11:14 PM Monday30 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ…

ಇತ್ತೀಚಿನ ಸುದ್ದಿ

ಲೇಟ್ ಆಗಿ ಸಭೆಗೆ ಎಂಟ್ರಿ ಕೊಟ್ಟ ಅಧಿಕಾರಿಗೆ ಸಚಿವ ಸುನಿಲ್ ಕುಮಾರ್ ಗೇಟ್ ಪಾಸ್ ! : ನಂತರ ನಡೆಯಿತು ಫುಲ್ ಕ್ಲಾಸ್ !!

10/08/2021, 13:09

ಕಾರ್ಕಳ(reporterkarnataka.com): ತಡವಾಗಿ ಸಭೆಗೆ ಆಗಮಿಸಿದ ಅಧಿಕಾರಿಯನ್ನು ನೂತನ ಸಚಿವ ಗೇಟ್ ಔಟ್ ಮಾಡಿದ ಘಟನೆ ಕಾರ್ಕಳದಲ್ಲಿ ನಡೆದಿದೆ. ಸಭೆ ಮುಗಿಯುವ ವರೆಗೆ ಹೊರಗಡೆ ನಿಂತಿದ್ದ ಅಧಿಕಾರಿಗೆ ಸಚಿವರು ನಂತರ ಫುಲ್ ಕ್ಲಾಸ್ ಕೂಡ ತೆಗೆದುಕೊಂಡರು.

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಅಧ್ಯಕ್ಷತೆಯಲ್ಲಿ ಕಾರ್ಕಳ ತಾಲೂಕು ಪಂಚಾಯತ್ ಸಾಮರ್ಥ್ಯ ಸೌಧದಲ್ಲಿ ಸಭೆ ಆರಂಭವಾಗಿತ್ತು. ಜಲಜೀವನ್ ವಿಷನ್ ಯೋಜನೆಗೆ ಸಂಬಂಧಿಸಿದ ಮಾಹಿತಿಯನ್ನು ಸಚಿವರು ಕೇಳಿದರು. ಆದರೆ ಉತ್ತರಿಸಲು ಇಲಾಖೆಗೆ ಸಂಬಂಧಿಸಿದ ಯಾವುದೇ ಅಧಿಕಾರಿಗಳು ಇರಲಿಲ್ಲ. 

ಸಚಿವರು ಸಭೆ ಮುಂದುವರಿಸಿದರು. ತುಂಬಾ ಹೊತ್ತು ಕಳೆದ ಬಳಿಕ ಜಲಮಿಷನ್ ಯೋಜನೆಗೆ ಸಂಬಂಧಿಸಿದ ಅಧಿಕಾರಿ ಸಭೆಗೆ ಎಂಟ್ರಿ ಕೊಟ್ಟರು. ತಕ್ಷಣ ಗರಂ ಆದ ಸಚಿವರು ಅಧಿಕಾರಿಯನ್ನು ಸಭೆಯಿಂದ ಹೊರಗೆ ಕಳುಹಿಸಿದರು. ಸಭೆ ಮುಗಿದು ಸಚಿವರು ಹೊರಗೆ ಹೋಗುವ ವೇಳೆಯೂ ಅಧಿಕಾರಿ ಅಲ್ಲೇ ನಿಂತಿದ್ದರು. ಇದನ್ನು ಗಮನಿಸಿದ ಸುನಿಲ್ ಕುಮಾರ್ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. 

ಇತ್ತೀಚಿನ ಸುದ್ದಿ

ಜಾಹೀರಾತು