9:54 AM Sunday17 - August 2025
ಬ್ರೇಕಿಂಗ್ ನ್ಯೂಸ್
Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ

ಇತ್ತೀಚಿನ ಸುದ್ದಿ

ಲೇಡಿಗೋಶನ್ ಆಸ್ಪತ್ರೆಯಲ್ಲಿ ಗುಟುಕು ನೀರಿಲ್ಲ!: ಬಾಣಂತಿ-ಮಕ್ಕಳ ಪರದಾಟ; ಅಚಾನಕ್ ಸಮಸ್ಯೆ ಎನ್ನುತ್ತಾರೆ ಶಾಸಕರು

08/08/2021, 20:14

ಮಂಗಳೂರು(reporterkarnataka.com): ಶತಮಾನದ ಇತಿಹಾಸವಿರುವ ಜೆಲ್ಲೆಯ ಹೆರಿಗೆ ಆಸ್ಪತ್ರೆಯಾದ ಮಂಗಳೂರು ಲೇಡಿಗೋಶನ್ ಆಸ್ಪತ್ರೆ ನೀರಿನ ಸಮಸ್ಯೆಯಿಂದ ತತ್ತರಿಸಿ ಹೋಗಿದೆ. ನೀರಿಲ್ಲದೆ 100ಕ್ಕೂ ಹೆಚ್ಚು ಬಾಣಂತಿಯರು ಹಾಗೂ ನವಜಾತ ಶಿಶುಗಳು ತೊಂದರೆಗೀಡಾಗಿದ್ದಾರೆ.

ಲೇಡಿಗೋಶನ್ ಆಸ್ಪತ್ರೆಗೆ ಜಿಲ್ಲೆಯ ವಿವಿಧ ಕಡೆಗಳಿಂದ ಹಾಗೂ ಹೊರ ಜಿಲ್ಲೆಗಳಿಂದ ಹೆರಿಗೆಗಾಗಿ ಆಗಮಿಸುತ್ತಾರೆ. ಇತರ ಕಾಯಿಲೆಗಳ ಚಿಕಿತ್ಸೆಗೂ ಮಹಿಳೆಯರು ಇಲ್ಲಿ ದಾಖಲಾಗುತ್ತಾರೆ. ಪ್ರಸ್ತುತ 100ಕ್ಕೂ ಅಧಿಕ ಬಾಣಂತಿಯರು ಹಾಗೂ ಅವರ ನವಜಾತ ಶಿಶುಗಳು ಆರೈಕೆ ಪಡೆಯುತ್ತಿದೆ. ಇತರ ಕಾಯಿಲೆಗಳ ಚಿಕಿತ್ಸೆಗೆ ಬಂದವರು ಸೇರಿ 250ಕ್ಕೂ ಹೆಚ್ಚು ಮಹಿಳೆಯರು ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗೆ ಹೆರಿಗೆಗೆ ದಾಖಲಾದ ಗರ್ಭಿಣಿಯರು ಇದ್ದಾರೆ. ಆದರೆ ಏನೂ ಮಾಡುವುದು ಮನುಷ್ಯರ ಮೂಲಭೂತ ಅವಶ್ಯಕತೆಗಳಲ್ಲಿ ಒಂದಾಗಿರುವ ನೀರು ಸರಬರಾಜು ನಿಂತು ಹೋಗಿದೆ. ಕಾರಣ ಏನೆಂದರೆ ಲೇಡಿಗೋಶನ್ ಆಸ್ಪತ್ರೆಯ ಓವರ್ ಹೆಡ್ ಟ್ಯಾಂಕ್ ಗೆ ನೀರು ಲಿಫ್ಟ್ ಮಾಡುವ  ಪಂಪ್ ಹಾಳಾಗಿದೆ. ಹಾಗಾದರೆ ಇಷ್ಟೊಂದು ದೊಡ್ಡ ಆಸ್ಪತ್ರೆಗೆ ಸ್ಟಾಂಡ್ ಬೈ ಪಂಪಿನ ವ್ಯವಸ್ಥೆ ಇಲ್ಲವೇ ಎಂದು ನೀವು ಯೋಚಿಸಬಹುದು. ಪರ್ಯಾಯ ಪಂಪ್ ಸೆಟ್ ನ ವ್ಯವಸ್ಥೆಯೂ ಇದೆ. ಆದರೆ ಅದು ಕೂಡ ಈ ಮುನ್ನವೇ ಕೆಟ್ಟು ಹೋಗಿದೆ. ಅದನ್ನು ಇನ್ನೂ ದುರಸ್ತಿ ಮಾಡಿಲ್ಲ. ಈಗ ಇನ್ನೊಂದು ಪಂಪ್ ಸೆಟ್ ಕೂಡ ಕೆಟ್ಟು ಹೋಗಿದೆ. ಇದಕ್ಕೆಲ್ಲ ಲೇಡಿಗೋಶನ್ ಆಸ್ಪತ್ರೆ ಆಡಳಿತ ಹಾಗೂ ಜಿಲ್ಲಾಡಳಿತದ ನಿರ್ಲಕ್ಷ್ಯ ವೇ ಕಾರಣವಾಗಿದೆ ಎಂದು ಸಾರ್ವಜನಿಕರು ದೂರುತ್ತಾರೆ.

ಇದೊಂದು ಅಚಾನಕ್ ಆಗಿರುವ ಸಮಸ್ಯೆ. ಇದರ ಬಗ್ಗೆ ರಾಜಕೀಯ ಬೇಡ. ಹೊಸ ಪಂಪ್ ಅಳವಡಿಸಲಾಗುವುದು ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದ್ದಾರೆ.

ಪಂಪ್ ಸೆಟ್ ಕೆಟ್ಟು ಹೋಗಿದೆ. ವೀಕೆಂಡ್ ಲಾಕ್ ಡೌನ್ ನಿಂದ ಅಂಗಡಿಗಳು ಮುಚ್ಚಿರುವುದರಿಂದ ಪಂಪ್ ಸೆಟ್ ನ ಬಿಡಿಭಾಗ ಸಿಗಲಿಲ್ಲ ಎಂದು ಮೇಯರ್ ಪ್ರೇಮಾನಂದ ಶೆಟ್ಟಿ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು