8:53 PM Saturday28 - June 2025
ಬ್ರೇಕಿಂಗ್ ನ್ಯೂಸ್
ಹುಲಿಗಳ ಸಾವು ಸಂಪೂರ್ಣ ತನಿಖೆಯಾಗಲಿ; ಕಾಂಗ್ರೆಸ್ ಕಚ್ಚಾಟದಲ್ಲಿ ರಾಜ್ಯ ಅಭಿವೃದ್ಧಿ ಶೂನ್ಯ: ಬಸವರಾಜ… ಕೆಂಪೇಗೌಡರು ಎಲ್ಲರನ್ನೊಳಗೊಂಡ ಸಮಾಜ ನಿರ್ಮಾಣದ ದೂರದೃಷ್ಟಿಯ ಮುತ್ಸದ್ದಿ ನಾಯಕ: ಸಿಎಂ ಸಿದ್ದರಾಮಯ್ಯ ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಇಂಧನ ಸಚಿವ… ಮೂಕ ಪ್ರಾಣಿಗಳ ಮೇಲೆ ಕ್ರೌರ್ಯ ಕಂಡು ಬಂದರೆ ಕಠಿಣ ಕ್ರಮ; ಪೆಟ್ ಶಾಪ್‍ಗಳ… BNG | ಪ್ರತಿ ಜಿಲ್ಲೆಗೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಕ್ಯಾನ್ಸರ್… ಭ್ರಷ್ಟಾಚಾರದಿಂದ ರಾಜ್ಯ ಸರ್ಕಾರ ದಿಕ್ಕು ದೆಸೆ ಇಲ್ಲದೆ ನಡೆದಿದೆ: ಬಸವರಾಜ ಬೊಮ್ಮಾಯಿ ಬೆಂಗಳೂರಿಗೆ ಅತ್ಯಾಧುನಿಕ ಭೂಗತ ರಸ್ತೆ ಜಾಲ, ಪೆರಿಫೆರಲ್ ರಿಂಗ್ ರಸ್ತೆ: ಹೆದ್ದಾರಿ ಸಚಿವ… ಎನ್.ಆರ್.ಪುರ: ರಸ್ತೆ ಗುಂಡಿ ತಪ್ಪಿಸಲು ಹೋಗಿ ಕಾರು ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು;… Chikkamagaluru | ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಸ್ಕೂಟರ್ ಗೆ ಡಿಕ್ಕಿ: ಸವಾರ… ಬಾಣಸವಾಡಿ, ಕಸ್ತೂರಿನಗರ ಅರಣ್ಯ ಪ್ರದೇಶಕ್ಕೆ ಸಚಿವ ಖಂಡ್ರೆ ಭೇಟಿ: ಬೆಂಗಳೂರಿನಲ್ಲಿ ಶ್ವಾಸತಾಣಗಳ ಸಂರಕ್ಷಣೆ…

ಇತ್ತೀಚಿನ ಸುದ್ದಿ

ಹುಲಿಗಳ ಸಾವು ಸಂಪೂರ್ಣ ತನಿಖೆಯಾಗಲಿ; ಕಾಂಗ್ರೆಸ್ ಕಚ್ಚಾಟದಲ್ಲಿ ರಾಜ್ಯ ಅಭಿವೃದ್ಧಿ ಶೂನ್ಯ: ಬಸವರಾಜ ಬೊಮ್ಮಾಯಿ

28/06/2025, 20:41

ಗದಗ(reporterkarnataka.com): ಹುಲಿಗಳ ಸಾವಿಗೆ ಅರಣ್ಯ ಇಲಾಖೆ ನಿರ್ಲಕ್ಷ್ಯವೇ ಕಾರಣವಾಗಿದ್ದು, ಈ ಬಗ್ಗೆ ಸಂಪೂರ್ಣ ತನಿಖೆಯಾಗಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಲಿಗಳ ಬಗ್ಗೆ ಸಮಾಜ ಮತ್ತು ಸರ್ಕಾರ ಎರಡೂ ಬಹಳ ಪ್ರಾಮುಖ್ಯತೆ ಕೊಡುತ್ತವೆ‌. ಯಾವುದಾದರೂ ಒಂದು ಹುಲಿ ಆಕಸ್ಮಿಕವಾಗಿ ಸಾವಿಗೀಡಾದರೆ ಬಹಳ ದೊಡ್ಡ ವಿಚಾರ. ಅಂತದರಲ್ಲಿ ತಾಯಿ ಹುಲಿ ಹಾಗೂ ನಾಲ್ಕು ಮರಿಗಳು ಸಾವಿಗೀಡಾಗಿರುವುದು ಆಘಾತಕಾರಿಯಾಗಿರುವ ವಿಷಯ. ಇಷ್ಟು ದೊಡ್ಡ ಪ್ರಮಾಣದ ಅನಾಹುತ ಆಗಿದೆಯೆಂದರೆ ಅರಣ್ಯ ಇಲಾಖೆಯ ನಿರ್ಲಕ್ಷ್ಯ ಬಹಳ ಸ್ಪಷ್ಟವಾಗಿದೆ. ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಬಹಳಷ್ಟು ಜನದಟ್ಟಣೆಗೆ ಅವಕಾಶ ಮಾಡಿಕೊಡುತ್ತಿದ್ದಾರೆ. ಹುಲಿ ಅರಣ್ಯ ಪ್ರದೇಶದ ಪಕ್ಕದಲ್ಲಿಯೇ ರೆಸಾರ್ಟ್ ಗೆ ಅನುಮತಿ ನೀಡಿದ್ದಾರೆ. ಹುಲಿ ಸಂರಕ್ಷಿತ ಅರಣ್ಯದ ಬಳಿಯೇ ಜನರು ಪಿಕ್ ನಿಕ್ ಹೋಗುತ್ತಾರೆ. ಇಷ್ಟೆಲ್ಲಾ ಆದರೂ ಕೂಡ ಅರಣ್ಯ ಇಲಾಖೆಯವರು ಕಣ್ಣು ಮುಚ್ಚಿಕೊಂಡು ಕುಳಿತಿದ್ದಾರೆ ಎಂದು ಆರೋಪಿಸಿದರು.

*ಅಧಿಕಾರಿಗಳನ್ನು ಕಾಡಿಗೆ ಕಳಿಸಿ:*
ಭಾರತೀಯ ಅರಣ್ಯ ಸೇವಾ ಅಧಿಕಾರಿಗಳನ್ನು ಬೆಂಗಳೂರಿನಿಂದ ಅರಣ್ಯಕ್ಕೆ ಕಳಿಸಬೇಕು. ನಾವಿದ್ದಾಗ ಎಲ್ಲ ಅರಣ್ಯ ಇಲಾಖೆ ಕಚೇರಿಗಳನ್ನು ಅರಣ್ಯ ಇರುವ ಕಡೆ ಸ್ಥಳಾಂತರ ಮಾಡಿದ್ದೇವು. ಈಗ ಮತ್ತೆ ಬೆಂಗಳೂರಿಗೆ ಸ್ಥಳಾಂತರಿಸಿದ್ದಾರೆ. ಬಹುತೇಕ ಐಎಫ್ ಎಸ್ ಅಧಿಕಾರಿಗಳು ಬೆಂಗಳೂರಿನಲ್ಲಿಯೇ ಇದ್ದಾರೆ. ಗಾರ್ಡ್ ಗಳನ್ನು ಬಿಟ್ಟರೆ ಯಾರೂ ಕಾಡು ಕಾಯುವವರಿಲ್ಲ. ಎಲ್ಲ ಐಎಫ್ಎಸ್ ಅಧಿಕಾರಿಗಳು ಬರುತ್ತಾರೆ. ಬೇರೆ ಬೇರೆ ಹುದ್ದೆಗಳನ್ನು ಸೃಷ್ಟಿಸಿ ಬೆಂಗಳೂರಿನಲ್ಲಿಯೇ ಉಳಿಯುತ್ತಾರೆ‌. ಕಾಡಿನ ಬಗ್ಗೆ ಗಂಭೀರ ಆಡಳಿತ ನಡೆಸುವವರು ಯಾರು. ಅರಣ್ಯ ನಾಶ, ಅಕ್ರಮವಾಗಿ ಕಳ್ಳಸಾಗಾಣಿಕೆಯಾಗುತ್ತಿದೆ. ಮಾನವ ಮತ್ತು ಪ್ರಾಣಿಗಳ ನಡುವೆ ಸಂಘರ್ಷ ಉಂಟಾಗುತ್ತಿದೆ. ರೆಸಾರ್ಟ್ ಗಳು, ಜನದಟ್ಟಣೆ ಹೆಚ್ಚಾಗುತ್ತಿದೆ. ಇದಲ್ಲದೇ ಕಾಂಗ್ರೆಸ್ ಮಹಾನಾಯಕಿ ಆದೇಶದ ಹಿನ್ನೆಲೆಯಲ್ಲಿ ಬನ್ನೇರುಘಟ್ಟ ರಸ್ತೆಯಲ್ಲಿ ರಾತ್ರಿ ವಾಹನ ಸಂಚಾರಕ್ಕೆ ಅವಕಾಶ ಕೊಡಬೇಕು ಎಂಬ ಒತ್ತಡ ಇದೆ. ಹುಲಿಗಳ ಸಾವು ಸಂಪೂರ್ಣ ನಿರ್ಲಕ್ಷ್ಯವೇ ಕಾರಣ ಇದರ ಬಗ್ಗೆ ಸಂಪೂರ್ಣ ತನಿಖೆ ಆಗಬೇಕು. ಯಾರು ತಪ್ಪಿರಸ್ಥರಿದ್ದಾರೆ ಅವರ ಮೇಲೆ ಕ್ರಮ ಆಗಬೇಕು. ಹಿಂದೆ ಹುಲಿಗಳ ಚರ್ಮಕ್ಮಾಗಿ ಹುಲಿಗಳನ್ನು ಸಾಯಿಸಲಾಗುತ್ತಿತ್ತು. ಅಂತಹ ಘಟನೆ ಆಗಿದಿಯೋ ಇಲ್ಲವೋ ತಿಳಿಯಲು ಸಂಪೂರ್ಣ ತನಿಖೆ ಆಗಬೇಕು ಎಂದು ಆಗ್ರಹಿಸಿದರು.

*ಅಭಿವೃದ್ದಿ ಶೂನ್ಯ:*
ಕಾಂಗ್ರೆಸ್ ನಲ್ಲಿ ಸೆಪ್ಟೆಂಬರ್ ನಲ್ಲಿ ಕ್ರಾಂತಿಯಾಗುತ್ತದೆ ಎಂಬ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಕಾಂತ್ರಿಯಾಗುತ್ತೊ.. ಬ್ರಾಂತಿಯಾಗುತ್ತೊ ನೋಡೋಣ. ಈಗಾಗ್ಲೆ ಜನರಿಗೆ ಕಾಂಗ್ರೆಸ್ ಸರ್ಕಾರದ ಬಗ್ಗೆ ಬ್ರಾಂತಿಯಾಗಿದೆ. ಕಾಂಗ್ರೆಸ್ ಆಂತರಿಕ ವಿಷಯದ ಬಗ್ಗೆ ಹೆಚ್ಚು ಮಾತನಾಡಲ್ಲ. ಕಾಂಗ್ರೆಸ್ ಕಚ್ಚಾಟದಲ್ಲಿ ಅಭಿವೃದ್ಧಿಯೇ ಇಲ್ಲ. ಕಚ್ಚಾಟಕ್ಕೂ ಮುನ್ನ ಗ್ಯಾರಂಟಿಯಿಂದಾಗಿ ಅಭಿವೃದ್ಧಿ ಶೂನ್ಯವಾಗಿದೆ. ಸಾಲದ ಶೂಲಕ್ಕೆ ಕರ್ನಾಟಕ ಸಿಲುಕಿದೆ. ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿದೆ. 50 ರಿಂದ 60 ಸಾವಿರ ಕೋಟಿ ರೂಪಾಯಿ ಹೆಚ್ಚುವರಿ ತೆರಿಗೆಯಿಂದ ವಸೂಲಾಗಿದೆ. ಇಷ್ಟಾಗಿಯೂ ಹಣ ಸಾಲುತ್ತಿಲ್ಲ ಅಂದರೆ ಹಣ ಎಲ್ಲಿಗೆ ಹೋಗುತ್ತಿದೆ ಎಂದು ಪ್ರಶ್ನಿಸಿದರು.

*224 ಕ್ಷೇತ್ರಗಳಲ್ಲೂ ಭ್ರಷ್ಟಾಚಾರ:*
ಭ್ರಷ್ಟಾಚಾರ ವಿಷಯವಾಗಿ ನನ್ನ ಮೇಲೆ ನೇರ ಆರೋಪ ಇಲ್ಲ ಎಂದು ಸಚಿವ ಜಮೀರ್ ಜಮೀರ್ ಅಹಮದ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕೇವಲ ಬಿ.ಆರ್ . ಪಾಟೀಲ ಕ್ಷೇತ್ರ ಅಲ್ಲ. 224 ವಿಧಾನಸಭಾ ಕ್ಷೇತ್ರದಲ್ಲೂ ಅವ್ಯವಹಾರ ನಡೆದಿದೆ..
ಇಲಾಖೆಯಲ್ಲಿ ಗೃಹ ಹಂಚಿಕೆಯಲ್ಲಿ ಅವ್ಯವಹಾರ ನಡೆದರೆ ಯಾರು ಹೊಣೆ. ನನಗೆ ಸಂಬಂಧ ಇಲ್ಲ ಅಂದ್ರೆ ಏನ್ ಅರ್ಥ.
ಎಲ್ಲಿ ಭ್ರಷ್ಟಾಚಾರ ಆಗಿದೆ ಅಂತ ತನಿಖೆ ಮಾಡಿ ತಪ್ಪಿತಸ್ಥರನ್ನು ಒಳಗೆ ಹಾಕಿದರೆ ಹೌದು ಎನ್ನಬಹುದು. ಶಾಸಕ ಬಿ. ಆರ್. ಪಾಟೀಲರು ಹೇಳಿ 15 ದಿನವಾಯಿತು. ಯಾವುದೇ ಕ್ರಮ ಆಗಿಲ್ಲ ಅಂದರೆ ತೆಳಗಿನಿಂದ ಮೇಲಿನವರೆಗೆ ಎಲ್ಲರ ಪಾಲಿದೆ ಅಂತ ಅರ್ಥವಾಯಿತಲ್ಲ. ಸಿಎಂ ಕರೆದು ಮಾತಾಡುತ್ತಾರೆ ಅಂತಾರೆ. ಕರೆದು ಮಾತನಾಡಿದರೆ ಅದು ಹೇಗೆ ನಿಯಂತ್ರಣವಾಗುತ್ತೆ‌. ಸಿಎಂ ಇಷ್ಟೊಂದು ಅಸಹಾಯಕರಾಗುತ್ತಾರೆ ಅಂತ ಗೊತ್ತಿರಲಿಲ್ಲ. ಅತ್ಯಂತ ಅಸಹಾಯಕ, ದೌರ್ಬಲ್ಯದಿಂದ ಕೂಡಿರುವ ಸರ್ಕಾರ ಇದು ಎಂದು ವಾಗ್ದಾಳಿ ನಡೆಸಿದರು.

*ವರಿಷ್ಠರ ತೀರ್ಮಾನ ಅಂತಿಮ:*
ಬಿಜೆಪಿ‌ ರಾಜ್ಯಾಧ್ಯಕ್ಷ, ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಶೀಘ್ರ ಆರಂಭವಾಗುತ್ತದೆ‌. ವರಿಷ್ಠರು ಈ ಬಗ್ಗೆ ಆದಷ್ಟು ಬೇಗ ನಿರ್ಧಾರ ಮಾಡುತ್ತಾರೆ. ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾಗುತ್ತಾರಾ. ಮುಂದುವರೆಯುತ್ತಾರೆ ಅನ್ನುವ ಬಗ್ಗೆ ಊಹೆ ಮಾಡಲು ಸಾಧ್ಯವಿಲ್ಲ. ವರಿಷ್ಠರ ತೀರ್ಮಾನವೇ ಅಂತಿಮ.. ಅವರ ತೀರ್ಮಾನ ಬಂದಮೇಲೆ ಎಲ್ಲರಿಗೂ ಗೊತ್ತಾಗುತ್ತದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು