6:20 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಲತಾ ದೀದಿ ಅಗಲಿಕೆಯ ನೋವು ಶಬ್ದಗಳಲ್ಲಿ ವಿವರಿಸಲಾಗದು: ದೀದಿ ಜತೆಗಿನ ಫೋಟೋ ಹಂಚಿಕೊಂಡ ಪ್ರಧಾನಿ ಮೋದಿ

06/02/2022, 21:12

ಹೊಸದಿಲ್ಲಿ(reporterkarnataka.com): ಖ್ಯಾತ ಗಾಯಕಿ ಲತಾ ಮಂಗೇಶ್ಕರ್‌ ಅವರು ಇಂದು ಕೊನೆಯುಸಿರೆಳೆದಿದ್ದು, ಲತಾ ದೀದಿ ಅವರ ನಿಧನಕ್ಕೆ ಪ್ರಧಾನಿ ಮೋದಿ ಸರಣಿ ಟ್ವೀಟ್‌ ಗಳ ಮೂಲಕ ಸಂತಾಪ ಸೂಚಿಸಿದ್ದಾರೆ.

ಈ ವೇಳೆ ಪ್ರಧಾನಿ ಮೋದಿ ತಾವು ಲತಾ ಮಂಗೇಶ್ಕರ್‌ ಜತೆಗಿದ್ದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

‘ಕಾಳಜಿ ಹಾಗೂ ದಯೆಯ ಪ್ರತಿರೂಪವೇ ಆಗಿದ್ದ ಲತಾ ದೀದಿ ಅವರನ್ನು ಕಳೆದುಕೊಂಡ ದುಃಖವನ್ನು ಶಬ್ದದದಲ್ಲಿ ವಿವರಿಸಲಾಗುವುದಿಲ್ಲ. ಅವರ ಅಗಲಿಕೆಯಿಂದ ಉಂಟಾದ ಶೂನ್ಯವನ್ನು ತುಂಬಲು ಯಾರಿಂದಲೂ ಸಾಧ್ಯವಿಲ್ಲ. ಅವರು ಭಾರತೀಯ ಸಂಸ್ಕೃತಿಯ ಪ್ರತಿನಿಧಿಯಾಗಿದ್ದರು. ತಮ್ಮ ಕಂಠದಿಂದ ಜನರನ್ನು ಮಂತ್ರಮುಗ್ದರನ್ನಾಗಿರುವ ಶಕ್ತಿ ಅವರಲ್ಲಿತ್ತು. ಮುಂದಿನ ಪೀಳಿಗೆಗೆ ಅವರು ಸದಾ ಪ್ರೇರಣೆಯಾಗಿರುತ್ತಾರೆ’ ಎಂದಿದ್ದಾರೆ.

‘ಲತಾ ದೀದಿಯವರ ಹಾಡುಗಳು ವಿವಿಧ ಭಾವನೆಗಳನ್ನು ಮೂಡಿಸುತ್ತವೆ. ಭಾರತೀಯ ಚಿತ್ರರಂಗದಲ್ಲಿ ದಶಕಗಳಿಂದ ಆದ ಪರಿವರ್ತನೆಯನ್ನು ಲತಾ ಮಂಗೇಶ್ಕರ್​ ತುಂಬ ಹತ್ತಿರದಿಂದ ನೋಡಿದ್ದಾರೆ. ಸಿನಿಮಾ ಕ್ಷೇತ್ರ ಹೊರತುಪಡಿಸಿ ಲತಾ ಅವರು ಭಾರತದ ಅಭಿವೃದ್ಧಿಯ ಕುರಿತು ತುಡಿತ ಹೊಂದಿದ್ದರು. ಭಾರತವನ್ನು ಒಂದು ಬಲಿಷ್ಠ, ಅಭಿವೃದ್ಧಿ ದೇಶವನ್ನಾಗಿ ನೋಡುವುದು ಅವರ ಅತಿದೊಡ್ಡ ಬಯಕೆಯಾಗಿತ್ತು’ ಎಂದು ಬರೆದುಕೊಂಡಿದ್ದಾರೆ.

‘ಲತಾ ದೀದಿಯಿಂದ ಹೆಚ್ಚು ಪ್ರೀತಿ ಪಡೆದಿದ್ದೇನೆ, ಅವರ ಪ್ರೀತಿಪಾತ್ರರಲ್ಲಿ ನಾನೂ ಒಬ್ಬ ಎಂದು ಹೇಳುವುದು ನನಗೆ ಹೆಮ್ಮೆ ಅನಿಸುತ್ತದೆ. ಅವರೊಂದಿಗೆ ನಾನು ಕಳೆದ ಕ್ಷಣಗಳು, ಆಡಿದ ಮಾತುಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಅವರ ಕುಟುಂಬಸ್ಥರೊಂದಿಗೆ ಮಾತನಾಡಿ ಸಾಂತ್ವಾನ ಹೇಳಿದ್ದೇನೆ’. ಲತಾ ದೀದಿಯನ್ನು ಕಳೆದುಕೊಂಡ ದೇಶದ ಜನತೆಗೆ ಕೂಡ ಪ್ರಧಾನಿ ಮೋದಿ ಸಾಂತ್ವಾನ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು