4:23 AM Saturday12 - July 2025
ಬ್ರೇಕಿಂಗ್ ನ್ಯೂಸ್
ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ…

ಇತ್ತೀಚಿನ ಸುದ್ದಿ

ಲತಾ ದೀದಿ ಅಗಲಿಕೆಯ ನೋವು ಶಬ್ದಗಳಲ್ಲಿ ವಿವರಿಸಲಾಗದು: ದೀದಿ ಜತೆಗಿನ ಫೋಟೋ ಹಂಚಿಕೊಂಡ ಪ್ರಧಾನಿ ಮೋದಿ

06/02/2022, 21:12

ಹೊಸದಿಲ್ಲಿ(reporterkarnataka.com): ಖ್ಯಾತ ಗಾಯಕಿ ಲತಾ ಮಂಗೇಶ್ಕರ್‌ ಅವರು ಇಂದು ಕೊನೆಯುಸಿರೆಳೆದಿದ್ದು, ಲತಾ ದೀದಿ ಅವರ ನಿಧನಕ್ಕೆ ಪ್ರಧಾನಿ ಮೋದಿ ಸರಣಿ ಟ್ವೀಟ್‌ ಗಳ ಮೂಲಕ ಸಂತಾಪ ಸೂಚಿಸಿದ್ದಾರೆ.

ಈ ವೇಳೆ ಪ್ರಧಾನಿ ಮೋದಿ ತಾವು ಲತಾ ಮಂಗೇಶ್ಕರ್‌ ಜತೆಗಿದ್ದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

‘ಕಾಳಜಿ ಹಾಗೂ ದಯೆಯ ಪ್ರತಿರೂಪವೇ ಆಗಿದ್ದ ಲತಾ ದೀದಿ ಅವರನ್ನು ಕಳೆದುಕೊಂಡ ದುಃಖವನ್ನು ಶಬ್ದದದಲ್ಲಿ ವಿವರಿಸಲಾಗುವುದಿಲ್ಲ. ಅವರ ಅಗಲಿಕೆಯಿಂದ ಉಂಟಾದ ಶೂನ್ಯವನ್ನು ತುಂಬಲು ಯಾರಿಂದಲೂ ಸಾಧ್ಯವಿಲ್ಲ. ಅವರು ಭಾರತೀಯ ಸಂಸ್ಕೃತಿಯ ಪ್ರತಿನಿಧಿಯಾಗಿದ್ದರು. ತಮ್ಮ ಕಂಠದಿಂದ ಜನರನ್ನು ಮಂತ್ರಮುಗ್ದರನ್ನಾಗಿರುವ ಶಕ್ತಿ ಅವರಲ್ಲಿತ್ತು. ಮುಂದಿನ ಪೀಳಿಗೆಗೆ ಅವರು ಸದಾ ಪ್ರೇರಣೆಯಾಗಿರುತ್ತಾರೆ’ ಎಂದಿದ್ದಾರೆ.

‘ಲತಾ ದೀದಿಯವರ ಹಾಡುಗಳು ವಿವಿಧ ಭಾವನೆಗಳನ್ನು ಮೂಡಿಸುತ್ತವೆ. ಭಾರತೀಯ ಚಿತ್ರರಂಗದಲ್ಲಿ ದಶಕಗಳಿಂದ ಆದ ಪರಿವರ್ತನೆಯನ್ನು ಲತಾ ಮಂಗೇಶ್ಕರ್​ ತುಂಬ ಹತ್ತಿರದಿಂದ ನೋಡಿದ್ದಾರೆ. ಸಿನಿಮಾ ಕ್ಷೇತ್ರ ಹೊರತುಪಡಿಸಿ ಲತಾ ಅವರು ಭಾರತದ ಅಭಿವೃದ್ಧಿಯ ಕುರಿತು ತುಡಿತ ಹೊಂದಿದ್ದರು. ಭಾರತವನ್ನು ಒಂದು ಬಲಿಷ್ಠ, ಅಭಿವೃದ್ಧಿ ದೇಶವನ್ನಾಗಿ ನೋಡುವುದು ಅವರ ಅತಿದೊಡ್ಡ ಬಯಕೆಯಾಗಿತ್ತು’ ಎಂದು ಬರೆದುಕೊಂಡಿದ್ದಾರೆ.

‘ಲತಾ ದೀದಿಯಿಂದ ಹೆಚ್ಚು ಪ್ರೀತಿ ಪಡೆದಿದ್ದೇನೆ, ಅವರ ಪ್ರೀತಿಪಾತ್ರರಲ್ಲಿ ನಾನೂ ಒಬ್ಬ ಎಂದು ಹೇಳುವುದು ನನಗೆ ಹೆಮ್ಮೆ ಅನಿಸುತ್ತದೆ. ಅವರೊಂದಿಗೆ ನಾನು ಕಳೆದ ಕ್ಷಣಗಳು, ಆಡಿದ ಮಾತುಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಅವರ ಕುಟುಂಬಸ್ಥರೊಂದಿಗೆ ಮಾತನಾಡಿ ಸಾಂತ್ವಾನ ಹೇಳಿದ್ದೇನೆ’. ಲತಾ ದೀದಿಯನ್ನು ಕಳೆದುಕೊಂಡ ದೇಶದ ಜನತೆಗೆ ಕೂಡ ಪ್ರಧಾನಿ ಮೋದಿ ಸಾಂತ್ವಾನ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು