6:29 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಲಂಚ ಪ್ರಕರಣ: ಮಂಗಳೂರು ತಹಶೀಲ್ದಾರ್ ಪುರಂದರ ಹೆಗ್ಡೆ, ಸಹಾಯಕ ಅಧಿಕಾರಿ ಶಿವಾನಂದ ಲೋಕಾಯುಕ್ತ ಬಲೆಗೆ

01/10/2022, 12:36

ಮಂಗಳೂರು(reporterkarnataka.com): ಲಂಚ ಸ್ವೀಕರಿಸಿದ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳೂರು ತಹಶೀಲ್ದಾರ್ ಹಾಗೂ ಸಹಾಯಕ ಅಧಿಕಾರಿಯನ್ನು ಬಂಧಿಸಿದ್ದಾರೆ.
ತಹಶೀಲ್ದಾರ್ ಪುರಂದರ ಹೆಗ್ಡೆ ಹಾಗೂ ಸಹಾಯಕ ಅಧಿಕಾರಿ ಶಿವಾನಂದ ನಾಟೇಕರ್ ಅವರನ್ನು ಬಂಧಿಸಲಾಗಿದ್ದು, ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ.
ಜಾಗ ಮಾರಾಟದ ವಿಷಯದಲ್ಲಿ ನಿರಕ್ಷೇಪಣಾ ಪತ್ರ ಪಡೆಯಲು ಬಂದವರಿಗೆ 10 ಸಾವಿರ ರೂ. ನೀಡುವಂತೆ ಶಿವಾನಂದ ಅವರು ಬೇಡಿಕೆ ಇಟ್ಟಿದ್ದರು. ಅದರಂತೆ 10 ಸಾವಿರ ರೂ. ಲಂಚ ನೀಡುತ್ತಿದ್ದ ವೇಳೆ ಶಿವಾನಂದ ಅವರನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದರು. ಶಿವಾನಂದ ಅವರ ವಿಚಾರಣೆ ನಡೆಸುತ್ತಿದ್ದ ವೇಳೆ ಅವರು ತಾನು ತಹಶೀಲ್ದಾರ್ ಪುರಂದರ ಹೆಗ್ಡೆ ಪರವಾಗಿ ಲಂಚ ಪಡೆದಿರುವುದಾಗಿ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ತಹಶೀಲ್ದಾರ್ ಪುರಂದರ ಹೆಗ್ಡೆ ಅವರನ್ನು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು