10:46 PM Sunday5 - October 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ

ಇತ್ತೀಚಿನ ಸುದ್ದಿ

ಲೇಡಿಗೋಶನ್ ಆಸ್ಪತ್ರೆಯಲ್ಲಿ ಗುಟುಕು ನೀರಿಲ್ಲ!: ಬಾಣಂತಿ-ಮಕ್ಕಳ ಪರದಾಟ; ಅಚಾನಕ್ ಸಮಸ್ಯೆ ಎನ್ನುತ್ತಾರೆ ಶಾಸಕರು

08/08/2021, 20:14

ಮಂಗಳೂರು(reporterkarnataka.com): ಶತಮಾನದ ಇತಿಹಾಸವಿರುವ ಜೆಲ್ಲೆಯ ಹೆರಿಗೆ ಆಸ್ಪತ್ರೆಯಾದ ಮಂಗಳೂರು ಲೇಡಿಗೋಶನ್ ಆಸ್ಪತ್ರೆ ನೀರಿನ ಸಮಸ್ಯೆಯಿಂದ ತತ್ತರಿಸಿ ಹೋಗಿದೆ. ನೀರಿಲ್ಲದೆ 100ಕ್ಕೂ ಹೆಚ್ಚು ಬಾಣಂತಿಯರು ಹಾಗೂ ನವಜಾತ ಶಿಶುಗಳು ತೊಂದರೆಗೀಡಾಗಿದ್ದಾರೆ.

ಲೇಡಿಗೋಶನ್ ಆಸ್ಪತ್ರೆಗೆ ಜಿಲ್ಲೆಯ ವಿವಿಧ ಕಡೆಗಳಿಂದ ಹಾಗೂ ಹೊರ ಜಿಲ್ಲೆಗಳಿಂದ ಹೆರಿಗೆಗಾಗಿ ಆಗಮಿಸುತ್ತಾರೆ. ಇತರ ಕಾಯಿಲೆಗಳ ಚಿಕಿತ್ಸೆಗೂ ಮಹಿಳೆಯರು ಇಲ್ಲಿ ದಾಖಲಾಗುತ್ತಾರೆ. ಪ್ರಸ್ತುತ 100ಕ್ಕೂ ಅಧಿಕ ಬಾಣಂತಿಯರು ಹಾಗೂ ಅವರ ನವಜಾತ ಶಿಶುಗಳು ಆರೈಕೆ ಪಡೆಯುತ್ತಿದೆ. ಇತರ ಕಾಯಿಲೆಗಳ ಚಿಕಿತ್ಸೆಗೆ ಬಂದವರು ಸೇರಿ 250ಕ್ಕೂ ಹೆಚ್ಚು ಮಹಿಳೆಯರು ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗೆ ಹೆರಿಗೆಗೆ ದಾಖಲಾದ ಗರ್ಭಿಣಿಯರು ಇದ್ದಾರೆ. ಆದರೆ ಏನೂ ಮಾಡುವುದು ಮನುಷ್ಯರ ಮೂಲಭೂತ ಅವಶ್ಯಕತೆಗಳಲ್ಲಿ ಒಂದಾಗಿರುವ ನೀರು ಸರಬರಾಜು ನಿಂತು ಹೋಗಿದೆ. ಕಾರಣ ಏನೆಂದರೆ ಲೇಡಿಗೋಶನ್ ಆಸ್ಪತ್ರೆಯ ಓವರ್ ಹೆಡ್ ಟ್ಯಾಂಕ್ ಗೆ ನೀರು ಲಿಫ್ಟ್ ಮಾಡುವ  ಪಂಪ್ ಹಾಳಾಗಿದೆ. ಹಾಗಾದರೆ ಇಷ್ಟೊಂದು ದೊಡ್ಡ ಆಸ್ಪತ್ರೆಗೆ ಸ್ಟಾಂಡ್ ಬೈ ಪಂಪಿನ ವ್ಯವಸ್ಥೆ ಇಲ್ಲವೇ ಎಂದು ನೀವು ಯೋಚಿಸಬಹುದು. ಪರ್ಯಾಯ ಪಂಪ್ ಸೆಟ್ ನ ವ್ಯವಸ್ಥೆಯೂ ಇದೆ. ಆದರೆ ಅದು ಕೂಡ ಈ ಮುನ್ನವೇ ಕೆಟ್ಟು ಹೋಗಿದೆ. ಅದನ್ನು ಇನ್ನೂ ದುರಸ್ತಿ ಮಾಡಿಲ್ಲ. ಈಗ ಇನ್ನೊಂದು ಪಂಪ್ ಸೆಟ್ ಕೂಡ ಕೆಟ್ಟು ಹೋಗಿದೆ. ಇದಕ್ಕೆಲ್ಲ ಲೇಡಿಗೋಶನ್ ಆಸ್ಪತ್ರೆ ಆಡಳಿತ ಹಾಗೂ ಜಿಲ್ಲಾಡಳಿತದ ನಿರ್ಲಕ್ಷ್ಯ ವೇ ಕಾರಣವಾಗಿದೆ ಎಂದು ಸಾರ್ವಜನಿಕರು ದೂರುತ್ತಾರೆ.

ಇದೊಂದು ಅಚಾನಕ್ ಆಗಿರುವ ಸಮಸ್ಯೆ. ಇದರ ಬಗ್ಗೆ ರಾಜಕೀಯ ಬೇಡ. ಹೊಸ ಪಂಪ್ ಅಳವಡಿಸಲಾಗುವುದು ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದ್ದಾರೆ.

ಪಂಪ್ ಸೆಟ್ ಕೆಟ್ಟು ಹೋಗಿದೆ. ವೀಕೆಂಡ್ ಲಾಕ್ ಡೌನ್ ನಿಂದ ಅಂಗಡಿಗಳು ಮುಚ್ಚಿರುವುದರಿಂದ ಪಂಪ್ ಸೆಟ್ ನ ಬಿಡಿಭಾಗ ಸಿಗಲಿಲ್ಲ ಎಂದು ಮೇಯರ್ ಪ್ರೇಮಾನಂದ ಶೆಟ್ಟಿ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು