9:18 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ವಿಧಾನ ಮಂಡಲ ಮುಂಗಾರು ಅಧಿವೇಶನ: ಧರ್ಮಸ್ಥಳ ಪ್ರಕರಣ ಪ್ರಸ್ತಾಪ; ಸನಾತನ ಧರ್ಮದ ಪಾವಿತ್ರ್ಯಕ್ಕೆ ಧಕ್ಕೆ ಎಂದ ಡಿ.ಎಸ್. ಅರುಣ್

11/08/2025, 20:11

ಬೆಂಗಳೂರು (reporterkarnataka.com): ರಾಜ್ಯ ವಿಧಾನ ಮಂಡಲ 156ನೇ ಅಧಿವೇಶನದ ಮೊದಲನೇಯ ದಿನವಾದ ಇಂದು, ವಿಧಾನ ಪರಿಷತ್ತಿನ ಶೂನ್ಯ ವೇಳೆಯಲ್ಲಿ ಶಾಸಕರಾದ ಡಿ.ಎಸ್. ಅರುಣ್ ರವರು ಪ್ರಸ್ತಾಪಿಸಿದರು.
ರಾಜ್ಯದ ಧಾರ್ಮಿಕ ಹೆಮ್ಮೆ ಹಾಗೂ ಲಕ್ಷಾಂತರ ಹಿಂದೂ ಭಕ್ತರ ಭಾವನೆಯ ಕೇಂದ್ರವಾಗಿರುವ ಧರ್ಮಸ್ಥಳದ ವಿರುದ್ಧ ಯಾವುದೇ ದೃಢವಾದ ಸಾಕ್ಷ್ಯವಿಲ್ಲದೆ ಅನಾಮಿಕ ವ್ಯಕ್ತಿ ಮಾಡಿದ ಆರೋಪವನ್ನು ತೀವ್ರವಾಗಿ ಖಂಡಿಸಿದರು.
ಇಂತಹ ಸುಳ್ಳು ಹಾಗೂ ಉದ್ದೇಶಪೂರಿತ ಆರೋಪಗಳಿಂದ ಸನಾತನ ಧರ್ಮದ ಪಾವಿತ್ರ್ಯಕ್ಕೆ ಧಕ್ಕೆ ತರುತ್ತಿರುವುದು ಧರ್ಮ ವಿರೋಧಿ ಶಕ್ತಿಗಳ ಹಳೆಯ ತಂತ್ರ. ಸರ್ಕಾರವು ಶೂನ್ಯ ಸಹಿಷ್ಣುತೆ ನೀತಿಯನ್ನು ಅನುಸರಿಸಿ, ಆರೋಪದ ಹಿಂದೆ ಇರುವ ನಿಜಸ್ವರೂಪವನ್ನು ತಕ್ಷಣ ಬಹಿರಂಗಪಡಿಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸರ್ಕಾರವು ತನಿಖೆಯನ್ನು ತ್ವರಿತಗೊಳಿಸಲು, ಗೃಹ ಸಚಿವರ ಮೂಲಕ ಪ್ರಗತಿ ವರದಿಯನ್ನು ಸಾರ್ವಜನಿಕರಿಗೆ ಬಹಿರಂಗಪಡಿಸಲು ಹಾಗೂ ಹಿಂದೂ ಧರ್ಮದ ಪಾವಿತ್ರ್ಯವನ್ನು ಹಾಳುಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಡಿ.ಎಸ್.ಅರುಣ್ ರವರು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು