10:18 PM Monday20 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಲಸಿಕೆ ಕುರಿತು ಅಪಪ್ರಚಾರ ಮಾಡಿರುವ ಕಾಂಗ್ರೆಸ್ ಮುಖಂಡರೇ ಇಂದಿನ ಪರಿಸ್ಥಿತಿಗೆ ಕಾರಣ: ಶಾಸಕ ವೇದವ್ಯಾಸ್ ಕಾಮತ್ 

21/05/2021, 18:59

ಮಂಗಳೂರು(reporterkarnataka news): ಕೋವಿಡ್ ಲಸಿಕೆಯ ಕುರಿತು ಕೇವಲ ರಾಜಕೀಯ ದುರುದ್ಧೇಶದಿಂದ ಅಪಪ್ರಚಾರ ಮಾಡಿರುವ ಕಾಂಗ್ರೇಸ್ ಮುಖಂಡರೇ ಇಂದಿನ ಈ ಪರಿಸ್ಥಿತಿಗೆ ಮೂಲ ಕಾರಣ ಎಂದು ಶಾಸಕ ವೇದವ್ಯಾಸ್ ಕಾಮತ್ ಕಿಡಿಕಾರಿದ್ದಾರೆ.

ಭಾರತದಲ್ಲಿ ಲಸಿಕೆ ಕಂಡುಹಿಡಿದ ಸಂದರ್ಭದಲ್ಲಿ ಗುಣಮಟ್ಟದ ಕುರಿತು ತಾವೇ ತಜ್ಞರಂತೆ ಬೇಕಾಬಿಟ್ಟಿಯಾಗಿ ಹೇಳಿಕೆ ನೀಡಿದ್ದ ಕಾಂಗ್ರೇಸ್ ಮುಖಂಡರು ಅದರ ಪರಿಣಾಮದ ಕುರಿತು ಆಲೋಚಿಸುವಷ್ಟು ಪ್ರಬುದ್ಧರಾಗಿಲ್ಲವೇ. ಮೊದಲ ಹಂತದಲ್ಲಿ ಡಿ ಗ್ರೂಪ್ ನೌಕರರಿಗೆ ಲಸಿಕೆ ನೀಡಿದಾಗ ಪ್ರಧಾನಿ ಮೊದಲು ಲಸಿಕೆ ಪಡೆಯಬೇಕಿತ್ತು ಎನ್ನುವ ಕಾಂಗ್ರೆಸ್ ಮುಖಂಡರು ಪ್ರಧಾನಿ ಲಸಿಕೆ ಪಡೆದಾಗ ಜನತೆಗೆ ಲಸಿಕೆ ನೀಡದೆ ಪ್ರಧಾನಿ ಲಸಿಕೆ ಪಡೆಯುತ್ತಿದ್ದಾರೆ ಎಂದು ಅಪ್ರಬುದ್ಧರಂತೆ ಹೇಳಿಕೆ ನೀಡುತ್ತಿದ್ದಾರೆ. ಲಸಿಕೆಯ ಬಗ್ಗೆ ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿ ಈಗ ತೇಪೆಹಚ್ಚುವ ಕೆಲಸ ಮಾಡುತಿದ್ದಾರೆ ಎಂದಿದ್ದಾರೆ.

ಭಾರತದ ಲಸಿಕೆಯನ್ನು ಬೇರೆ ದೇಶಗಳಿಗೆ ನೀಡಿರುವ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಆಂದೋಲನ ಪ್ರಾರಂಭಿಸುವ ಕಾಂಗ್ರೆಸ್ ಮುಖಂಡರು ಜನರು ಲಸಿಕೆ ಪಡೆಯಲು ಹಿಂದೇಟು ಹಾಕಲು ಮೂಲ ಕಾರಣ ಯಾರೆಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು. ಈ ದೇಶದಲ್ಲಿ ಲಸಿಕೆ ಕಂಡುಹಿಡಿದ ಸಂದರ್ಭದಲ್ಲಿ ರಾಜಕೀಯ ದುರುದ್ಧೇಶದಿಂದ ಕಾಂಗ್ರೆಸಿಗರು ಮಾಡಿದ ಅಪಪ್ರಚಾರದಿಂದ ಜನರು ಲಸಿಕೆ ಪಡೆಯಲು ಹಿಂದೇಟು ಹಾಕುತಿದ್ದರು. ಆ ಸಂದರ್ಭದಲ್ಲಿ ಲಸಿಕೆಯ ಸಿಂಧುತ್ವ ಕೊನೆಗೊಳ್ಳುವ ಮೊದಲು ಅನ್ಯ ಮಾರ್ಗವಿಲ್ಲದೆ ಬೇಡಿಕೆಯಿರುವ ದೇಶಗಳಿಗೆ ನೀಡಲಾಗಿದೆ. ಇದನ್ನು ಅನೇಕ ವೈದ್ಯರು ಒಪ್ಪಿಕೊಂಡಿದ್ದಾರೆ. ಇವೆಲ್ಲದರ ನೈತಿಕ ಹೊಣೆಗಾರಿಕೆಯಿಂದ ಕಾಂಗ್ರೇಸಿಗರು ಜನತೆಯ ಬಳಿ ಕ್ಷಮೆಯಾಚಿಸಬೇಕು ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಜನರನ್ನು ಲಸಿಕಾ ಕೇಂದ್ರಗಳಿಗೆ ತೆರಳದಂತೆ ವಿವಿಧ ರೀತಿಯ ಹೇಳಿಕೆಯನ್ನು ನೀಡಿ, ಸ್ವತಃ ಕಾಂಗ್ರೇಸ್ ಮುಖಂಡರು ಲಸಿಕೆ ಪಡೆದಿದ್ದಾರೆ. ಕಂಡವರ ಮಕ್ಕಳನ್ನು ಬಾವಿಗೆಸೆದು ಆಳ ನೋಡುವ ಬದಲು ತಾವೇ ಯಾಕೆ ಬಾವಿಗೆ ಹಾರಬಾರದು ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು