11:04 AM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಲಸಿಕೆ ಕುರಿತು ಅಪಪ್ರಚಾರ ಮಾಡಿರುವ ಕಾಂಗ್ರೆಸ್ ಮುಖಂಡರೇ ಇಂದಿನ ಪರಿಸ್ಥಿತಿಗೆ ಕಾರಣ: ಶಾಸಕ ವೇದವ್ಯಾಸ್ ಕಾಮತ್ 

21/05/2021, 18:59

ಮಂಗಳೂರು(reporterkarnataka news): ಕೋವಿಡ್ ಲಸಿಕೆಯ ಕುರಿತು ಕೇವಲ ರಾಜಕೀಯ ದುರುದ್ಧೇಶದಿಂದ ಅಪಪ್ರಚಾರ ಮಾಡಿರುವ ಕಾಂಗ್ರೇಸ್ ಮುಖಂಡರೇ ಇಂದಿನ ಈ ಪರಿಸ್ಥಿತಿಗೆ ಮೂಲ ಕಾರಣ ಎಂದು ಶಾಸಕ ವೇದವ್ಯಾಸ್ ಕಾಮತ್ ಕಿಡಿಕಾರಿದ್ದಾರೆ.

ಭಾರತದಲ್ಲಿ ಲಸಿಕೆ ಕಂಡುಹಿಡಿದ ಸಂದರ್ಭದಲ್ಲಿ ಗುಣಮಟ್ಟದ ಕುರಿತು ತಾವೇ ತಜ್ಞರಂತೆ ಬೇಕಾಬಿಟ್ಟಿಯಾಗಿ ಹೇಳಿಕೆ ನೀಡಿದ್ದ ಕಾಂಗ್ರೇಸ್ ಮುಖಂಡರು ಅದರ ಪರಿಣಾಮದ ಕುರಿತು ಆಲೋಚಿಸುವಷ್ಟು ಪ್ರಬುದ್ಧರಾಗಿಲ್ಲವೇ. ಮೊದಲ ಹಂತದಲ್ಲಿ ಡಿ ಗ್ರೂಪ್ ನೌಕರರಿಗೆ ಲಸಿಕೆ ನೀಡಿದಾಗ ಪ್ರಧಾನಿ ಮೊದಲು ಲಸಿಕೆ ಪಡೆಯಬೇಕಿತ್ತು ಎನ್ನುವ ಕಾಂಗ್ರೆಸ್ ಮುಖಂಡರು ಪ್ರಧಾನಿ ಲಸಿಕೆ ಪಡೆದಾಗ ಜನತೆಗೆ ಲಸಿಕೆ ನೀಡದೆ ಪ್ರಧಾನಿ ಲಸಿಕೆ ಪಡೆಯುತ್ತಿದ್ದಾರೆ ಎಂದು ಅಪ್ರಬುದ್ಧರಂತೆ ಹೇಳಿಕೆ ನೀಡುತ್ತಿದ್ದಾರೆ. ಲಸಿಕೆಯ ಬಗ್ಗೆ ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿ ಈಗ ತೇಪೆಹಚ್ಚುವ ಕೆಲಸ ಮಾಡುತಿದ್ದಾರೆ ಎಂದಿದ್ದಾರೆ.

ಭಾರತದ ಲಸಿಕೆಯನ್ನು ಬೇರೆ ದೇಶಗಳಿಗೆ ನೀಡಿರುವ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಆಂದೋಲನ ಪ್ರಾರಂಭಿಸುವ ಕಾಂಗ್ರೆಸ್ ಮುಖಂಡರು ಜನರು ಲಸಿಕೆ ಪಡೆಯಲು ಹಿಂದೇಟು ಹಾಕಲು ಮೂಲ ಕಾರಣ ಯಾರೆಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು. ಈ ದೇಶದಲ್ಲಿ ಲಸಿಕೆ ಕಂಡುಹಿಡಿದ ಸಂದರ್ಭದಲ್ಲಿ ರಾಜಕೀಯ ದುರುದ್ಧೇಶದಿಂದ ಕಾಂಗ್ರೆಸಿಗರು ಮಾಡಿದ ಅಪಪ್ರಚಾರದಿಂದ ಜನರು ಲಸಿಕೆ ಪಡೆಯಲು ಹಿಂದೇಟು ಹಾಕುತಿದ್ದರು. ಆ ಸಂದರ್ಭದಲ್ಲಿ ಲಸಿಕೆಯ ಸಿಂಧುತ್ವ ಕೊನೆಗೊಳ್ಳುವ ಮೊದಲು ಅನ್ಯ ಮಾರ್ಗವಿಲ್ಲದೆ ಬೇಡಿಕೆಯಿರುವ ದೇಶಗಳಿಗೆ ನೀಡಲಾಗಿದೆ. ಇದನ್ನು ಅನೇಕ ವೈದ್ಯರು ಒಪ್ಪಿಕೊಂಡಿದ್ದಾರೆ. ಇವೆಲ್ಲದರ ನೈತಿಕ ಹೊಣೆಗಾರಿಕೆಯಿಂದ ಕಾಂಗ್ರೇಸಿಗರು ಜನತೆಯ ಬಳಿ ಕ್ಷಮೆಯಾಚಿಸಬೇಕು ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಜನರನ್ನು ಲಸಿಕಾ ಕೇಂದ್ರಗಳಿಗೆ ತೆರಳದಂತೆ ವಿವಿಧ ರೀತಿಯ ಹೇಳಿಕೆಯನ್ನು ನೀಡಿ, ಸ್ವತಃ ಕಾಂಗ್ರೇಸ್ ಮುಖಂಡರು ಲಸಿಕೆ ಪಡೆದಿದ್ದಾರೆ. ಕಂಡವರ ಮಕ್ಕಳನ್ನು ಬಾವಿಗೆಸೆದು ಆಳ ನೋಡುವ ಬದಲು ತಾವೇ ಯಾಕೆ ಬಾವಿಗೆ ಹಾರಬಾರದು ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು