10:24 PM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಲಸಿಕೆ ಪಡೆಯದವರ ಗುರುತಿಸಿ ವ್ಯಾಕ್ಸಿನ್ ಕೊಡಿಸಿ:  ಉಸ್ತುವಾರಿ ಕಾರ್ಯದರ್ಶಿ ಪೊನ್ನು ರಾಜ್ ಸೂಚನೆ

25/10/2021, 19:35

ಮಂಗಳೂರು (reporterkarnataka.com): ಕೊವಿಡ್-19 ಸೋಂಕಿನ ಲಸಿಕೆ ಪಡೆಯದ ಫಲಾನುಭವಿಗಳನ್ನು ಕೂಡಲೇ ಗುರುತಿಸಿ ವ್ಯಾಕ್ಸಿನ್ ನೀಡಲು ಸಾಧ್ಯವಿರುವ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಈ ಬಗ್ಗೆ ವ್ಯಾಪಕ ಜನ ಜಾಗೃತಿ ಮೂಡಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪೊನ್ನುರಾಜ್  ಅಧಿಕಾರಿಗಳಿಗೆ ಸೂಚಿಸಿದರು.

ಅವರು ಸೋಮವಾರ ಕೋವಿಡ್-19 ಲಸಿಕಾಕರಣಕ್ಕೆ ಸಂಬಂಧಿಸಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಅಂಗನವಾಡಿ, ಆಶಾ ಹಾಗೂ ಆರೋಗ್ಯ ಕಾರ್ಯಕರ್ತರು ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮೀಣ ಪ್ರದೇಶದಲ್ಲಿನ ಮನೆ-ಮನೆಗೆ ಸಮೀಕ್ಷೆ ಕೈಗೊಂಡು ಆ ಕುಟುಂಬದ ಸದಸ್ಯರಲ್ಲಿ ಕೋವಿಡ್ ಲಸಿಕೆ ಪಡೆಯದ ಫಲಾನುಭವಿಗಳ ಮಾಹಿತಿ ಸಂಗ್ರಹಿಸಬೇಕು. ಮುಖ್ಯವಾಗಿ ಲಸಿಕೆ ಪಡೆಯುವಂತೆ ಅವರಲ್ಲಿ ಜಾಗೃತಿ ಮೂಡಿಸಬೇಕು, ಇದನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕು, ಮನೆ-ಮನೆ ಸಮೀಕ್ಷೆ ಸಂಬಂದ ಆರೋಗ್ಯ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ತಂಡ ರಚಿಸಿಕೊಂಡು ಲಸಿಕೆ ಪಡೆಯದವರ ಪತ್ತೆಗೆ ಕ್ರಮ ವಹಿಸುವಂತೆ ತಿಳಿಸಿದರು.

ಇದಕ್ಕೂ ಮುನ್ನ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಮಾತನಾಡಿ, ಆರೋಗ್ಯ ಇಲಾಖೆ ಅಧಿಕಾರಿಗಳು, ಮೇಲ್ವಿಚಾರಕರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ ಮನೆ-ಮನೆ ಸಮೀಕ್ಷೆ ನಡೆಸಿ ಲಸಿಕೆ ಪಡೆಯದವರ ಪಡೆಯದವರ ಮಾಹಿತಿ ಸಂಗ್ರಹಿಸಿಬೇಕು,  ಇದನ್ನು ಗಂಭೀರವಾಗಿ ಪರಿಗಣಿಸುವಂತೆ ತಾಕೀತು ಮಾಡಿದರು.

ಮಂಗಳೂರು ನಗರದಲ್ಲಿರುವ ಅಪಾರ್ಟ್‍ಮೆಂಟ್‍ಗಳ ಸಂಘದ ಸಂಯುಕ್ತಾಶ್ರಯದಲ್ಲಿ ಪ್ರತೀ ಮನೆ-ಮನೆಗಳಲ್ಲಿ ಲಸಿಕೆ ಪಡೆಯದ ಫಲಾನುಭವಿಗಳನ್ನು ಗುರುತಿಸಬೇಕು. ಅವರ ಪಟ್ಟಿ ಸಿದ್ದಪಡಿಸಬೇಕು. ಹೆಲ್ಪ್ ಲೈನ್ ಮೂಲಕವೂ ಲಸಿಕೆ ಪಡೆಯದ ಫಲಾನುಭವಿಗಳ ಮಾಹಿತಿ ಪಡೆದು, ಅವರಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.  

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಹಾನಗರ ಪಾಲಿಕರ ಆಯುಕ್ತ ಅಕ್ಷಯ್ ಶ್ರೀಧರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಕಿಶೋರ್ ಕುಮಾರ್, ಜಿಲ್ಲೆಯ ಎಲ್ಲಾ ತಹಶೀಲ್ದಾರರು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು, ಸಿಡಿಪಿಓಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು