ್ ಕೆಟ್ಟು ಹೋಗಿದೆ. ವೀಕೆಂಡ್ ಲಾಕ್ ಡೌನ್ ನಿಂದ ಅಂಗಡಿಗಳು ಮುಚ್ಚಿರುವುದರಿಂದ ಪಂಪ್ ಸೆಟ್ ನ ಬಿಡಿಭಾಗ ಸಿಗಲಿಲ್ಲ ಎಂದು ಮೇಯರ್ ಪ್ರೇಮಾನಂದ ಶೆಟ್ಟಿ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು