6:15 AM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

Law & Order | ಗೃಹ ಖಾತೆ ಬದುಕಿದೆಯಾ? ಪೊಲೀಸರನ್ನೇ ರಕ್ಷಣೆ ಮಾಡಲು ಮಿಲ್ಟ್ರಿ ತರುವ ಪರಿಸ್ಥಿತಿ ಇದೆ: ಮಾಜಿ ಹೋಮ್ ಮಿನಿಸ್ಟರ್ ಆರಗ ಜ್ಞಾನೇಂದ್ರ

22/03/2025, 21:09

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ರಾಜ್ಯದಲ್ಲಿ ಗೃಹ ಖಾತೆ ಬದುಕಿದೆಯಾ? ಎಂದು ಇತ್ತೀಚಿನ ದಿನಗಳಲ್ಲಿ ನೋಡಿದರೆ ನಮಗೆ ಅನಿಸುತ್ತಿದೆ. ಪೊಲೀಸರು ಸಂರಕ್ಷಣೆ ಮಾಡಬೇಕಿತ್ತು. ಈಗ ಪೊಲೀಸರನ್ನೇ ರಕ್ಷಣೆ ಮಾಡಲು ಮಿಲ್ಟ್ರಿ ತರುವ ಪರಿಸ್ಥಿತಿ ಆಗಿದೆ. ಅವರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಮಾಜಿ ಗೃಹ ಸಚಿವ, ಹಾಲಿ ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಮೈಸೂರಲ್ಲಿ ಐಪಿಎಸ್ ಅಧಿಕಾರಿಯ ವಾಹನ ಜಖಂ ಮಾಡಿದರು. ಒಂದು ಸಾವಿರ ಜನರ ಮೇಲೆ ಎಫ್ಐಆರ್ ಹಾಕಿ ಹದಿನೇಳು ಮಂದಿಯನ್ನು ಅರೆಸ್ಟ್ ಮಾಡಿದರೆ ಅವರನ್ನು ಅರೆಸ್ಟ್ ಮಾಡಬಾರದು ಎಂದು ಪೋಲೀಸರ ಮೇಲೆ ಒತ್ತಡ ಇತ್ತು. ಕೇಸ್ ದಾಖಲಿಸದ ಅಧಿಕಾರಿಯನ್ನು ಕೆಲಸದಿಂದ ಕಿತ್ತು ಹಾಕಿದ್ದಾರೆ. ಒಂದು ಸಮುದಾಯದ ಜನ ಏನು ಬೇಕಾದರೂ ಮಾಡಬಹುದು ಎಂದುಕೊಂಡಿದ್ದಾರೆ ಎಂದರು.

ಶಾಂತಿ ಸುವ್ಯವಸ್ಥೆ ಹೋಗಿದೆ. ಆತ್ಮಹತ್ಯೆಗಳು ಎಷ್ಟಾಗಿದ್ದಾವೇ? ಸರ್ಕಾರಿ ನೌಕರರು ಎಷ್ಟು ಜನ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇಡೀ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಮರೀಚಿಕೆ ಆಗಿದೆ. ಮಾದಕ ವಸ್ತುಗಳು, ಸ್ಮಗ್ಲಿಂಗ್, ರಿಯಲ್ ಎಸ್ಟೇಟ್ ಈ ರೀತಿಯಲ್ಲಿ ಪೊಲೀಸರದ್ದೇ ಇನ್ವಾಲ್ ಮೆಂಟ್ ಇದೆ.
ಹೀಗಾಗಿ ಪೊಲೀಸರು ಪೊಲೀಸರಾಗಿ ಉಳಿದಿಲ್ಲ. ಕಳೆದ ಎರಡು ವರ್ಷಗಳಲ್ಲಿ ಇಲಾಖೆಯನ್ನು ಹಾಳು ಮಾಡಲಾಗಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು