5:24 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಲೈಂಗಿಕ ಕಿರುಕುಳ ಆರೋಪ: ಕೊಟ್ಟೂರು ಠಾಣೆಯ ಹೆಡ್ ಕಾನ್ ಸ್ಟೇಬಲ್ ಬಂಧನ

24/09/2022, 22:21

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಕೊಟ್ಟೂರು ಪೊಲೀಸ್ ಠಾಣೆಯ ಹೆಡ್​​ ಕಾನ್ಸ್​​ಟೇಬಲ್​​ ಎಂ.ಮಾರಪ್ಪ ಎಂಬುವರನ್ನು ಬಂಧಿಸಲಾಗಿದೆ.

ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ದೂರಿನ ಮೇರೆಗೆ ಕೊಟ್ಟೂರು ಪೊಲೀಸ್ ಠಾಣೆಯ ಹೆಡ್​​ ಕಾನ್ಸ್​​ಟೇಬಲ್​​ ಎಂ ಮಾರಪ್ಪ ಎಂಬುವರನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ.

ಘಟನೆ ಬೆನ್ನಲ್ಲೇ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್‌ ಕೆ. ಆದೇಶ ಹೊರಡಿಸಿದ್ದಾರೆ.

ಪ್ರಕರಣದ ವಿವರ: ದೂರುದಾರ ಮಹಿಳೆ ಹಣದ ವಿಚಾರವಾಗಿ ಚಿಕ್ಕಪ್ಪನ ಮಗಳ ಜೊತೆ ಜಗಳವಾಡಿದ್ದಳು. ಈ ಕುರಿತು ಮಹಿಳೆ ಪಟ್ಟಣದ ಪೊಲೀಸ್ ಠಾಣೆಗೆ ಸೆ.18 ರಂದು ದೂರು ಕೊಡಲು ಹೋಗಿದ್ದಾರೆ. ಆಗ ಕರ್ತವ್ಯದಲ್ಲಿದ್ದ ಹೆಡ್​​ ಕಾನ್ಸ್​​ಟೇಬಲ್​​ ಮಾರಪ್ಪ ಹೆಸರು ಮತ್ತು ವಿಳಾಸ ಕೊಟ್ಟು ಹೋಗಿ ನಂತರ ನಿಮ್ಮನ್ನು ಸಂಪರ್ಕಿಸುವೆ ಎಂದು ಹೇಳಿದ್ದಾರೆ.

ಸೆ. 21ರಂದು ಮಹಿಳೆಗೆ ಕರೆ ಮಾಡಿದ ಮಾರಪ್ಪ, ಪ್ರಕರಣದಲ್ಲಿ ಸಹಾಯ ಮಾಡುವುದಾಗಿ ತಿಳಿಸಿ, ನಿಮ್ಮ ಮನೆಯಲ್ಲಿ ಯಾರ‍್ಯಾರು ಇದ್ದೀರಿ ಎಂದು ಕೇಳಿದ್ದಾನೆ. ಅಲ್ಲದೇ ನಿನ್ನ ಮೇಲೆ ಮನಸಾಗಿದೆ. ನಾನು ನೀನು ದಾವಣಗೆರೆ ಮತ್ತಿತರ ಕಡೆ ಎಲ್ಲಾದರು ಸೇರೋಣ ಎಂದು ಲೈಂಗಿಕ ಸಮ್ಮತಿಗೆ ಒತ್ತಾಯಿಸಿ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.

ಸಂಬಂಧಿಸಿದಂತೆ ದೂರುದಾರ ಮಹಿಳೆ, ಕೊಟ್ಟೂರು ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಮಹಿಳೆ ನೀಡಿರುವ ದೂರು ಹಾಗೂ ಪೊಲೀಸ್ ಅಧಿಕಾರಿ ನೀಡಿರುವ ದೂರನ್ನು ಸಬ್ ಇನ್ಸ್​​ಪೆಕ್ಟರ್ ವಿಜಯ್‌ ಕೃಷ್ಣ ತನಿಖೆ ಕೈಗೊಂಡಿದ್ದಾರೆ. ಸದ್ಯ ಆರೋಪಿ ಮಾರಪ್ಪ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸೇವೆಯಿಂದಲೂ ಅಮಾನತುಗೊಳಿಸಲಾಗಿದೆ ಎಂದು ಎಸ್​ಪಿ ಡಾ. ಅರುಣ್‌ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು