11:56 PM Saturday28 - February 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಭಾಷೆಯು ದೇಶದ ಸಂಸ್ಕೃತಿ, ಭವಿಷ್ಯವನ್ನು ಉಳಿಸುವ ಪ್ರಮುಖ ಸಾಧನವೂ ಹೌದು: ಮಂಗಳೂರು ವಿವಿ ಕುಲಪತಿ ಪ್ರೊ‌. ಪಿ.ಎಲ್. ಧರ್ಮ

13/05/2024, 22:24

ಮಂಗಳೂರು(reporterkarnataka.com):ಭಾಷೆ ಕೇವಲ ಒಂದು ಸಂವಹನ ಮಾಧ್ಯಮವಾಗಿರದೆ ದೇಶದ ಸಂಸ್ಕೃತಿ, ಭವಿಷ್ಯವನ್ನು ಉಳಿಸುವ ಪ್ರಮುಖ ಸಾಧನವೂ ಆಗಿದೆ ಎಂದು ಮಂಗಳೂರು ವಿವಿ ಕುಲಪತಿ ಪ್ರೊ‌. ಪಿ.ಎಲ್. ಧರ್ಮ ಹೇಳಿದರು.


ಭಾರತ ಸರಕಾರದ ಶಿಕ್ಷಣ ಸಚಿವಾಲಯದ ಕೇಂದ್ರೀಯ ನಿರ್ದೇಶನಾಲಯ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಹಿಂದಿ ಸ್ನಾತಕೋತ್ತರ ವಿಭಾಗ ಹಾಗೂ ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಸಂಯುಕ್ತ ಆಶ್ರಯದಲ್ಲಿ 5 ದಿನಗಳ ವಿಶೇಷ ಹಿಂದಿ ಯುವ ಬರಹಗಾರರ ಶಿಬಿರವನ್ನು ಸೋಮವಾರ ನಗರದ ಹಂಪನಕಟ್ಟೆ ವಿವಿ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.



ಯುವ ಬರಹಗಾರರು ಮುಖ್ಯವಾಗಿ ಭಾಷೆ, ಪದಗಳ ಕುರಿತಾಗಿ ಹೆಚ್ಚಿನ ಜ್ಞಾನವನ್ನು ಹೊಂದಿರಬೇಕು. ಭಾಷೆ ಕೇವಲ ಒಂದು ಸಂವಹನ ಮಾಧ್ಯಮವಾಗಿರದೆ ದೇಶದ ಸಂಸ್ಕೃತಿ, ಭವಿಷ್ಯವನ್ನು ಉಳಿಸುವ ಪ್ರಮುಖ ಸಾಧನವೂ ಆಗಿದೆ. ಸಂಪತ್ತು, ಅಧಿಕಾರ ಎಲ್ಲವೂ ಇದ್ದು ಮಾತನಾಡುವ ಭಾಷೆ ಚೆನ್ನಾಗಿರದಿದ್ದರೆ ಆತ ಸಾಮಾಜಿಕವಾಗಿ ಉತ್ತಮ ವ್ಯಕ್ತಿಯಾಗಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.


ಲೇಖಕ ನಾದವ ಯಾವ ವಸ್ತುವನ್ನು ಆಯ್ಕೆ ಮಾಡುತ್ತಾನೆ. ಅದನ್ನು ಹೇಗೆ ತನ್ನ ಲೇಖನದ ಮೂಲಕ ಓದುಗರಿಗೆ ತಲುಪಿಸುತ್ತಾನೆ ಎನ್ನುವುದು ಮುಖ್ಯವಾಗುತ್ತದೆ ಎಂದರು.
ಆನ್‌ಲೈನ್ ವೇದಿಕೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕೇಂದ್ರೀಯ ಹಿಂದಿ ನಿರ್ದೇಶನಾಲಯದ ನಿರ್ದೇಶಕ ಪ್ರೊ. ಸುನಿಲ್ ಬಾಬುರಾವ್ ಕುಲಕರ್ಣಿ ಅವರು ಮಾತನಾಡಿ, ವಿದ್ಯಾರ್ಥಿಗಳನ್ನು ಲೇಖಕರನ್ನಾಗಿ ಪ್ರೇರೇಪಿಸುವ ಉದ್ದೇಶದಿಂದ ಶಿಬಿರ ಆಯೋಜಿಸಲಾಗಿದೆ. ಲೇಖನದ ವಸ್ತು, ವಿಷಯಗಳು, ನಮ್ಮ ಸಂಸ್ಕೃತಿ-ಪರಂಪರೆ ವಿಚಾರವಾಗಿ ಲೇಖನಗಳಲ್ಲಿ ಅಳವಡಿಸುವುದು ಹೇಗೆ ಎನ್ನುವುದನ್ನು ತಿಳಿಸಿ, ಅವರನ್ನು ಪರಿಪಕ್ವರನ್ನಾಗಿ ಮಾಡಲಾಗುತ್ತದೆ. ಸೃಜನಾತ್ಮತೆಗೆ ಪ್ರೋತ್ಸಾಹ ನೀಡುವುದು ಶಿಬಿರದ ಮುಖ್ಯ ಉದ್ದೇಶ ಎಂದರು.


ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ ಅವರು ಅಧ್ಯಕ್ಷತೆ ವಹಿಸಿದ್ದರು. ನಿರ್ದೇಶನಾಲಯದ ಪ್ರಮುಖರಾದ ಡಾ. ಪ್ರದೀಪ್ ಕುಮಾರ್ ಠಾಕೂರ್ ಪ್ರಸ್ತಾವಿಕವಾಗಿ ಮಾತನಾಡಿ, ಶಿಬಿರದ ರೂಪುರೇಷೆಗಳ ಬಗ್ಗೆ ವಿವರಿಸಿದರು.

ಐಕ್ಯೂಎಸಿ ಸಂಯೋಜಕ ಡಾ.ಸಿದ್ದರಾಜು ಉಪಸ್ಥಿತರಿದ್ದರು. ಸ್ನಾತಕೋತ್ತರ ಹಿಂದಿ ವಿಭಾಗದ ಸಂಯೋಜಕಿ ಡಾ.ನಾಗರತ್ನ ರಾವ್ ಸ್ವಾಗತಿಸಿದರು. ಹಿಂದಿ ಉಪನ್ಯಾಸಕಿ ಡಾ. ಸುಮಾ ಟಿ. ರೋಡನ್ನವರ್ ಕಾರ್ಯಕ್ರಮ ನಿರೂಪಿಸಿದರು.
5 ದಿನಗಳ ಈ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಈಶ್ವರ ಪವಾರ್ ಪುಣೆ, ಡಾ. ಪ್ರತಿಭಾ ಮೊದಲಿಯಾರ್ ಮೈಸೂರು, ಪ್ರೊ. ಪ್ರಭಾ ವಿ. ಭಟ್, ಧಾರವಾಡ, ಡಾ. ಸುಮಂಗಲಾ ಮಾಮ್ಮಿಗಟ್ಟಿ ಧಾರವಾಡ, ಡಾ. ಮಂಜುನಾಥ ಐಕಳ ಮಂಗಳೂರು, ಡಾ. ಮುಕುಂದ ಪ್ರಭು ಮಂಗಳೂರು, ಡಾ. ಸುಮಾ ಟಿ. ರೋಡನ್ನವರ್ ಮಂಗಳೂರು ಭಾಗವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು