11:26 AM Saturday6 - June 2026
ಬ್ರೇಕಿಂಗ್ ನ್ಯೂಸ್
ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ… ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ… ನಿಜವಾಯ್ತು ಮಿಥನ್ ರೈ ಭವಿಷ್ಯವಾಣಿ!: ಕೊನೆಗೂ ಡಿಕೆಶಿ ಆದ್ರು ಸಿಎಂ!!; ಇದೀಗ ವೀಡಿಯೊ… ಸಾಮೂಹಿಕ ನಾಯಕತ್ವದಲ್ಲೇ ಮುಂದುವರಿಯಿರಿ: ಸಿಎಂ ಡಿಕೆಶಿಗೆ ಹೈಕಮಾಂಡ್‌ ಕಟ್ಟುನಿಟ್ಟಿನ ಸೂಚನೆ

ಇತ್ತೀಚಿನ ಸುದ್ದಿ

ತಡರಾತ್ರಿ ರಹಸ್ಯ ಸಭೆ ಸಕ್ಸಸ್: ರಾಮಲಿಂಗಾ ರೆಡ್ಡಿ ಮನವೊಲಿಸಿದ ಸಿಎಂ ಡಿ.ಕೆ. ಶಿವಕುಮಾರ್

06/06/2026, 11:25

ಬೆಂಗಳೂರು(reporterkarnataka.com): ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಾಮಲಿಂಗಾ ರೆಡ್ಡಿ ಜೊತೆಗಿನ ಸಂಧಾನ ಸಕ್ಸಸ್ ಆಗಿದೆ. ಕಳೆದ ರಾತ್ರಿ ರಾಮಲಿಂಗಾರೆಡ್ಡಿ ಜೊತೆಗೆ ಸಿಎಂ ಡಿ.ಕೆ. ಶಿವಕುಮಾರ್ ಒನ್ ಟು ಒನ್ ಮೀಟಿಂಗ್ ಮಾಡಿದ್ದಾರೆ. ಜಯನಗರದ ಹೋಟೆಲ್ ವೊಂದರಲ್ಲಿ ರಾಮಲಿಂಗಾರೆಡ್ಡಿ ಜತೆ ಚರ್ಚೆ ನಡೆಸಿದ್ದಾರೆ. ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯುವಂತೆ ರಾಮಲಿಂಗಾರೆಡ್ಡಿ ಅವರ ಮನವೊಲಿಸಿದ್ದಾರೆ.
ರಾಮಲಿಂಗಾ ರೆಡ್ಡಿ ರಾಜೀನಾಮೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡೂವರೆ ಗಂಟೆಗಳ ಕಾಲ ಮಾತುಕತೆ ನಡೆಸಲಾಗಿದೆ. ಸಭೆ ಬಳಿಕ ತಮ್ಮ ನಿಲುವಿನ ಬಗ್ಗೆ ರಾಮಲಿಂಗಾರೆಡ್ಡಿ ಇನ್ನೂ ಸ್ಪಷ್ಟಪಡಿಸಿಲ್ಲ. ಇದು ಪಕ್ಷದ ವಿಚಾರ ನಾವೇ ಬಗೆಹರಿಸಿಕೊಳ್ಳುತ್ತೇವೆ ಎಂದಷ್ಟೇ ಸಿಎಂ ಹೇಳಿದ್ದಾರೆ.
ನಾವೆಲ್ಲ ಕೂತು ಮಾತನಾಡಿದ್ದೇವೆ. ಪರಿಹಾರ ಆಗಿದೆ ಎಂದು ರಾಮಲಿಂಗಾರೆಡ್ಡಿ ಮನವೊಲಿಕೆ ಬಳಿಕ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಇದು ನಮ್ಮ ಫ್ಯಾಮಿಲಿ ಪ್ರಾಬ್ಲಮ್, ನಾನು, ರಾಮಲಿಂಗಾರೆಡ್ಡಿ, ಹೆಚ್.ಎಂ. ರೇವಣ್ಣ 1980ರಿಂದಲೂ ಸ್ನೇಹಿತರು. ನಾನು ಚೀಫ್ ಮಿನಿಸ್ಟರ್, ರಾಮಲಿಂಗಾರೆಡ್ಡಿ ಮಿನಿಸ್ಟರ್. ನಾವೆಲ್ಲರೂ ಸ್ನೇಹಿತರು. ನಾವು ಕಾಂಗ್ರೆಸ್ ನಲ್ಲಿ ಬೆಳೆದವರು. ಪಕ್ಷವನ್ನು ಬೆಳೆಸುತ್ತಿರುವವರು. ಬೆಂಗಳೂರು ಅಭಿವೃದ್ಧಿ ಆಗಬೇಕು ಎನ್ನುವವರು. ರಾಮಲಿಂಗಾರೆಡ್ಡಿ ಏನು ಪಕ್ಷ ಬಿಟ್ಟು ಹೋಗುತ್ತೇನೆ ಎಂದು ಹೇಳಿಲ್ಲ. ಅವರ ನೋವು ಹೇಳಿಕೊಂಡಿದ್ದಾರೆ. ಮಿಸ್ ಕಮ್ಯುನಿಕೇಷನ್ ಆಗಿದೆ ಎಂದು ಹೇಳಿದ್ದಾರೆ.
ತಮಗೆ ಜಲ ಸಂಪನ್ಮೂಲ ಖಾತೆ ಬೇಡ ಎಂದಿದ್ದಾರೆ. ಎಲ್ಲವನ್ನು ಹೇಳಬೇಕಾದ ಅನಿವಾರ್ಯತೆ ಇಲ್ಲ. ನಾವೆಲ್ಲರೂ ಕಾಂಗ್ರೆಸ್ ಪಕ್ಷವನ್ನು ಫಸ್ಟ್ ಕ್ಲಾಸ್ ಆಗಿ ನಡೆಸುತ್ತಿದ್ದೇವೆ. ಹಿರಿಯ ನಾಯಕರಿಗೆ ಅವಕಾಶ ಕೊಟ್ಟಿದ್ದೇವೆ. ಎಲ್ಲಾ ಸರಿ ಮಾಡುತ್ತೇವೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಎಲ್ಲಾ ನಿವಾರಣೆಯಾಗಿದೆ. ಅವರು ಏನು ಹೇಳಿದರೋ ಅದನ್ನೇ ನಾನು ಹೇಳೋದು ಎಂದು ಡಿ.ಕೆ. ಶಿವಕುಮಾರ್ ಜತೆಗಿನ ಸಭೆ ಬಳಿಕ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು