12:34 PM Tuesday28 - July 2026
ಬ್ರೇಕಿಂಗ್ ನ್ಯೂಸ್
Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ…

ಇತ್ತೀಚಿನ ಸುದ್ದಿ

ಲೇಟ್ ಆಗಿ ಸಭೆಗೆ ಎಂಟ್ರಿ ಕೊಟ್ಟ ಅಧಿಕಾರಿಗೆ ಸಚಿವ ಸುನಿಲ್ ಕುಮಾರ್ ಗೇಟ್ ಪಾಸ್ ! : ನಂತರ ನಡೆಯಿತು ಫುಲ್ ಕ್ಲಾಸ್ !!

10/08/2021, 13:09

ಕಾರ್ಕಳ(reporterkarnataka.com): ತಡವಾಗಿ ಸಭೆಗೆ ಆಗಮಿಸಿದ ಅಧಿಕಾರಿಯನ್ನು ನೂತನ ಸಚಿವ ಗೇಟ್ ಔಟ್ ಮಾಡಿದ ಘಟನೆ ಕಾರ್ಕಳದಲ್ಲಿ ನಡೆದಿದೆ. ಸಭೆ ಮುಗಿಯುವ ವರೆಗೆ ಹೊರಗಡೆ ನಿಂತಿದ್ದ ಅಧಿಕಾರಿಗೆ ಸಚಿವರು ನಂತರ ಫುಲ್ ಕ್ಲಾಸ್ ಕೂಡ ತೆಗೆದುಕೊಂಡರು.

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಅಧ್ಯಕ್ಷತೆಯಲ್ಲಿ ಕಾರ್ಕಳ ತಾಲೂಕು ಪಂಚಾಯತ್ ಸಾಮರ್ಥ್ಯ ಸೌಧದಲ್ಲಿ ಸಭೆ ಆರಂಭವಾಗಿತ್ತು. ಜಲಜೀವನ್ ವಿಷನ್ ಯೋಜನೆಗೆ ಸಂಬಂಧಿಸಿದ ಮಾಹಿತಿಯನ್ನು ಸಚಿವರು ಕೇಳಿದರು. ಆದರೆ ಉತ್ತರಿಸಲು ಇಲಾಖೆಗೆ ಸಂಬಂಧಿಸಿದ ಯಾವುದೇ ಅಧಿಕಾರಿಗಳು ಇರಲಿಲ್ಲ. 

ಸಚಿವರು ಸಭೆ ಮುಂದುವರಿಸಿದರು. ತುಂಬಾ ಹೊತ್ತು ಕಳೆದ ಬಳಿಕ ಜಲಮಿಷನ್ ಯೋಜನೆಗೆ ಸಂಬಂಧಿಸಿದ ಅಧಿಕಾರಿ ಸಭೆಗೆ ಎಂಟ್ರಿ ಕೊಟ್ಟರು. ತಕ್ಷಣ ಗರಂ ಆದ ಸಚಿವರು ಅಧಿಕಾರಿಯನ್ನು ಸಭೆಯಿಂದ ಹೊರಗೆ ಕಳುಹಿಸಿದರು. ಸಭೆ ಮುಗಿದು ಸಚಿವರು ಹೊರಗೆ ಹೋಗುವ ವೇಳೆಯೂ ಅಧಿಕಾರಿ ಅಲ್ಲೇ ನಿಂತಿದ್ದರು. ಇದನ್ನು ಗಮನಿಸಿದ ಸುನಿಲ್ ಕುಮಾರ್ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. 

ಇತ್ತೀಚಿನ ಸುದ್ದಿ

ಜಾಹೀರಾತು