8:12 PM Saturday27 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್…

ಇತ್ತೀಚಿನ ಸುದ್ದಿ

ವಿಧಾನ ಮಂಡಲ ಮುಂಗಾರು ಅಧಿವೇಶನ: ಧರ್ಮಸ್ಥಳ ಪ್ರಕರಣ ಪ್ರಸ್ತಾಪ; ಸನಾತನ ಧರ್ಮದ ಪಾವಿತ್ರ್ಯಕ್ಕೆ ಧಕ್ಕೆ ಎಂದ ಡಿ.ಎಸ್. ಅರುಣ್

11/08/2025, 20:11

ಬೆಂಗಳೂರು (reporterkarnataka.com): ರಾಜ್ಯ ವಿಧಾನ ಮಂಡಲ 156ನೇ ಅಧಿವೇಶನದ ಮೊದಲನೇಯ ದಿನವಾದ ಇಂದು, ವಿಧಾನ ಪರಿಷತ್ತಿನ ಶೂನ್ಯ ವೇಳೆಯಲ್ಲಿ ಶಾಸಕರಾದ ಡಿ.ಎಸ್. ಅರುಣ್ ರವರು ಪ್ರಸ್ತಾಪಿಸಿದರು.
ರಾಜ್ಯದ ಧಾರ್ಮಿಕ ಹೆಮ್ಮೆ ಹಾಗೂ ಲಕ್ಷಾಂತರ ಹಿಂದೂ ಭಕ್ತರ ಭಾವನೆಯ ಕೇಂದ್ರವಾಗಿರುವ ಧರ್ಮಸ್ಥಳದ ವಿರುದ್ಧ ಯಾವುದೇ ದೃಢವಾದ ಸಾಕ್ಷ್ಯವಿಲ್ಲದೆ ಅನಾಮಿಕ ವ್ಯಕ್ತಿ ಮಾಡಿದ ಆರೋಪವನ್ನು ತೀವ್ರವಾಗಿ ಖಂಡಿಸಿದರು.
ಇಂತಹ ಸುಳ್ಳು ಹಾಗೂ ಉದ್ದೇಶಪೂರಿತ ಆರೋಪಗಳಿಂದ ಸನಾತನ ಧರ್ಮದ ಪಾವಿತ್ರ್ಯಕ್ಕೆ ಧಕ್ಕೆ ತರುತ್ತಿರುವುದು ಧರ್ಮ ವಿರೋಧಿ ಶಕ್ತಿಗಳ ಹಳೆಯ ತಂತ್ರ. ಸರ್ಕಾರವು ಶೂನ್ಯ ಸಹಿಷ್ಣುತೆ ನೀತಿಯನ್ನು ಅನುಸರಿಸಿ, ಆರೋಪದ ಹಿಂದೆ ಇರುವ ನಿಜಸ್ವರೂಪವನ್ನು ತಕ್ಷಣ ಬಹಿರಂಗಪಡಿಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸರ್ಕಾರವು ತನಿಖೆಯನ್ನು ತ್ವರಿತಗೊಳಿಸಲು, ಗೃಹ ಸಚಿವರ ಮೂಲಕ ಪ್ರಗತಿ ವರದಿಯನ್ನು ಸಾರ್ವಜನಿಕರಿಗೆ ಬಹಿರಂಗಪಡಿಸಲು ಹಾಗೂ ಹಿಂದೂ ಧರ್ಮದ ಪಾವಿತ್ರ್ಯವನ್ನು ಹಾಳುಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಡಿ.ಎಸ್.ಅರುಣ್ ರವರು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು