5:15 AM Monday24 - August 2026
ಬ್ರೇಕಿಂಗ್ ನ್ಯೂಸ್
ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು

ಇತ್ತೀಚಿನ ಸುದ್ದಿ

ಬೆಂಗ್ರೆ-ತಣ್ಣೀರುಬಾವಿ ಪರಿಸರದ ಮನೆಗಳಿಗೆ ವಿದ್ಯುತ್ ಸಂಪರ್ಕಕ್ಕೆ ಕಾನೂನು ತೊಡಕು: ಶಾಸಕ ವೇದವ್ಯಾಸ ಕಾಮತ್ ಆಕ್ರೋಶ

21/11/2025, 19:14

ಮಂಗಳೂರು(reporterkarnataka.com): ಬೆಂಗ್ರೆ-ತಣ್ಣೀರುಬಾವಿ ಪರಿಸರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಇಲ್ಲಸಲ್ಲದ ನೂತನ ನಿಯಮದಿಂದಾಗಿ ಅನೇಕ ಕುಟುಂಬಗಳು ವಿದ್ಯುತ್ ಸಂಪರ್ಕವಿಲ್ಲದೇ ಕತ್ತಲೆಯಲ್ಲಿ ಬದುಕು ನಡೆಸುವಂತಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಕೇವಲ ಹಕ್ಕುಪತ್ರಗಳನ್ನು ಹೊಂದಿರುವ ಈ ಪ್ರದೇಶದಲ್ಲಿ ಕಳೆದ ಅನೇಕ ವರ್ಷಗಳಿಂದ ಯಾವುದೇ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಲು ಗ್ರಾಮ ಲೆಕ್ಕಾಧಿಕಾರಿಗಳು ನೀಡುವ ವಾಸ್ತವ್ಯ ದೃಢೀಕರಣ ಪತ್ರವೇ ಸಾಕಿತ್ತು. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ ಅದೇ ನಿಯಮವಿದ್ದು ಸ್ಥಳೀಯರಿಗೆ ಯಾವುದೇ ತೊಂದರೆಯಾಗಿರಲಿಲ್ಲ. ಆದರೆ ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರದ ನೂತನ ನಿಯಮಗಳ ಪ್ರಕಾರ ವಾಸ್ತವ್ಯ ದೃಢೀಕರಣ ಪತ್ರ ಮಾತ್ರವಲ್ಲದೇ, ಈ ಪ್ರದೇಶಕ್ಕೆ ಲಭ್ಯವಿರದ ಇತರೆ ದಾಖಲೆ ಪತ್ರಗಳನ್ನೂ ಸಹ ಹಾಜರುಪಡಿಸುವುದು ಕಡ್ಡಾಯವಾಗಿದೆ. ಇಲ್ಲದಿದ್ದರೆ ವಿದ್ಯುತ್ ಸಂಪರ್ಕ ಇಲ್ಲ ಎನ್ನುತ್ತಿರುವುದು ಸ್ಥಳೀಯರಿಗೆ ಇನ್ನಿಲ್ಲದ ತಲೆ ನೋವಾಗಿದೆ ಎಂದರು.
ವಿದ್ಯುತ್ ಸಂಪರ್ಕವು ಮೂಲಭೂತ ಸೌಕರ್ಯವಾಗಿದ್ದು ರಾಜ್ಯ ಸರ್ಕಾರದ ಎಡವಟ್ಟಿನಿಂದಾಗಿ ಮೆಸ್ಕಾಂನವರಿಗೆ ಸಂಪರ್ಕ ನೀಡಲಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ಕಳೆದ ಕೆಲವಾರು ತಿಂಗಳಿನಿಂದ ಇಲ್ಲಿನ ನೂರಾರು ಮನೆಗಳು ಕತ್ತಲೆಯಲ್ಲಿ ಬದುಕುವಂತಾಗಿದೆ. ಈ ಬಗ್ಗೆ ಸ್ಥಳೀಯರು ನೋವು ತೋಡಿಕೊಂಡಿದ್ದು ಕೂಡಲೇ ಹಿಂದಿನಂತೆಯೇ ಕ್ರಮ ವಹಿಸುವಂತೆ ಸ್ಥಳೀಯರ ಪರವಾಗಿ ಸರ್ಕಾರಕ್ಕೆ ಪತ್ರ ಬರೆದು ಆಗ್ರಹಿಸುತ್ತೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು