2:59 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

16/01/2026, 19:09

ದಾವಣಗೆರೆ(reporterkarnataka.com): ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಗೃಹ ಸಚಿವರಿಗೆ ಪೊಲೀಸರ ಮೇಲೆ‌ ನಿಯಂತ್ರಣ ಇಲ್ಲ. ಯಾರಿಗೂ ಯಾರದೇ ಭಯ ಇಲ್ಲ. ಘನತೆ ಗೌರವ ಮೀರಿ ಅತ್ಯಂತ ಕೀಳು ಮಟ್ಟದ ಭಾಷೆ ಬಳಸುತ್ತಿದ್ದಾರೆ ಅಧಿಕಾರಿಗಳು, ಜನರು ಈ ಸರ್ಕಾರದ ವಿರುದ್ಧ ತಿರುಗಿ ಬೀಳುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದರು.
ದಾವಣಗೆರೆಯ ಹರಿಹರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿಡ್ಲಘಟ್ಟದಲ್ಲಿ ಪೌರಾಯುಕ್ತೆ ಮೇಲೆ ಕಾಂಗ್ರೆಸ್ ನಾಯಕ ಆವಾಜ್ ಹಾಕಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಗೃಹ ಸಚಿವರಿಗೆ ಪೊಲೀಸರ ಮೇಲೆ‌ ನಿಯಂತ್ರಣ ಇಲ್ಲ. ಪೊಲೀಸ್ ಠಾಣೆಗಳು ಕಲೆಕ್ಷನ್ ಸೆಂಟರ್‌ಗಳಾಗಿವೆ. ಯಾರ ಭಯ ಯಾರಿಗೂ ಇಲ್ಲ. ಕಾಂಗ್ರೆಸ್ ನಾಯಕರು ಘನತೆ ಗೌರವ ಮೀರಿ ಅತ್ಯಂತ ಕೀಳು ಮಟ್ಟದ ಭಾಷೆ ಬಳಸುತ್ತಿದ್ದಾರೆ. ಅಧಿಕಾರಿಗಳು, ಜನರು ಈ ಸರ್ಕಾರದ ವಿರುದ್ಧ ತಿರುಗಿ ಬೀಳುತ್ತಾರೆ ಎಂದು ಎಚ್ಚರಿಸಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಬಳ್ಳಾರಿಯಿಂದ ಪಾದಯಾತ್ರೆ ಮಾಡುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಕುರಿತು ಪಕ್ಷದ ರಾಜ್ಯಾಧ್ಯಕ್ಷರು ಹೈಕಮಾಂಡ್ ಜೊತೆ ಮಾತನಾಡಿ ಶೀಘ್ರ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.
ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಮಾಡುವ ವಿಚಾರ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈಗ ಸದ್ಯಕ್ಕೆ ಆ ಪ್ರಶ್ನೆಯೇ ಉದ್ಭವಿಸುವುದಿಲ್ಲ. ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಕೆಲಸ ಮಾಡುತ್ತಿದ್ದಾರೆ, ಸಂಘಟನೆ ನಡೆಯುತ್ತಿದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು