6:36 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಲೈಂಗಿಕ ಕಿರುಕುಳ ಆರೋಪ: ಕೊಟ್ಟೂರು ಠಾಣೆಯ ಹೆಡ್ ಕಾನ್ ಸ್ಟೇಬಲ್ ಬಂಧನ

24/09/2022, 22:21

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಕೊಟ್ಟೂರು ಪೊಲೀಸ್ ಠಾಣೆಯ ಹೆಡ್​​ ಕಾನ್ಸ್​​ಟೇಬಲ್​​ ಎಂ.ಮಾರಪ್ಪ ಎಂಬುವರನ್ನು ಬಂಧಿಸಲಾಗಿದೆ.

ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ದೂರಿನ ಮೇರೆಗೆ ಕೊಟ್ಟೂರು ಪೊಲೀಸ್ ಠಾಣೆಯ ಹೆಡ್​​ ಕಾನ್ಸ್​​ಟೇಬಲ್​​ ಎಂ ಮಾರಪ್ಪ ಎಂಬುವರನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ.

ಘಟನೆ ಬೆನ್ನಲ್ಲೇ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್‌ ಕೆ. ಆದೇಶ ಹೊರಡಿಸಿದ್ದಾರೆ.

ಪ್ರಕರಣದ ವಿವರ: ದೂರುದಾರ ಮಹಿಳೆ ಹಣದ ವಿಚಾರವಾಗಿ ಚಿಕ್ಕಪ್ಪನ ಮಗಳ ಜೊತೆ ಜಗಳವಾಡಿದ್ದಳು. ಈ ಕುರಿತು ಮಹಿಳೆ ಪಟ್ಟಣದ ಪೊಲೀಸ್ ಠಾಣೆಗೆ ಸೆ.18 ರಂದು ದೂರು ಕೊಡಲು ಹೋಗಿದ್ದಾರೆ. ಆಗ ಕರ್ತವ್ಯದಲ್ಲಿದ್ದ ಹೆಡ್​​ ಕಾನ್ಸ್​​ಟೇಬಲ್​​ ಮಾರಪ್ಪ ಹೆಸರು ಮತ್ತು ವಿಳಾಸ ಕೊಟ್ಟು ಹೋಗಿ ನಂತರ ನಿಮ್ಮನ್ನು ಸಂಪರ್ಕಿಸುವೆ ಎಂದು ಹೇಳಿದ್ದಾರೆ.

ಸೆ. 21ರಂದು ಮಹಿಳೆಗೆ ಕರೆ ಮಾಡಿದ ಮಾರಪ್ಪ, ಪ್ರಕರಣದಲ್ಲಿ ಸಹಾಯ ಮಾಡುವುದಾಗಿ ತಿಳಿಸಿ, ನಿಮ್ಮ ಮನೆಯಲ್ಲಿ ಯಾರ‍್ಯಾರು ಇದ್ದೀರಿ ಎಂದು ಕೇಳಿದ್ದಾನೆ. ಅಲ್ಲದೇ ನಿನ್ನ ಮೇಲೆ ಮನಸಾಗಿದೆ. ನಾನು ನೀನು ದಾವಣಗೆರೆ ಮತ್ತಿತರ ಕಡೆ ಎಲ್ಲಾದರು ಸೇರೋಣ ಎಂದು ಲೈಂಗಿಕ ಸಮ್ಮತಿಗೆ ಒತ್ತಾಯಿಸಿ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.

ಸಂಬಂಧಿಸಿದಂತೆ ದೂರುದಾರ ಮಹಿಳೆ, ಕೊಟ್ಟೂರು ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಮಹಿಳೆ ನೀಡಿರುವ ದೂರು ಹಾಗೂ ಪೊಲೀಸ್ ಅಧಿಕಾರಿ ನೀಡಿರುವ ದೂರನ್ನು ಸಬ್ ಇನ್ಸ್​​ಪೆಕ್ಟರ್ ವಿಜಯ್‌ ಕೃಷ್ಣ ತನಿಖೆ ಕೈಗೊಂಡಿದ್ದಾರೆ. ಸದ್ಯ ಆರೋಪಿ ಮಾರಪ್ಪ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸೇವೆಯಿಂದಲೂ ಅಮಾನತುಗೊಳಿಸಲಾಗಿದೆ ಎಂದು ಎಸ್​ಪಿ ಡಾ. ಅರುಣ್‌ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು