11:53 AM Friday9 - May 2025
ಬ್ರೇಕಿಂಗ್ ನ್ಯೂಸ್
Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ… Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ… ಮಾಜಿ ಮುಖ್ಯಮಂತ್ರಿ, ದಿವಂಗತ ಕೆ.ಸಿ.ರೆಡ್ಡಿ ಅವರ ಜನ್ಮದಿನ: ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾವಿನ ರಾಜಧಾನಿ ಶ್ರೀನಿವಾಸಪುರ ಮತ್ತೆ ಸಜ್ಜು: ಮೇ 15ರಿಂದ ಮಾರಾಟ ಭರ್ಜರಿ ಆರಂಭ Chikkamagaluru | ಕಾಶ್ಮೀರದಲ್ಲಿ ಉಗ್ರರ ದಾಳಿ: ಕೊಟ್ಟಿಗೆಹಾರ ಬಂದ್; ಅಂಗಡಿ-ಮುಂಗಟ್ಟು ಸ್ತಬ್ದ Murder | ನಾರಾಯಣಪುರ: ಗೌಡಪ್ಪ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಅಪ್ರಾಪ್ತ ವಯಸ್ಸಿನ…

ಇತ್ತೀಚಿನ ಸುದ್ದಿ

Law & Order | ಗೃಹ ಖಾತೆ ಬದುಕಿದೆಯಾ? ಪೊಲೀಸರನ್ನೇ ರಕ್ಷಣೆ ಮಾಡಲು ಮಿಲ್ಟ್ರಿ ತರುವ ಪರಿಸ್ಥಿತಿ ಇದೆ: ಮಾಜಿ ಹೋಮ್ ಮಿನಿಸ್ಟರ್ ಆರಗ ಜ್ಞಾನೇಂದ್ರ

22/03/2025, 21:09

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ರಾಜ್ಯದಲ್ಲಿ ಗೃಹ ಖಾತೆ ಬದುಕಿದೆಯಾ? ಎಂದು ಇತ್ತೀಚಿನ ದಿನಗಳಲ್ಲಿ ನೋಡಿದರೆ ನಮಗೆ ಅನಿಸುತ್ತಿದೆ. ಪೊಲೀಸರು ಸಂರಕ್ಷಣೆ ಮಾಡಬೇಕಿತ್ತು. ಈಗ ಪೊಲೀಸರನ್ನೇ ರಕ್ಷಣೆ ಮಾಡಲು ಮಿಲ್ಟ್ರಿ ತರುವ ಪರಿಸ್ಥಿತಿ ಆಗಿದೆ. ಅವರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಮಾಜಿ ಗೃಹ ಸಚಿವ, ಹಾಲಿ ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಮೈಸೂರಲ್ಲಿ ಐಪಿಎಸ್ ಅಧಿಕಾರಿಯ ವಾಹನ ಜಖಂ ಮಾಡಿದರು. ಒಂದು ಸಾವಿರ ಜನರ ಮೇಲೆ ಎಫ್ಐಆರ್ ಹಾಕಿ ಹದಿನೇಳು ಮಂದಿಯನ್ನು ಅರೆಸ್ಟ್ ಮಾಡಿದರೆ ಅವರನ್ನು ಅರೆಸ್ಟ್ ಮಾಡಬಾರದು ಎಂದು ಪೋಲೀಸರ ಮೇಲೆ ಒತ್ತಡ ಇತ್ತು. ಕೇಸ್ ದಾಖಲಿಸದ ಅಧಿಕಾರಿಯನ್ನು ಕೆಲಸದಿಂದ ಕಿತ್ತು ಹಾಕಿದ್ದಾರೆ. ಒಂದು ಸಮುದಾಯದ ಜನ ಏನು ಬೇಕಾದರೂ ಮಾಡಬಹುದು ಎಂದುಕೊಂಡಿದ್ದಾರೆ ಎಂದರು.

ಶಾಂತಿ ಸುವ್ಯವಸ್ಥೆ ಹೋಗಿದೆ. ಆತ್ಮಹತ್ಯೆಗಳು ಎಷ್ಟಾಗಿದ್ದಾವೇ? ಸರ್ಕಾರಿ ನೌಕರರು ಎಷ್ಟು ಜನ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇಡೀ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಮರೀಚಿಕೆ ಆಗಿದೆ. ಮಾದಕ ವಸ್ತುಗಳು, ಸ್ಮಗ್ಲಿಂಗ್, ರಿಯಲ್ ಎಸ್ಟೇಟ್ ಈ ರೀತಿಯಲ್ಲಿ ಪೊಲೀಸರದ್ದೇ ಇನ್ವಾಲ್ ಮೆಂಟ್ ಇದೆ.
ಹೀಗಾಗಿ ಪೊಲೀಸರು ಪೊಲೀಸರಾಗಿ ಉಳಿದಿಲ್ಲ. ಕಳೆದ ಎರಡು ವರ್ಷಗಳಲ್ಲಿ ಇಲಾಖೆಯನ್ನು ಹಾಳು ಮಾಡಲಾಗಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು