2:50 AM Tuesday4 - November 2025
ಬ್ರೇಕಿಂಗ್ ನ್ಯೂಸ್
ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ…

ಇತ್ತೀಚಿನ ಸುದ್ದಿ

ಲಸಿಕೆ ಇಲ್ಲದೆ ಪರೀಕ್ಷೆ ಬೇಡ, ಶುಲ್ಕದಲ್ಲಿ ಶೇ. 50 ವಿನಾಯಿತಿ ನೀಡಿ: ಸರಕಾರಕ್ಕೆ ಎನ್ ಎಸ್ ಯುಐ ಆಗ್ರಹ

27/05/2021, 20:09

ಮಂಗಳೂರು(reporterkarnataka news):  ಕೊರೊನಾ ಹಿನ್ನೆಲೆಯಲ್ಲಿ ಎನ್ ಎಸ್ ಯುಐ ಮೂರು ಪ್ರಮುಖ ಬೇಡಿಕೆಗಳನ್ನು ಸರಕಾರದ ಮುಂದಿಟ್ಟಿದೆ. ಲಸಿಕೆ ಇಲ್ಲದೇ ಪರೀಕ್ಷೆ ಬೇಡ, ವಿದ್ಯಾರ್ಥಿಗಳ ಶುಲ್ಕದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಬೇಕು ಹಾಗೂ ಕೊರೊನಾ ಸೋಂಕಿನಿಂದ ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣವನ್ನು ನೀಡಬೇಕು ಎಂಬ ಈ  ಮೂರು ಬೇಡಿಕೆಗಳನ್ನು ಈಡೇರಿಸುವಂತೆ ಎನ್ ಎಸ್ ಯುಐ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ ಸರಕಾರವನ್ನು  ಆಗ್ರಹಿಸಿದ್ದಾರೆ.

ಗುರುವಾರ ನಗರದ ಮಲ್ಲಿಕಟ್ಟೆ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಮೂರನೇ ಅಲೆಯ ಮುನ್ಸೂಚನೆ ಇದ್ದು, ವಿದ್ಯಾರ್ಥಿ ಮತ್ತು ಪೋಷಕರಲ್ಲಿ ಭಯವನ್ನುಂಟು ಮಾಡಿದೆ. ಇದರ ನಡುವೆ ಪರೀಕ್ಷೆಯನ್ನು ಮಾಡುವುದಾರೆ ವಿದ್ಯಾರ್ಥಿಗಳಿಗೆ  ಪ್ರಥಮ ಆದ್ಯತೆ ನೀಡಿ ವ್ಯಾಕ್ಸಿನನ್ನು ನೀಡಬೇಕು ಅಥವಾ ಪರೀಕ್ಷೆಯನ್ನೇ ರದ್ದುಗೊಳಿಸಬೇಕು. ಸತತವಾಗಿ ಒಂದು ವರ್ಷದಿಂದ ಕೊರೊನಾ ಮಹಾಮಾರಿ ತಾಂಡವವಾಡುತ್ತಿದ್ದು. ಲಾಕ್ ಡೌನ್ ಆಗಿರಬಹುದು, ಸಾಕಷ್ಟು ಕಾಲೇಜುಗಳು ಬಂದಾಗಿರುವುದರಿಂದ ಸರ್ಕಾರದಿಂದ ಸಿಗಬೇಕಾಗಿದ್ದ ವಿದ್ಯಾರ್ಥಿ ವೇತನ, ಶೈಕ್ಷಣಿಕ ಸಾಲ ವಿದ್ಯಾರ್ಥಿಗಳಿಗೆ ಲಭಿಸಿಲ್ಲ. ಕೇವಲ ಆನ್ ಲೈನ್ ತರಗತಿ ಮುಖಾಂತರ ಕ್ಲಾಸ್ ಗಳು ನಡೆಯುತ್ತಿದ್ದು,  ವಿದ್ಯಾರ್ಥಿಗಳ ಶುಲ್ಕದಲ್ಲಿ ಯಾವುದೇ ರಿಯಾಯಿತಿಯನ್ನು ಖಾಸಗಿ ಶಿಕ್ಷಣ ಸಂಸ್ಥೆಗಳು ಮಾಡಲಿಲ್ಲ. ಆದ್ದರಿಂದ ಪೂರ್ಣ ಪ್ರಮಾಣದ ಶುಲ್ಕವನ್ನು ಪಾವತಿಸಲು ಪೋಷಕರಿಗೆ ತೊಂದರೆಯಾಗಲಿದ್ದು,  ವಿದ್ಯಾರ್ಥಿ ಶುಲ್ಕದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಬೇಕು ಅಲ್ಲದೆ, ಕೋವಿಡ್ 19 ನಿಂದ ಅದೆಷ್ಟೋ  ವಿದ್ಯಾರ್ಥಿಗಳು ತಮ್ಮ ಆಧಾರ ಸ್ತಂಭವಾದ ಪೋಷಕರು, ಕುಟುಂಬಸ್ಥರನ್ನು  ಕಳೆದುಕೊಂಡು ಬೀದಿ ಪಾಲಾಗಿದ್ದಾರೆ. ಅವರ ಮುಂದಿನ ಸಂಪೂರ್ಣ ಶಿಕ್ಷಣವನ್ನು ಸರಕಾರ ವಹಿಸಿಕೊಳ್ಳಬೇಕು. ಅಂತಹ ವಿದ್ಯಾರ್ಥಿಗಳ ಕೆಜಿ-ಪಿಜಿ ವರೆಗಿನ ಶಿಕ್ಷಣವನ್ನು ಸರಕಾರ ಭರಿಸಬೇಕು  ಎಂದು ಒತ್ತಾಯಿಸಿದರು.

ವಿಟಿಯು ಉಸ್ತುವಾರಿ ಅನ್ವೀತ್ ಕಟೀಲ್ ಮಾತನಾಡಿ,  ಆಫ್ ಲೈನ್ ಪರೀಕ್ಷೆ ಮಾಡುವ ಮೊದಲು ಆಫ್ ಲೈನ್  ತರಗತಿಗಳನ್ನು  45 ದಿನಗಳ ಕಾಲ ನಡೆಸಬೇಕು. ಆನ್ಲೈನ್ ನಲ್ಲಿ ಶಿಕ್ಷಣ ಕೊಟ್ಟು ಆಫ್ಲೈನ್ ಪರೀಕ್ಷೆ  ನಡೆಸುತ್ತಿದ್ದು, ಇದರಿಂದ ವಿದ್ಯಾರ್ಥಿಗಳ ಫಲಿತಾಂಶಗಳಲ್ಲಿ  ವ್ಯತ್ಯಾಸ ಆಗುತ್ತಿದೆ. ವಿದ್ಯಾರ್ಥಿಗಳು ಅನುತ್ತೀರ್ಣರಾಗುತ್ತಿದ್ದಾರೆ. ಇಂತಹ ಶಿಕ್ಷಣ  ವ್ಯವಸ್ಥೆ ವಿದ್ಯಾರ್ಥಿಗಳಿಗೆ ತುಂಬಾ ನೋವುಂಟು ಮಾಡಿದೆ. ಆದುದರಿಂದ ವಿದ್ಯಾರ್ಥಿಗಳು ಕ್ಯಾರಿ ಓವರ್ ಪದ್ಧತಿಯನ್ನು  ಕೇಳುತ್ತಿದ್ದಾರೆ. ಹಿಂದಿನ ಸೆಮಿಸ್ಟರ್ ಪರೀಕ್ಷೆ  ಇನ್ನು ಮುಗಿದಿಲ್ಲ ಆದರೆ ಕಾಲೇಜುಗಳು ಮುಂದಿನ ಸೆಮಿಸ್ಟರ್ ತರಗತಿಗಳ್ಳನ್ನು ಆನ್ಲೈನ್ ಮೂಲಕ ಪ್ರಾರಂಭ  ಮಾಡಿದ್ದಾರೆ. ಒಬ್ಬ ವಿದ್ಯಾರ್ಥಿ ಒಂದೇ ಸೆಮಿಸ್ಟರ್ ನಲ್ಲಿ ಎಲ್ಲಾ ಸಬ್ಜೆಕ್ಟ್ ಗಳನ್ನು  ಓದುವುದು ಹೇಗೆ ಎಂದು ಪ್ರಶ್ನಿಸಿದರು.


ಈ ಸಂದರ್ಭದಲ್ಲಿ ಜಿಲ್ಲಾ ಎನ್ ಎಸ್ ಯುಐ ಉಪಾಧ್ಯಕ್ಷರಾದ ಆಸ್ಟನ್ ಸ್ವಿಕ್ವೇರಾ, ಅಂಕುಶ್ ಶೆಟ್ಟಿ, ನಿಕಿಲ್ ಪೂಜಾರಿ, ಮುಖಂಡರಾದ ಪವನ್ ಸಾಲ್ಯಾನ್, ಶಫೀಕ್, ರಿಲ್ವಾನ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು