12:15 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಲೇಟ್ ಆಗಿ ಸಭೆಗೆ ಎಂಟ್ರಿ ಕೊಟ್ಟ ಅಧಿಕಾರಿಗೆ ಸಚಿವ ಸುನಿಲ್ ಕುಮಾರ್ ಗೇಟ್ ಪಾಸ್ ! : ನಂತರ ನಡೆಯಿತು ಫುಲ್ ಕ್ಲಾಸ್ !!

10/08/2021, 13:09

ಕಾರ್ಕಳ(reporterkarnataka.com): ತಡವಾಗಿ ಸಭೆಗೆ ಆಗಮಿಸಿದ ಅಧಿಕಾರಿಯನ್ನು ನೂತನ ಸಚಿವ ಗೇಟ್ ಔಟ್ ಮಾಡಿದ ಘಟನೆ ಕಾರ್ಕಳದಲ್ಲಿ ನಡೆದಿದೆ. ಸಭೆ ಮುಗಿಯುವ ವರೆಗೆ ಹೊರಗಡೆ ನಿಂತಿದ್ದ ಅಧಿಕಾರಿಗೆ ಸಚಿವರು ನಂತರ ಫುಲ್ ಕ್ಲಾಸ್ ಕೂಡ ತೆಗೆದುಕೊಂಡರು.

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಅಧ್ಯಕ್ಷತೆಯಲ್ಲಿ ಕಾರ್ಕಳ ತಾಲೂಕು ಪಂಚಾಯತ್ ಸಾಮರ್ಥ್ಯ ಸೌಧದಲ್ಲಿ ಸಭೆ ಆರಂಭವಾಗಿತ್ತು. ಜಲಜೀವನ್ ವಿಷನ್ ಯೋಜನೆಗೆ ಸಂಬಂಧಿಸಿದ ಮಾಹಿತಿಯನ್ನು ಸಚಿವರು ಕೇಳಿದರು. ಆದರೆ ಉತ್ತರಿಸಲು ಇಲಾಖೆಗೆ ಸಂಬಂಧಿಸಿದ ಯಾವುದೇ ಅಧಿಕಾರಿಗಳು ಇರಲಿಲ್ಲ. 

ಸಚಿವರು ಸಭೆ ಮುಂದುವರಿಸಿದರು. ತುಂಬಾ ಹೊತ್ತು ಕಳೆದ ಬಳಿಕ ಜಲಮಿಷನ್ ಯೋಜನೆಗೆ ಸಂಬಂಧಿಸಿದ ಅಧಿಕಾರಿ ಸಭೆಗೆ ಎಂಟ್ರಿ ಕೊಟ್ಟರು. ತಕ್ಷಣ ಗರಂ ಆದ ಸಚಿವರು ಅಧಿಕಾರಿಯನ್ನು ಸಭೆಯಿಂದ ಹೊರಗೆ ಕಳುಹಿಸಿದರು. ಸಭೆ ಮುಗಿದು ಸಚಿವರು ಹೊರಗೆ ಹೋಗುವ ವೇಳೆಯೂ ಅಧಿಕಾರಿ ಅಲ್ಲೇ ನಿಂತಿದ್ದರು. ಇದನ್ನು ಗಮನಿಸಿದ ಸುನಿಲ್ ಕುಮಾರ್ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. 

ಇತ್ತೀಚಿನ ಸುದ್ದಿ

ಜಾಹೀರಾತು