1:20 AM Thursday13 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ಲತಾ ದೀದಿ ಅಗಲಿಕೆಯ ನೋವು ಶಬ್ದಗಳಲ್ಲಿ ವಿವರಿಸಲಾಗದು: ದೀದಿ ಜತೆಗಿನ ಫೋಟೋ ಹಂಚಿಕೊಂಡ ಪ್ರಧಾನಿ ಮೋದಿ

06/02/2022, 21:12

ಹೊಸದಿಲ್ಲಿ(reporterkarnataka.com): ಖ್ಯಾತ ಗಾಯಕಿ ಲತಾ ಮಂಗೇಶ್ಕರ್‌ ಅವರು ಇಂದು ಕೊನೆಯುಸಿರೆಳೆದಿದ್ದು, ಲತಾ ದೀದಿ ಅವರ ನಿಧನಕ್ಕೆ ಪ್ರಧಾನಿ ಮೋದಿ ಸರಣಿ ಟ್ವೀಟ್‌ ಗಳ ಮೂಲಕ ಸಂತಾಪ ಸೂಚಿಸಿದ್ದಾರೆ.

ಈ ವೇಳೆ ಪ್ರಧಾನಿ ಮೋದಿ ತಾವು ಲತಾ ಮಂಗೇಶ್ಕರ್‌ ಜತೆಗಿದ್ದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

‘ಕಾಳಜಿ ಹಾಗೂ ದಯೆಯ ಪ್ರತಿರೂಪವೇ ಆಗಿದ್ದ ಲತಾ ದೀದಿ ಅವರನ್ನು ಕಳೆದುಕೊಂಡ ದುಃಖವನ್ನು ಶಬ್ದದದಲ್ಲಿ ವಿವರಿಸಲಾಗುವುದಿಲ್ಲ. ಅವರ ಅಗಲಿಕೆಯಿಂದ ಉಂಟಾದ ಶೂನ್ಯವನ್ನು ತುಂಬಲು ಯಾರಿಂದಲೂ ಸಾಧ್ಯವಿಲ್ಲ. ಅವರು ಭಾರತೀಯ ಸಂಸ್ಕೃತಿಯ ಪ್ರತಿನಿಧಿಯಾಗಿದ್ದರು. ತಮ್ಮ ಕಂಠದಿಂದ ಜನರನ್ನು ಮಂತ್ರಮುಗ್ದರನ್ನಾಗಿರುವ ಶಕ್ತಿ ಅವರಲ್ಲಿತ್ತು. ಮುಂದಿನ ಪೀಳಿಗೆಗೆ ಅವರು ಸದಾ ಪ್ರೇರಣೆಯಾಗಿರುತ್ತಾರೆ’ ಎಂದಿದ್ದಾರೆ.

‘ಲತಾ ದೀದಿಯವರ ಹಾಡುಗಳು ವಿವಿಧ ಭಾವನೆಗಳನ್ನು ಮೂಡಿಸುತ್ತವೆ. ಭಾರತೀಯ ಚಿತ್ರರಂಗದಲ್ಲಿ ದಶಕಗಳಿಂದ ಆದ ಪರಿವರ್ತನೆಯನ್ನು ಲತಾ ಮಂಗೇಶ್ಕರ್​ ತುಂಬ ಹತ್ತಿರದಿಂದ ನೋಡಿದ್ದಾರೆ. ಸಿನಿಮಾ ಕ್ಷೇತ್ರ ಹೊರತುಪಡಿಸಿ ಲತಾ ಅವರು ಭಾರತದ ಅಭಿವೃದ್ಧಿಯ ಕುರಿತು ತುಡಿತ ಹೊಂದಿದ್ದರು. ಭಾರತವನ್ನು ಒಂದು ಬಲಿಷ್ಠ, ಅಭಿವೃದ್ಧಿ ದೇಶವನ್ನಾಗಿ ನೋಡುವುದು ಅವರ ಅತಿದೊಡ್ಡ ಬಯಕೆಯಾಗಿತ್ತು’ ಎಂದು ಬರೆದುಕೊಂಡಿದ್ದಾರೆ.

‘ಲತಾ ದೀದಿಯಿಂದ ಹೆಚ್ಚು ಪ್ರೀತಿ ಪಡೆದಿದ್ದೇನೆ, ಅವರ ಪ್ರೀತಿಪಾತ್ರರಲ್ಲಿ ನಾನೂ ಒಬ್ಬ ಎಂದು ಹೇಳುವುದು ನನಗೆ ಹೆಮ್ಮೆ ಅನಿಸುತ್ತದೆ. ಅವರೊಂದಿಗೆ ನಾನು ಕಳೆದ ಕ್ಷಣಗಳು, ಆಡಿದ ಮಾತುಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಅವರ ಕುಟುಂಬಸ್ಥರೊಂದಿಗೆ ಮಾತನಾಡಿ ಸಾಂತ್ವಾನ ಹೇಳಿದ್ದೇನೆ’. ಲತಾ ದೀದಿಯನ್ನು ಕಳೆದುಕೊಂಡ ದೇಶದ ಜನತೆಗೆ ಕೂಡ ಪ್ರಧಾನಿ ಮೋದಿ ಸಾಂತ್ವಾನ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು