5:51 AM Wednesday14 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ಲಸಿಕೆ ಕುರಿತು ಅಪಪ್ರಚಾರ ಮಾಡಿರುವ ಕಾಂಗ್ರೆಸ್ ಮುಖಂಡರೇ ಇಂದಿನ ಪರಿಸ್ಥಿತಿಗೆ ಕಾರಣ: ಶಾಸಕ ವೇದವ್ಯಾಸ್ ಕಾಮತ್ 

21/05/2021, 18:59

ಮಂಗಳೂರು(reporterkarnataka news): ಕೋವಿಡ್ ಲಸಿಕೆಯ ಕುರಿತು ಕೇವಲ ರಾಜಕೀಯ ದುರುದ್ಧೇಶದಿಂದ ಅಪಪ್ರಚಾರ ಮಾಡಿರುವ ಕಾಂಗ್ರೇಸ್ ಮುಖಂಡರೇ ಇಂದಿನ ಈ ಪರಿಸ್ಥಿತಿಗೆ ಮೂಲ ಕಾರಣ ಎಂದು ಶಾಸಕ ವೇದವ್ಯಾಸ್ ಕಾಮತ್ ಕಿಡಿಕಾರಿದ್ದಾರೆ.

ಭಾರತದಲ್ಲಿ ಲಸಿಕೆ ಕಂಡುಹಿಡಿದ ಸಂದರ್ಭದಲ್ಲಿ ಗುಣಮಟ್ಟದ ಕುರಿತು ತಾವೇ ತಜ್ಞರಂತೆ ಬೇಕಾಬಿಟ್ಟಿಯಾಗಿ ಹೇಳಿಕೆ ನೀಡಿದ್ದ ಕಾಂಗ್ರೇಸ್ ಮುಖಂಡರು ಅದರ ಪರಿಣಾಮದ ಕುರಿತು ಆಲೋಚಿಸುವಷ್ಟು ಪ್ರಬುದ್ಧರಾಗಿಲ್ಲವೇ. ಮೊದಲ ಹಂತದಲ್ಲಿ ಡಿ ಗ್ರೂಪ್ ನೌಕರರಿಗೆ ಲಸಿಕೆ ನೀಡಿದಾಗ ಪ್ರಧಾನಿ ಮೊದಲು ಲಸಿಕೆ ಪಡೆಯಬೇಕಿತ್ತು ಎನ್ನುವ ಕಾಂಗ್ರೆಸ್ ಮುಖಂಡರು ಪ್ರಧಾನಿ ಲಸಿಕೆ ಪಡೆದಾಗ ಜನತೆಗೆ ಲಸಿಕೆ ನೀಡದೆ ಪ್ರಧಾನಿ ಲಸಿಕೆ ಪಡೆಯುತ್ತಿದ್ದಾರೆ ಎಂದು ಅಪ್ರಬುದ್ಧರಂತೆ ಹೇಳಿಕೆ ನೀಡುತ್ತಿದ್ದಾರೆ. ಲಸಿಕೆಯ ಬಗ್ಗೆ ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿ ಈಗ ತೇಪೆಹಚ್ಚುವ ಕೆಲಸ ಮಾಡುತಿದ್ದಾರೆ ಎಂದಿದ್ದಾರೆ.

ಭಾರತದ ಲಸಿಕೆಯನ್ನು ಬೇರೆ ದೇಶಗಳಿಗೆ ನೀಡಿರುವ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಆಂದೋಲನ ಪ್ರಾರಂಭಿಸುವ ಕಾಂಗ್ರೆಸ್ ಮುಖಂಡರು ಜನರು ಲಸಿಕೆ ಪಡೆಯಲು ಹಿಂದೇಟು ಹಾಕಲು ಮೂಲ ಕಾರಣ ಯಾರೆಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು. ಈ ದೇಶದಲ್ಲಿ ಲಸಿಕೆ ಕಂಡುಹಿಡಿದ ಸಂದರ್ಭದಲ್ಲಿ ರಾಜಕೀಯ ದುರುದ್ಧೇಶದಿಂದ ಕಾಂಗ್ರೆಸಿಗರು ಮಾಡಿದ ಅಪಪ್ರಚಾರದಿಂದ ಜನರು ಲಸಿಕೆ ಪಡೆಯಲು ಹಿಂದೇಟು ಹಾಕುತಿದ್ದರು. ಆ ಸಂದರ್ಭದಲ್ಲಿ ಲಸಿಕೆಯ ಸಿಂಧುತ್ವ ಕೊನೆಗೊಳ್ಳುವ ಮೊದಲು ಅನ್ಯ ಮಾರ್ಗವಿಲ್ಲದೆ ಬೇಡಿಕೆಯಿರುವ ದೇಶಗಳಿಗೆ ನೀಡಲಾಗಿದೆ. ಇದನ್ನು ಅನೇಕ ವೈದ್ಯರು ಒಪ್ಪಿಕೊಂಡಿದ್ದಾರೆ. ಇವೆಲ್ಲದರ ನೈತಿಕ ಹೊಣೆಗಾರಿಕೆಯಿಂದ ಕಾಂಗ್ರೇಸಿಗರು ಜನತೆಯ ಬಳಿ ಕ್ಷಮೆಯಾಚಿಸಬೇಕು ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಜನರನ್ನು ಲಸಿಕಾ ಕೇಂದ್ರಗಳಿಗೆ ತೆರಳದಂತೆ ವಿವಿಧ ರೀತಿಯ ಹೇಳಿಕೆಯನ್ನು ನೀಡಿ, ಸ್ವತಃ ಕಾಂಗ್ರೇಸ್ ಮುಖಂಡರು ಲಸಿಕೆ ಪಡೆದಿದ್ದಾರೆ. ಕಂಡವರ ಮಕ್ಕಳನ್ನು ಬಾವಿಗೆಸೆದು ಆಳ ನೋಡುವ ಬದಲು ತಾವೇ ಯಾಕೆ ಬಾವಿಗೆ ಹಾರಬಾರದು ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು