12:30 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

Legislative Council | ಜಲ‌ ಮತ್ತು ವಾಯು ಕಾಯ್ದೆ ಉಲ್ಲಂಘಿಸುವ ಕೈಗಾರಿಕೆಗಳ ವಿರುದ್ಧ ಕಾನೂನು ಕ್ರಮ: ಸಚಿವ ಎಂ.ಬಿ.ಪಾಟೀಲ್ ಎಚ್ಚರಿಕೆ

20/03/2025, 16:49

ಬೆಂಗಳೂರು(reporterkarnataka.com): ಜಲ‌ ಮತ್ತು ವಾಯು ಕಾಯ್ದೆಯನ್ನು ಉಲ್ಲಂಘಿಸುವ ಕೈಗಾರಿಕೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಬೃಹತ್ ಮತ್ತು ಮಧ್ಯಮ‌ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು.
ಅವರು ವಿಧಾನ ಪರಿಷತ್ ಅಧಿವೇಶನದಲ್ಲಿ ಸದಸ್ಯ ಬಸನಗೌಡ ಬಾದರ್ಲಿ, ವಸಂತ್ ಕುಮಾರ್ ಹಾಗೂ ಇತರರು ನಿಯಮ 330 ರಡಿ ಕೊಪ್ಪಳ ಜಿಲ್ಲೆಯಲ್ಲಿ ಸರ್ಕಾರವು ಬಲ್ಡೋಟಾ ಕಂಪೆನಿಗೆ ಉಕ್ಕು ಉತ್ಪಾದನಾ ಕಾರ್ಖಾನೆ ನಿರ್ಮಿಸಲು ಅನುಮತಿ ನೀಡಿರುವುದರಿಂದ ಆ ಭಾಗದ ಜನರ ಬದುಕಿಗೆ ಸಂಕಷ್ಟ ತಂದೊಡ್ಡಿದೆ ಎಂಬ ಬಗ್ಗೆ ನೀಡಿದ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು,
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಜಲ (ಮಾಲಿನ್ಯ ತಡೆ ಮತ್ತು ನಿಯಂತ್ರಣ) ಕಾಯ್ದೆ 1974 ಮತ್ತು ವಾಯು (ಮಾಲಿನ್ಯ ತಡೆ ಮತ್ತು ನಿಯಂತ್ರಣ) ಕಾಯ್ದೆ, 1981 ಅಡಿಯಲ್ಲಿ ಬಲ್ಡೋಟಾ ಕಂಪನಿಗೆ ವಾರ್ಷಿಕ 3.5 ಮಿಲಿಯನ್ ಟನ್ ಸಾಮರ್ಥ್ಯದ ಇಂಟಿಗ್ರೇಟೆಡ್ ಸ್ಟೀಲ್ ಪ್ಲಾಂಟ್ ಹಾಗೂ 295 ಮೆಗಾ ವ್ಯಾಟ್ ಸಾಮರ್ಥ್ಯದ ಸ್ವಾಯತ್ತ ವಿದ್ಯುತ್ ಸ್ಯಾವರ ಸ್ಥಾಪನೆ ಮಾಡಲು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಮಂತ್ರಾಲಯ, ನವದೆಹಲಿ ಇವರ ದಿನಾಂಕ 27.07.2021ರ ಪರಿಸರ ಅನುಮೋದನೆಗೆ ಅನುಸಾರವಾಗಿ ಸ್ಥಾಪನಾ ಸಮ್ಮತಿ ಪತ್ರವನ್ನು ದಿನಾಂಕ 19.07 2024ರಂದು ನೀಡಿರುತ್ತದೆ. ಇದರ ಯೋಜನಾ ವೆಚ್ಚವು ರೂ. 17,979 ಕೋಟಿ ಆಗಿರುತ್ತದೆ.
ಅಲ್ಲದೇ ಇತ್ತೀಚೆಗೆ ಜರುಗಿದ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶ ಇನ್ವೆಸ್ಟ್ ಕರ್ನಾಟಕ-2025ರಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ರೂ. 54,000 ಕೋಟಿ ಬಂಡವಾಳ ಹೂಡುವ ವಿಸ್ತರಣಾ ಯೋಜನೆಗೆ BSPL (ಬಲ್ಡೋಟಾ) ಕಂಪನಿಯೊಂದಿಗೆ ರಾಜ್ಯ ಸರ್ಕಾರವು ಒಡಂಬಡಿಕೆ ಮಾಡಿಕೊಳ್ಳಲಾಗಿದೆ.
ಬಲ್ಡೋಟಾ ಗ್ರೂಪ್‌ನ ಸಂಸ್ಥೆಯಾದ ಎಂಎಸ್‌ಪಿಎಲ್ ಕೈಗಾರಿಕೆ ಒಳಗೊಂಡಂತೆ ಇತರೆ ಕೈಗಾರಿಕೆಗಳಿಂದ ಮಾಲಿನ್ಯವಾಗುತ್ತಿರುವ ಬಗ್ಗೆ, ಅಧ್ಯಯನ ನಡೆಸಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಒಂದು ತಂಡವನ್ನು ರಚಿಸಿದ್ದು, ದಿನಾಂಕ 11.12.2024 ಮತ್ತು 13. 12.2024. ರಂದು ಕೊಪ್ಪಳ ತಾಲ್ಲೂಕಿನಲ್ಲಿರುವ ವಿವಿಧ ಕೈಗಾರಿಕೆಗಳನ್ನು ಪರಿವೀಕ್ಷಣೆ ಮಾಡಿದ್ದು, ಈ ತಂಡದ ವರದಿಯನ್ನು ಆಧರಿಸಿ ಸಂಬಂಧಪಟ್ಟ ಕೈಗಾರಿಕೆಗಳಿಗೆ ನೋಟೀಸ್ ಜಾರಿ ಮಾಡಲಾಗಿದೆ.
ಅಲ್ಲದೆ ಈ ತಂಡದ ಸಂಕ್ಷಿಪ್ತ ವರದಿ, ಕೆಎಸ್ ಪಿಸಿಬಿ ಅಧಿಕಾರಿಗಳು,
ವಿಜಯನಗರ ಇವರು ಕೈಗಾರಿಕೆಗಳ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಸಲ್ಲಿಸಿರುವ ಶಿಫಾರಸ್ಸನ್ನು. ಮುಂಬರುವ ರಾಜ್ಯ ಮಟ್ಟದ ಜಾರಿ ಸಮಿತಿ (SLEC) ಸಭೆಯಲ್ಲಿ ಮಂಡಿಸಲಾಗುತ್ತಿದ್ದು , ಸಮಿತಿ ಸಭೆಯ ತೀರ್ಮಾನದಂತೆ, ಜಲ ಮತ್ತು ವಾಯು ಕಾಯ್ದೆಯನ್ನು ಉಲ್ಲಂಘಿಸಿರುವ ಕೈಗಾರಿಕೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೆಎಸ್‌ಪಿಸಿಬಿಯು ತಿಳಿಸಿರುತ್ತದೆ.
ಪ್ರಸ್ತುತ, ಬಲ್ಡೋಟಾ ಕಂಪನಿ ವಿಸ್ತರಣೆಗೆ ಸ್ಥಳೀಯವಾಗಿ ವಿರೋಧ ವ್ಯಕ್ತವಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು ಈ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು