5:34 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಲಂಚ ಬೇಡಿಕೆಯಿಟ್ಟ ಆರ್ ಟಿಒ ಅಧಿಕಾರಿ: ಲಂಚ ಸ್ವೀಕರಿಸುತ್ತಿದ್ದಾಗಲೇ ಸಿಕ್ಕಿ ಬಿದ್ದ ಅಟೆಂಡರ್

04/09/2023, 23:10

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಲಂಚ ಪಡೆಯುತ್ತಿದ್ದ ಮಹಿಳಾ ಆರ್ ಟಿಒ ಹಾಗೂ ಮಹಿಳಾ ಅಟೆಂಡ್ ವಿರುದ್ಧ ಲೋಕಾಯುಕ್ತ ಪೊಲೀಸರು ಕೇಸು ದಾಖಲಿಸಿದ್ದು, ಅಟೆಂಡರ್ ಅವರನ್ನು ವಶಕ್ಕೆ ತೆಗೆದುಕೊಂಡ ಘಟನೆ ಚಿಕ್ಕಮಗಳೂರು ಆರ್.ಟಿ.ಓ ಕಚೇರಿಯಲ್ಲಿ ನಡೆದಿದೆ.
3000 ಲಂಚ ಪಡೆಯುವಾಗ ಆರ್ ಟಿಒ ಅಟೆಂಡರ್ ಲತಾ ಅವರು ರೆಡ್ ಹ್ಯಾಂಡಾಗಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಅಟೆಂಡರ್ ಲತಾ ಹಾಗೂ ಆರ್.ಟಿ.ಓ. ಮಧುರಾ ವಿರುದ್ಧ ಪ್ರಕರಣ ದಾಖಲಾಗಿದೆ.
ರೆಂಟೆಡ್ ಬೈಕಿಗೆ ಪರವಾನಗಿ ಮಾಡಿಕೊಡಲು 8 ಸಾವಿರ ಲಂಚಕ್ಕೆ ಬೇಡಿಕೆಯನ್ನು ಆರ್.ಟಿ.ಓ. ಅಧಿಕಾರಿ ಮಧುರಾ ಇಟ್ಟಿದ್ದರು ಎಂದು ಆರೋಪಿಸಲಾಗಿದೆ. ರಾಜ್ಯಾದ್ಯಂತ ಸಂಚರಿಸಲು ಅನುಮತಿ ನೀಡುವಂತೆ ಬೈಕ್ ಶಾಪ್ ಓನರ್ ಮನವಿ ಮಾಡಿದ್ದರು. 1 ಬೈಕಿಗೆ 500 ರಂತೆ 8 ಬೈಕಿಗೆ 4000 ಸರ್ಕಾರಿ ಫೀಸ್ ಕಟ್ಟಿದ್ದರು.
ಫೈಲ್ ಪೆಂಡಿಂಗ್ ಇಟ್ಟಿದ್ದ ಆರ್ ಟಿಒ ಅಧಿಕಾರಿ ಬೈಕಿಗೆ 1000ದಂತೆ 8 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಆರ್ ಟಿಒ ಮಧುರಾ
ಅಡೆಂಡರ್ ಮೂಲಕ ಡೀಲ್ ನಡೆಸುತ್ತಿದ್ದರು ಎನ್ನಲಾಗಿದೆ.
ಇದೀಗ ಹಣ ಪಡೆಯುವಾಗ ಅಟೆಂಡರ್ ಲತಾ ಅವರು ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದಿದ್ದಾರೆ.
ಅಟೆಂಡರ್ ಲತಾ, ಆರ್.ಟಿ.ಓ. ಮಧುರಾ ವಿರುದ್ಧ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು