9:46 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ಬೆಂಗ್ರೆ-ತಣ್ಣೀರುಬಾವಿ ಪರಿಸರದ ಮನೆಗಳಿಗೆ ವಿದ್ಯುತ್ ಸಂಪರ್ಕಕ್ಕೆ ಕಾನೂನು ತೊಡಕು: ಶಾಸಕ ವೇದವ್ಯಾಸ ಕಾಮತ್ ಆಕ್ರೋಶ

21/11/2025, 19:14

ಮಂಗಳೂರು(reporterkarnataka.com): ಬೆಂಗ್ರೆ-ತಣ್ಣೀರುಬಾವಿ ಪರಿಸರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಇಲ್ಲಸಲ್ಲದ ನೂತನ ನಿಯಮದಿಂದಾಗಿ ಅನೇಕ ಕುಟುಂಬಗಳು ವಿದ್ಯುತ್ ಸಂಪರ್ಕವಿಲ್ಲದೇ ಕತ್ತಲೆಯಲ್ಲಿ ಬದುಕು ನಡೆಸುವಂತಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಕೇವಲ ಹಕ್ಕುಪತ್ರಗಳನ್ನು ಹೊಂದಿರುವ ಈ ಪ್ರದೇಶದಲ್ಲಿ ಕಳೆದ ಅನೇಕ ವರ್ಷಗಳಿಂದ ಯಾವುದೇ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಲು ಗ್ರಾಮ ಲೆಕ್ಕಾಧಿಕಾರಿಗಳು ನೀಡುವ ವಾಸ್ತವ್ಯ ದೃಢೀಕರಣ ಪತ್ರವೇ ಸಾಕಿತ್ತು. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ ಅದೇ ನಿಯಮವಿದ್ದು ಸ್ಥಳೀಯರಿಗೆ ಯಾವುದೇ ತೊಂದರೆಯಾಗಿರಲಿಲ್ಲ. ಆದರೆ ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರದ ನೂತನ ನಿಯಮಗಳ ಪ್ರಕಾರ ವಾಸ್ತವ್ಯ ದೃಢೀಕರಣ ಪತ್ರ ಮಾತ್ರವಲ್ಲದೇ, ಈ ಪ್ರದೇಶಕ್ಕೆ ಲಭ್ಯವಿರದ ಇತರೆ ದಾಖಲೆ ಪತ್ರಗಳನ್ನೂ ಸಹ ಹಾಜರುಪಡಿಸುವುದು ಕಡ್ಡಾಯವಾಗಿದೆ. ಇಲ್ಲದಿದ್ದರೆ ವಿದ್ಯುತ್ ಸಂಪರ್ಕ ಇಲ್ಲ ಎನ್ನುತ್ತಿರುವುದು ಸ್ಥಳೀಯರಿಗೆ ಇನ್ನಿಲ್ಲದ ತಲೆ ನೋವಾಗಿದೆ ಎಂದರು.
ವಿದ್ಯುತ್ ಸಂಪರ್ಕವು ಮೂಲಭೂತ ಸೌಕರ್ಯವಾಗಿದ್ದು ರಾಜ್ಯ ಸರ್ಕಾರದ ಎಡವಟ್ಟಿನಿಂದಾಗಿ ಮೆಸ್ಕಾಂನವರಿಗೆ ಸಂಪರ್ಕ ನೀಡಲಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ಕಳೆದ ಕೆಲವಾರು ತಿಂಗಳಿನಿಂದ ಇಲ್ಲಿನ ನೂರಾರು ಮನೆಗಳು ಕತ್ತಲೆಯಲ್ಲಿ ಬದುಕುವಂತಾಗಿದೆ. ಈ ಬಗ್ಗೆ ಸ್ಥಳೀಯರು ನೋವು ತೋಡಿಕೊಂಡಿದ್ದು ಕೂಡಲೇ ಹಿಂದಿನಂತೆಯೇ ಕ್ರಮ ವಹಿಸುವಂತೆ ಸ್ಥಳೀಯರ ಪರವಾಗಿ ಸರ್ಕಾರಕ್ಕೆ ಪತ್ರ ಬರೆದು ಆಗ್ರಹಿಸುತ್ತೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು