2:53 AM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

Law & Order | ಗೃಹ ಖಾತೆ ಬದುಕಿದೆಯಾ? ಪೊಲೀಸರನ್ನೇ ರಕ್ಷಣೆ ಮಾಡಲು ಮಿಲ್ಟ್ರಿ ತರುವ ಪರಿಸ್ಥಿತಿ ಇದೆ: ಮಾಜಿ ಹೋಮ್ ಮಿನಿಸ್ಟರ್ ಆರಗ ಜ್ಞಾನೇಂದ್ರ

22/03/2025, 21:09

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ರಾಜ್ಯದಲ್ಲಿ ಗೃಹ ಖಾತೆ ಬದುಕಿದೆಯಾ? ಎಂದು ಇತ್ತೀಚಿನ ದಿನಗಳಲ್ಲಿ ನೋಡಿದರೆ ನಮಗೆ ಅನಿಸುತ್ತಿದೆ. ಪೊಲೀಸರು ಸಂರಕ್ಷಣೆ ಮಾಡಬೇಕಿತ್ತು. ಈಗ ಪೊಲೀಸರನ್ನೇ ರಕ್ಷಣೆ ಮಾಡಲು ಮಿಲ್ಟ್ರಿ ತರುವ ಪರಿಸ್ಥಿತಿ ಆಗಿದೆ. ಅವರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಮಾಜಿ ಗೃಹ ಸಚಿವ, ಹಾಲಿ ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಮೈಸೂರಲ್ಲಿ ಐಪಿಎಸ್ ಅಧಿಕಾರಿಯ ವಾಹನ ಜಖಂ ಮಾಡಿದರು. ಒಂದು ಸಾವಿರ ಜನರ ಮೇಲೆ ಎಫ್ಐಆರ್ ಹಾಕಿ ಹದಿನೇಳು ಮಂದಿಯನ್ನು ಅರೆಸ್ಟ್ ಮಾಡಿದರೆ ಅವರನ್ನು ಅರೆಸ್ಟ್ ಮಾಡಬಾರದು ಎಂದು ಪೋಲೀಸರ ಮೇಲೆ ಒತ್ತಡ ಇತ್ತು. ಕೇಸ್ ದಾಖಲಿಸದ ಅಧಿಕಾರಿಯನ್ನು ಕೆಲಸದಿಂದ ಕಿತ್ತು ಹಾಕಿದ್ದಾರೆ. ಒಂದು ಸಮುದಾಯದ ಜನ ಏನು ಬೇಕಾದರೂ ಮಾಡಬಹುದು ಎಂದುಕೊಂಡಿದ್ದಾರೆ ಎಂದರು.

ಶಾಂತಿ ಸುವ್ಯವಸ್ಥೆ ಹೋಗಿದೆ. ಆತ್ಮಹತ್ಯೆಗಳು ಎಷ್ಟಾಗಿದ್ದಾವೇ? ಸರ್ಕಾರಿ ನೌಕರರು ಎಷ್ಟು ಜನ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇಡೀ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಮರೀಚಿಕೆ ಆಗಿದೆ. ಮಾದಕ ವಸ್ತುಗಳು, ಸ್ಮಗ್ಲಿಂಗ್, ರಿಯಲ್ ಎಸ್ಟೇಟ್ ಈ ರೀತಿಯಲ್ಲಿ ಪೊಲೀಸರದ್ದೇ ಇನ್ವಾಲ್ ಮೆಂಟ್ ಇದೆ.
ಹೀಗಾಗಿ ಪೊಲೀಸರು ಪೊಲೀಸರಾಗಿ ಉಳಿದಿಲ್ಲ. ಕಳೆದ ಎರಡು ವರ್ಷಗಳಲ್ಲಿ ಇಲಾಖೆಯನ್ನು ಹಾಳು ಮಾಡಲಾಗಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು