1:59 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ ಪುಸ್ತಕಗಳನ್ನು ದೇಶದ ಮೂಲೆ ಮೂಲೆಗೆ ತಲುಪಿಸುವ ಜ್ಞಾನ ಅಂಚೆ ಸೇವೆಗೆ ಚಾಲನೆ

02/05/2025, 20:43

ಬೆಂಗಳೂರು (reporterkarnataka.com): ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಮತ್ತು ಧಾರ್ಮಿಕ ಪುಸ್ತಕಗಳನ್ನು ದೇಶದ ಮೂಲೆ ಮೂಲೆಗಳ ಪ್ರದೇಶಗಳಿಗೂ ಕೈಗೆಟುಕುವಂತೆ ಮಾಡುವ ಗುರಿಯೊಂದಿಗೆ ಭಾರತೀಯ ಅಂಚೆ ಇಲಾಖೆಯ ಪ್ರಾರಂಭಿಸಿರುವ ಹೊಸ ಸೇವೆ ‘ಜ್ಞಾನ ಅಂಚೆ ‘ ಗೆ ಇಂದು ಬೆಂಗಳೂರಿನ ರಾಜಾಜಿನಗರ ಪ್ರಧಾನ ಅಂಚೆ ಕಚೇರಿಯಲ್ಲಿಂದು ಪಶ್ಚಿಮ ವಿಭಾಗದ ಹಿರಿಯ ಅಂಚೆ ಅಧೀಕ್ಷಕಿ ಯು.ಸೂರ್ಯ ಚಾಲನೆ ನೀಡಿದರು.
ಈ ಸೇವೆಯನ್ನು ಇಂದು ಮೇ 1ರಿಂದದೇಶಾದ್ಯಂತ ಎಲ್ಲಾ ಇಲಾಖಾ ಅಂಚೆ ಕಚೇರಿಗಳ ಮೂಲಕ ಲಭ್ಯವಿರುತ್ತದೆ. ಈ ಸೇವೆಯು ವಿಶೇಷವಾಗಿ ದೂರದ ಮತ್ತು ಸೇವಾ ವಂಚಿತ ಪ್ರದೇಶಗಳಲ್ಲಿ ಕಲಿಕಾ ಸಂಪನ್ಮೂಲಗಳನ್ನು ಹೆಚ್ಚು ಲಭ್ಯವಿರುವಂತೆ ಮಾಡುವ ಮೂಲಕ ಶೈಕ್ಷಣಿಕ ಅಂತರವನ್ನು ಕಡಿಮೆ ಮಾಡುವ ಮಹತ್ವಾಕಾಂಕ್ಷೆಯನ್ನು ಹೊಂದಿದೆ.
ಈ ಸೇವೆಯು ಆಕರ್ಷಕವಾದ ದರ ನೀತಿಯನ್ನು ಒಳಗೊಂಡಿದ್ದು, 300 ಗ್ರಾಂ ತೂಕದ ಪ್ಯಾಕೆಟ್‌ಗಳಿಗೆ ಕೇವಲ ₹20 ರಿಂದ ಪ್ರಾರಂಭವಾಗುವ ದರಗಳು. 5 ಕಿಲೋಗ್ರಾಂಗಳಷ್ಟು ಭಾರವಾದ ಪ್ಯಾಕೇಜ್‌ಗಳಿಗೆ, ಗರಿಷ್ಠ ಶುಲ್ಕ ₹100 ಆಗಿರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು