3:14 PM Wednesday5 - November 2025
ಬ್ರೇಕಿಂಗ್ ನ್ಯೂಸ್
ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:…

ಇತ್ತೀಚಿನ ಸುದ್ದಿ

ಲಸಿಕೆ ಕುರಿತು ಅಪಪ್ರಚಾರ ಮಾಡಿರುವ ಕಾಂಗ್ರೆಸ್ ಮುಖಂಡರೇ ಇಂದಿನ ಪರಿಸ್ಥಿತಿಗೆ ಕಾರಣ: ಶಾಸಕ ವೇದವ್ಯಾಸ್ ಕಾಮತ್ 

21/05/2021, 18:59

ಮಂಗಳೂರು(reporterkarnataka news): ಕೋವಿಡ್ ಲಸಿಕೆಯ ಕುರಿತು ಕೇವಲ ರಾಜಕೀಯ ದುರುದ್ಧೇಶದಿಂದ ಅಪಪ್ರಚಾರ ಮಾಡಿರುವ ಕಾಂಗ್ರೇಸ್ ಮುಖಂಡರೇ ಇಂದಿನ ಈ ಪರಿಸ್ಥಿತಿಗೆ ಮೂಲ ಕಾರಣ ಎಂದು ಶಾಸಕ ವೇದವ್ಯಾಸ್ ಕಾಮತ್ ಕಿಡಿಕಾರಿದ್ದಾರೆ.

ಭಾರತದಲ್ಲಿ ಲಸಿಕೆ ಕಂಡುಹಿಡಿದ ಸಂದರ್ಭದಲ್ಲಿ ಗುಣಮಟ್ಟದ ಕುರಿತು ತಾವೇ ತಜ್ಞರಂತೆ ಬೇಕಾಬಿಟ್ಟಿಯಾಗಿ ಹೇಳಿಕೆ ನೀಡಿದ್ದ ಕಾಂಗ್ರೇಸ್ ಮುಖಂಡರು ಅದರ ಪರಿಣಾಮದ ಕುರಿತು ಆಲೋಚಿಸುವಷ್ಟು ಪ್ರಬುದ್ಧರಾಗಿಲ್ಲವೇ. ಮೊದಲ ಹಂತದಲ್ಲಿ ಡಿ ಗ್ರೂಪ್ ನೌಕರರಿಗೆ ಲಸಿಕೆ ನೀಡಿದಾಗ ಪ್ರಧಾನಿ ಮೊದಲು ಲಸಿಕೆ ಪಡೆಯಬೇಕಿತ್ತು ಎನ್ನುವ ಕಾಂಗ್ರೆಸ್ ಮುಖಂಡರು ಪ್ರಧಾನಿ ಲಸಿಕೆ ಪಡೆದಾಗ ಜನತೆಗೆ ಲಸಿಕೆ ನೀಡದೆ ಪ್ರಧಾನಿ ಲಸಿಕೆ ಪಡೆಯುತ್ತಿದ್ದಾರೆ ಎಂದು ಅಪ್ರಬುದ್ಧರಂತೆ ಹೇಳಿಕೆ ನೀಡುತ್ತಿದ್ದಾರೆ. ಲಸಿಕೆಯ ಬಗ್ಗೆ ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿ ಈಗ ತೇಪೆಹಚ್ಚುವ ಕೆಲಸ ಮಾಡುತಿದ್ದಾರೆ ಎಂದಿದ್ದಾರೆ.

ಭಾರತದ ಲಸಿಕೆಯನ್ನು ಬೇರೆ ದೇಶಗಳಿಗೆ ನೀಡಿರುವ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಆಂದೋಲನ ಪ್ರಾರಂಭಿಸುವ ಕಾಂಗ್ರೆಸ್ ಮುಖಂಡರು ಜನರು ಲಸಿಕೆ ಪಡೆಯಲು ಹಿಂದೇಟು ಹಾಕಲು ಮೂಲ ಕಾರಣ ಯಾರೆಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು. ಈ ದೇಶದಲ್ಲಿ ಲಸಿಕೆ ಕಂಡುಹಿಡಿದ ಸಂದರ್ಭದಲ್ಲಿ ರಾಜಕೀಯ ದುರುದ್ಧೇಶದಿಂದ ಕಾಂಗ್ರೆಸಿಗರು ಮಾಡಿದ ಅಪಪ್ರಚಾರದಿಂದ ಜನರು ಲಸಿಕೆ ಪಡೆಯಲು ಹಿಂದೇಟು ಹಾಕುತಿದ್ದರು. ಆ ಸಂದರ್ಭದಲ್ಲಿ ಲಸಿಕೆಯ ಸಿಂಧುತ್ವ ಕೊನೆಗೊಳ್ಳುವ ಮೊದಲು ಅನ್ಯ ಮಾರ್ಗವಿಲ್ಲದೆ ಬೇಡಿಕೆಯಿರುವ ದೇಶಗಳಿಗೆ ನೀಡಲಾಗಿದೆ. ಇದನ್ನು ಅನೇಕ ವೈದ್ಯರು ಒಪ್ಪಿಕೊಂಡಿದ್ದಾರೆ. ಇವೆಲ್ಲದರ ನೈತಿಕ ಹೊಣೆಗಾರಿಕೆಯಿಂದ ಕಾಂಗ್ರೇಸಿಗರು ಜನತೆಯ ಬಳಿ ಕ್ಷಮೆಯಾಚಿಸಬೇಕು ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಜನರನ್ನು ಲಸಿಕಾ ಕೇಂದ್ರಗಳಿಗೆ ತೆರಳದಂತೆ ವಿವಿಧ ರೀತಿಯ ಹೇಳಿಕೆಯನ್ನು ನೀಡಿ, ಸ್ವತಃ ಕಾಂಗ್ರೇಸ್ ಮುಖಂಡರು ಲಸಿಕೆ ಪಡೆದಿದ್ದಾರೆ. ಕಂಡವರ ಮಕ್ಕಳನ್ನು ಬಾವಿಗೆಸೆದು ಆಳ ನೋಡುವ ಬದಲು ತಾವೇ ಯಾಕೆ ಬಾವಿಗೆ ಹಾರಬಾರದು ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು