7:48 PM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ ಮತದ ಮೇಲೆ ಎಚ್‌ಡಿಕೆ ಕಣ್ಣು!

17/06/2026, 19:43

ಬೆಂಗಳೂರು(reporterkarnataka.com):ನಾಳೆ ನಡೆಯಲಿರುವ ಮಹತ್ವದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಮತ್ತೆ ‘ರೆಸಾರ್ಟ್ ರಾಜಕೀಯ’ದ ಸದ್ದು ಜೋರಾಗಿದೆ. ಕ್ರಾಸ್ ವೋಟಿಂಗ್ ಭೀತಿ ಹಾಗೂ ಆಂತರಿಕ ಭಿನ್ನಮತ ತಡೆಯಲು ಮುನ್ನೆಚ್ಚರಿಕಾ ಕ್ರಮ ಕೈಗೊಂಡಿರುವ ಜೆಡಿಎಸ್(JDS) ತನ್ನ ಪಕ್ಷದ ಎಲ್ಲಾ 16 ಶಾಸಕರನ್ನು ಬೆಂಗಳೂರು ಹೊರವಲಯದ ದೇವನಹಳ್ಳಿ ಬಳಿಯಿರುವ ಖಾಸಗಿ ರೆಸಾರ್ಟ್‌ಗೆ ಶಿಫ್ಟ್ ಮಾಡಿದೆ. ಇಂದು ರಾತ್ರಿ ರೆಸಾರ್ಟ್‌ನಲ್ಲೇ ಶಾಸಕರ ವಾಸ್ತವ್ಯ ಚುನಾವಣಾ ತಂತ್ರಗಾರಿಕೆಯ ಭಾಗವಾಗಿ ಜೆಡಿಎಸ್‌ನ 16 ಶಾಸಕರು ಈಗಾಗಲೇ ದೇವನಹಳ್ಳಿಯ ರೆಸಾರ್ಟ್ ತಲುಪಿದ್ದು, ಅಲ್ಲಿಯೇ ಬಿಡುಬಿಟ್ಟಿದ್ದಾರೆ. ಇಂದು ಇಡೀ ರಾತ್ರಿ ಶಾಸಕರು ರೆಸಾರ್ಟ್‌ನಲ್ಲೇ ವಾಸ್ತವ್ಯ ಹೂಡಲಿದ್ದು, ನಾಳೆ ಬೆಳಗ್ಗೆ ಪರೀಕ್ಷೆಯ ದಿನದಂತೆ ಒಟ್ಟಾಗಿಯೇ ವಿಧಾನಸೌಧಕ್ಕೆ ಮತದಾನ ಮಾಡಲು ಆಗಮಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

*ಜನಾರ್ದನ ರೆಡ್ಡಿ ಮತ ಸೆಳೆಯಲು ಜೆಡಿಎಸ್ ಮಾಸ್ಟರ್ ಪ್ಲಾನ್!:*
ಈ ಬಾರಿಯ ಪರಿಷತ್ ಚುನಾವಣೆಯಲ್ಲಿ ಪ್ರತಿಯೊಂದು ಮತವೂ ಅತ್ಯಂತ ನಿರ್ಣಾಯಕವಾಗಿದ್ದು, ಗಂಗಾವತಿ ಶಾಸಕ ಜಿ. ಜನಾರ್ದನ ರೆಡ್ಡಿ ಅವರ ಮತವನ್ನು ತಮ್ಮ ಮೈತ್ರಿಕೂಟದ ಅಭ್ಯರ್ಥಿ ಪರವಾಗಿ ಸೆಳೆಯಲು ಜೆಡಿಎಸ್ ಭರ್ಜರಿ ತಂತ್ರ ರೂಪಿಸಿದೆ. ಜನಾರ್ದನ ರೆಡ್ಡಿ ಅವರ ಬೆಂಬಲವನ್ನು ಸಂಪೂರ್ಣವಾಗಿ ಕ್ರೋಢೀಕರಿಸಲು ಜೆಡಿಎಸ್‌ನ ಉನ್ನತ ನಾಯಕರು ಈಗಾಗಲೇ ತೆರೆಮರೆಯಲ್ಲಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು