10:00 PM Monday17 - March 2025
ಬ್ರೇಕಿಂಗ್ ನ್ಯೂಸ್
Legislative Council | ನಕಲಿ ಔಷಧಿ ನಿಯಂತ್ರಣಕ್ಕೆ ಅಗತ್ಯ ಕ್ರಮ: ಆರೋಗ್ಯ ಸಚಿವ… KSRTC | ಬಿಜೆಪಿ ಸರಕಾರ ಶೇ 47ರಷ್ಟು ಬಸ್ ದರ ಏರಿಕೆ ಮಾಡಿತ್ತು,… Education Department | ಕನ್ನಡ ಬೋಧಿಸದ ಕೇಂದ್ರ ಪಠ್ಯಕ್ರಮ ವಿರುದ್ಧ ಕ್ರಮಕ್ಕೆ ಮುಂದಾಗಿ:… ಬಿಜೆಪಿ ತರಹ ಕೇವಲ 10% ಜನರ ಕೈಹಿಡಿದು ಶೇ. 90% ಜನರನ್ನು ಕೈಬಿಟ್ಟಿಲ್ಲ:… ಕೇಂದ್ರ ಸರಕಾರ ಕೊಟ್ಟಿರುವುದು ಸಾಲ, ನಮ್ಮ ಪಾಲಿನ ಅನುದಾನವಲ್ಲ: ಸದನದಲ್ಲಿ ಸಿಎಂ ಸಿದ್ದರಾಮಯ್ಯ… ಲೋಕಸಭೆ ಚುನಾವಣೆ ನಂತ್ರ ಗ್ಯಾರಂಟಿ ಯೋಜನೆ ನಿಂತೋಗುತ್ತೆ ಎಂದು ಅಪಪ್ರಚಾರ ಮಾಡಿದ್ರಲ್ಲಾ, ನಿಂತೋಯ್ತೇನ್ರೀ:… Ex CM | ಬೆಳೆ ಹಾನಿಗೊಳಗಾದ ಪ್ರತಿ ರೈತರ ಜಮೀನು ಸಮೀಕ್ಷೆ ಮಾಡಿ:… ಮಳವಳ್ಳಿಯಲ್ಲಿ ಕಲುಷಿತ ಆಹಾರ ಸೇವಿಸಿ ವಿದ್ಯಾರ್ಥಿ ಸಾವು: ಅಧಿಕಾರಿಗಳಿಂದ ಮಾಹಿತಿ ಪಡೆದ ಕೇಂದ್ರ… ಬಂಟ್ವಾಳದಲ್ಲಿ ಪ್ರಾಂತೀಯ ಹಿಂದೂ ರಾಷ್ಟ್ರ ಅಧಿವೇಶ ಶಂಖನಾದದೊಂದಿಗೆ ಆರಂಭ ನಿಡುವಾಳೆ ರಾಮೇಶ್ವರ ದೇವಾಲಯಕ್ಕೆ ನಟ ರಮೇಶ್ ಅರವಿಂದ್ ಕುಟುಂಬ ಸಮೇತ ಭೇಟಿ: ವಿಶೇಷ…

ಇತ್ತೀಚಿನ ಸುದ್ದಿ

Legislative Council | ನಕಲಿ ಔಷಧಿ ನಿಯಂತ್ರಣಕ್ಕೆ ಅಗತ್ಯ ಕ್ರಮ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

17/03/2025, 21:32

ಬೆಂಗಳೂರು (reporterkarnataka.com): ರಾಜ್ಯದಲ್ಲಿ ನಕಲಿ ಔಷಧ ಮಾರಾಟ ಮಾಡುವ ಕಂಪನಿಗಳ ವಿರುದ್ಧ ಅಗತ್ಯ ಕ್ರಮ ಜರುಗಿಸಿ ನಿಯಂತ್ರಣಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಎಸ್. ರವಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಳೆದ 3 ವರ್ಷಗಳಲ್ಲಿ ನಕಲಿ ಔಷಧ ಮಾರಾಟಗಾರರನ್ನು ಪತ್ತೆ ಹಚ್ಚಿ ಕಲಂ 17 ಬಿ, (b), (c) (d) ಮತ್ತು (e) ರ ಔಷಧ ಮತ್ತು ಕಾಂತಿ ವರ್ಧಕ ಅಧಿನಿಯಮ 1940 ಮತ್ತು ನಿಯಮಗಳಡಿಯಲ್ಲಿ ಸೂಕ್ತ ಕ್ರಮಕೈಗೊಂಡು ವಿವಿಧ ನ್ಯಾಯಾಲಯಗಳಲ್ಲಿ ಮೊಕದ್ದಮೆ ದಾಖಲಿಸಲಾಗಿದೆ.
ಕಳೆದ 3 ವರ್ಷಗಳಲ್ಲಿ ಒಟ್ಟು 20 ನಕಲಿ ಔಷಧ ತಯಾರಿಕಾ ಕಂಪನಿ ಮತ್ತು 1 ಔಷಧ ಮಾರಾಟಗಾರರ ಪ್ರಕರಣಗಳನ್ನು ಪತ್ತೆ ಮಾಡಿ ಮೊಕ್ಕದ್ದಮೆ ಹೂಡಲಾಗಿದೆ. 2022-23 ನೇ ಸಾಲಿನಲ್ಲಿ ಒಟ್ಟು 06, 2023-24ನೇ ಸಾಲಿನಲ್ಲಿ ಒಟ್ಟು 10 ನಕಲಿ ಔಷಧ ತಯಾರಕರು ಮತ್ತು 2024-25 ನೇ ಸಾಲಿನಲ್ಲಿ 4 ನಕಲಿ ಔಷಧ ತಯಾರಕರ ಮತ್ತು 1 ನಕಲಿ ಔಷಧ ಮಾರಾಟಗಾರರ ವಿರುದ್ಧ ವಿವಿಧ ನ್ಯಾಯಾಲಯಗಳಲ್ಲಿ ಮೊಕದ್ದಮೆಗಳನ್ನು ದಾಖಲಿಸಲಾಗಿದೆ. ಕಾನೂನು ರೀತ್ಯಾ ಅಗತ್ಯ ಕ್ರಮಗಳನ್ನು ಸಹ ಜರುಗಿಸಲಾಗಿದೆ. ಈ ಬಗ್ಗೆ ಕೂಡಲೇ Drug Recall policy ಜಾರಿ ಮಾಡುವ ಬಗ್ಗೆ ಕ್ರಮ ವಹಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು