1:56 PM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಕೇಂದ್ರ ಸರಕಾರದ ಜನಪರ ಯೋಜನೆಗಳು ಮನೆಮನೆ ತಲುಪಲಿ: ಬಿಜೆಪಿ ಜಿಲ್ಲಾ ವಕ್ತಾರ ಮಾಧವ ಮಾವೆ

09/09/2025, 14:00

ಬಂಟ್ವಾಳ(reporterkarnataka.com): ಸರಕಾರದಿಂದ ಸಿಗುವ ಸವಲತ್ತುಗಳನ್ನು ಬಡವರ ಮನೆಗೆ ತಿಳಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡುವ ಮೂಲಕ ಪಕ್ಷ ಸಂಘಟನೆಯನ್ನು ಬಲಪಡಿಸಬೇಕು.ಕೇಂದ್ರ ಸರಕಾರದ ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿಪರ ಯೋಜನೆಗಳಿಂದ ರಾಷ್ಟ್ರದ ಅಭಿವೃದ್ಧಿಯೊಂದಿಗೆ ಜನಜೀವನಮಟ್ಟ ಸುಧಾರಿಸುತ್ತಿದೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಮಾಧವ ಮಾವೆ ಹೇಳಿದರು.
ಅವರು ಬಿಜೆಪಿ ಬಂಟ್ವಾಳ ಮಂಡಲದ ಪೆರಾಜೆ ಶಕ್ತಿ ಕೇಂದ್ರದಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠದ ಸಭಾಂಗಣದಲ್ಲಿ ಏರ್ಪಡಿಸಲಾದ ಕಾರ್ಯಕರ್ತರ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾನುವಾರ ಮಾತನಾಡಿದರು.
ಪೆರಾಜೆ ಶಕ್ತಿ ಕೇಂದ್ರದ ಅಧ್ಯಕ್ಷ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಮಾಣಿ ಮಹಾಶಕ್ತಿಕೇಂದ್ರದ ಅಧ್ಯಕ್ಷ ಅರವಿಂದ‌ ರೈ , ಬಂಟ್ವಾಳ ಮಂಡಲ‌ ಅಭ್ಯಾಸ ವರ್ಗ ಸಂಚಾಲಕ ಹರೀಶ ಶೆಟ್ಟಿ,ಗ್ರಾಮ ಪಂಚಾಯತ್ ಸದಸ್ಯರಾದ ರಾಜಾರಾಮ ಕಾಡೂರು,ಹರೀಶ ರೈ ಪಾಣೂರು, ಮಮತಾ ತಿಲಕ ಗೌಡ ಉಪಸ್ಥಿತರಿದ್ದರು.


ಹಿರಿಯ ಸಹಕಾರಿ ಧುರೀಣ ಬಿ.ಟಿ.ನಾರಾಯಣ ಭಟ್ ದೀಪಬೆಳಗಿಸಿ ಚಾಲನೆ ನೀಡಿದರು. ಮಂಡಲ ಕಾರ್ಯದರ್ಶಿ ರವೀಶ ಶೆಟ್ಟಿ ಕರ್ಕಳ ಉದ್ಘಾಟನಾ ಭಾಷಣ ಮಾಡಿದರು. ಬಿಜೆಪಿ ನಾಯಕರಾದ ಸಂದೀಪ್ ಶೆಟ್ಟಿ ಅರೆಬೆಟ್ಟು,ಶಿವಪ್ರಸಾದ ಶೆಟ್ಟಿ, ಸುಲೋಚನಾ ಜಿ.ಕೆ.ಭಟ್ ಕಾರ್ಯಕರ್ತರಿಗೆ ಮಾಹಿತಿ ನೀಡಿದರು. ಬೂತ್ ಸಮಿತಿ‌ ಅಧ್ಯಕ್ಷರಾದ ಗಣೇಶ ಕೊಂಕಣ ಪದವು,ಲೋಹಿತ್ ಮಂಜೊಟ್ಟಿ,ಪುರುಷೋತ್ತಮ ಮಡಲ ವಿವಿಧ ಗೋಷ್ಠಿಗಳ ಅಧ್ಯಕ್ಷತೆ ವಹಿಸಿದ್ದರು.
ಬಿಜೆಪಿಯ ಪ್ರಮುಖರಾದ ದೇವಪ್ಪ ಪೂಜಾರಿ, ಸುದರ್ಶನ ಬಜ,ಹಿರಿಯ ಕಾರ್ಯಕರ್ತ ರಾದ ರಾಮಣ್ಣ ಗೌಡ ದೆಪ್ಪೊಳಿ,ಸೀತಾರಾಮ ನಾಯ್ಕ ಪಾಳ್ಯ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಕ್ತಿ ಕೇಂದ್ರ ಅಭ್ಯಾಸ ವರ್ಗದ ಸಂಚಾಲಕ ಉಮೇಶ ಎಸ್ಪಿ ಸ್ವಾಗತಿಸಿದರು. ಯತಿರಾಜ ಪಿ. ಕಾರ್ಯಕ್ರಮ
ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು