6:50 AM Wednesday5 - November 2025
ಬ್ರೇಕಿಂಗ್ ನ್ಯೂಸ್
ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ…

ಇತ್ತೀಚಿನ ಸುದ್ದಿ

ಲೇಟ್ ಆಗಿ ಸಭೆಗೆ ಎಂಟ್ರಿ ಕೊಟ್ಟ ಅಧಿಕಾರಿಗೆ ಸಚಿವ ಸುನಿಲ್ ಕುಮಾರ್ ಗೇಟ್ ಪಾಸ್ ! : ನಂತರ ನಡೆಯಿತು ಫುಲ್ ಕ್ಲಾಸ್ !!

10/08/2021, 13:09

ಕಾರ್ಕಳ(reporterkarnataka.com): ತಡವಾಗಿ ಸಭೆಗೆ ಆಗಮಿಸಿದ ಅಧಿಕಾರಿಯನ್ನು ನೂತನ ಸಚಿವ ಗೇಟ್ ಔಟ್ ಮಾಡಿದ ಘಟನೆ ಕಾರ್ಕಳದಲ್ಲಿ ನಡೆದಿದೆ. ಸಭೆ ಮುಗಿಯುವ ವರೆಗೆ ಹೊರಗಡೆ ನಿಂತಿದ್ದ ಅಧಿಕಾರಿಗೆ ಸಚಿವರು ನಂತರ ಫುಲ್ ಕ್ಲಾಸ್ ಕೂಡ ತೆಗೆದುಕೊಂಡರು.

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಅಧ್ಯಕ್ಷತೆಯಲ್ಲಿ ಕಾರ್ಕಳ ತಾಲೂಕು ಪಂಚಾಯತ್ ಸಾಮರ್ಥ್ಯ ಸೌಧದಲ್ಲಿ ಸಭೆ ಆರಂಭವಾಗಿತ್ತು. ಜಲಜೀವನ್ ವಿಷನ್ ಯೋಜನೆಗೆ ಸಂಬಂಧಿಸಿದ ಮಾಹಿತಿಯನ್ನು ಸಚಿವರು ಕೇಳಿದರು. ಆದರೆ ಉತ್ತರಿಸಲು ಇಲಾಖೆಗೆ ಸಂಬಂಧಿಸಿದ ಯಾವುದೇ ಅಧಿಕಾರಿಗಳು ಇರಲಿಲ್ಲ. 

ಸಚಿವರು ಸಭೆ ಮುಂದುವರಿಸಿದರು. ತುಂಬಾ ಹೊತ್ತು ಕಳೆದ ಬಳಿಕ ಜಲಮಿಷನ್ ಯೋಜನೆಗೆ ಸಂಬಂಧಿಸಿದ ಅಧಿಕಾರಿ ಸಭೆಗೆ ಎಂಟ್ರಿ ಕೊಟ್ಟರು. ತಕ್ಷಣ ಗರಂ ಆದ ಸಚಿವರು ಅಧಿಕಾರಿಯನ್ನು ಸಭೆಯಿಂದ ಹೊರಗೆ ಕಳುಹಿಸಿದರು. ಸಭೆ ಮುಗಿದು ಸಚಿವರು ಹೊರಗೆ ಹೋಗುವ ವೇಳೆಯೂ ಅಧಿಕಾರಿ ಅಲ್ಲೇ ನಿಂತಿದ್ದರು. ಇದನ್ನು ಗಮನಿಸಿದ ಸುನಿಲ್ ಕುಮಾರ್ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. 

ಇತ್ತೀಚಿನ ಸುದ್ದಿ

ಜಾಹೀರಾತು