5:39 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಲಂಚ ಸ್ವೀಕಾರ: ಅಥಣಿ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಎಂಜಿನಿಯರ್, ಮೆನೇಜರ್ ಎಸಿಬಿ ಬಲೆಗೆ

22/09/2021, 17:44

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಲಂಚ ಸ್ವೀಕರಿಸುತ್ತಿದ್ದಾಗಲೇ ಅಥಣಿಯ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಹಾಗೂ ಕಚೇರಿಯ ಮ್ಯಾನೇಜರ್ ರೆಡ್ ಹ್ಯಾಂಡ್ ಆಗಿ ಭ್ರಷ್ಟಾಚಾರ ನಿರ್ಮೂಲನಾ ದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ.


ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರಾಜೇಂದ್ರ ಇಂದ್ರಪ್ಪ ಪರಣಾಕರ ಹಾಗೂ ಮ್ಯಾನೇಜರ್ ದೀಪಕ ಕೃಷ್ಣಾಜಿ ಕುಲಕರ್ಣಿ ಅವರು ಗುತ್ತಿಗೆದಾರ ಒಬ್ಬರಿಂದ 68,000 ರೂ. ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಎಸಿಬಿಯಿಂದ ಇಬ್ಬರೂ ಅಧಿಕಾರಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

ಇಲಾಖೆ ಜಲಜೀವನ ಮಿಷನ್ ಯೋಜನೆ ಅಡಿಯಲ್ಲಿ ಕಾಮಗಾರಿ ಗುತ್ತಿಗೆ ಪಡೆದ ಬೆಳಗಾವಿಯ ಗುತ್ತಿಗೆದಾರ ಒಬ್ಬರಿಂದ ಇಬ್ಬರೂ ಅಧಿಕಾರಿಗಳು ಶೇ.3 ರಷ್ಟು ಲಂಚದ ಬೇಡಿಕೆ ಇಟ್ಟಿದ್ದರು. ಈ ಕುರಿತಂತೆ ಗುತ್ತಿಗೆದಾರ ಎಸಿಬಿಗೆ ದೂರು ನೀಡಿದ್ದರು. ದೂರಿನ ಅನ್ವಯ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು.

ಎಸಿಬಿ ಎಸ್ಪಿ ಬಿ.ಎಸ್.ನ್ಯಾಮಗೌಡರ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಕರುಣಾಕರ ಶೆಟ್ಟಿ ನೇತೃತ್ವದಲ್ಲಿ ಇನ್ಸಪೆಕ್ಟರ್ ಗಳಾದ ಅಡಿವೇಶ ಗುದಿಗೊಪ್ಪ ಹಾಗೂ ಸುನಿಲಕುಮಾರ ಹಾಗೂ ಸಿಬ್ಬಂದಿ ದಾಳಿ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು