2:55 AM Sunday22 - March 2026
ಬ್ರೇಕಿಂಗ್ ನ್ಯೂಸ್
ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ

ಇತ್ತೀಚಿನ ಸುದ್ದಿ

ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ

30/11/2025, 15:43

ಮಂಗಳೂರು(reporterkarnataka.com): ನಮ್ಮ ದೇಶವನ್ನು,ರಾಜ್ಯವನ್ನು ನಶಾಮುಕ್ತ ಹಾಗೂ ದ್ವೇಷಮುಕ್ತಗೊಳಿಸುವ ಮೂಲಕ ಆಹ್ಲಾದಕರ ಮತ್ತು ಆರೋಗ್ಯಕರ ವಾತಾವರಣ ನಿರ್ಮಿಸಬೇಕಿದೆ ಎಂದು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಹೇಳಿದರು.


ನಗರದ ಮಂಗಳಾ ಸ್ಟೇಡಿಯಂನಲ್ಲಿ ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ RGUHS ಕಾಲೇಜುಗಳ ಮ್ಯಾನೇಜ್ಮೆಂಟ್ ಅಸೋಸಿಯೇಶನ್ ಸಂಯುಕ್ತವಾಗಿ ಆಯೋಜಿಸಿದ್ದ ನಶಾಮುಕ್ತ ಕ್ಯಾಂಪಸ್ ಮತ್ತು ಅಂಗಾಂಗ ದಾನ ಪ್ರತಿಜ್ಞಾ ಅಭಿಯಾನದ ವಾಕ್‌ಥಾನ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದೇಶ ಮತ್ತು ರಾಜ್ಯ ಮುಂಚೂಣಿಯಲ್ಲಿ ಇರಬೇಕಾದರೆ ನಶೆ ಹಾಗೂ ದ್ವೇಷ ಎಂಬ ಎರಡು ದುಷ್ಟಶಕ್ತಿಗಳನ್ನು ನಿಗ್ರಹಿಸುವುದು ಅನಿವಾರ್ಯ ಎಂದು ಅವರು ಹೇಳಿದರು.
ನಶಾಮುಕ್ತ ಕ್ಯಾಂಪಸ್ ಹಾಗೂ ಅಂಗಾಂಗ ದಾನ ಪ್ರತಿಜ್ಞಾ ಅಭಿಯಾನಗಳು ಭಾರತದ ಭವಿಷ್ಯವನ್ನು ರೂಪಿಸುವ ಪ್ರಮುಖ ಉಪಕ್ರಮಗಳು. ಒಂದು ದಿನದ ವಾಕ್‌ಥಾನ್ನೊಂ ದಿಗೆ ಮುಕ್ತಾಯಗೊಳ್ಳಬಾರದು; ವಿದ್ಯಾರ್ಥಿಗಳು ಜನಜಾಗೃತಿ ರಾಯಭಾರಿಗಳಾಗಿ ಎಲ್ಲೆಡೆ ಈ ಸಂದೇಶವನ್ನು ಹರಡಬೇಕು. ಬದಲಾವಣೆ ಒಂದೇ ದಿನದಲ್ಲಿ ಸಂಭವಿಸದು; ನಿರಂತರ ಮತ್ತು ಒಗ್ಗಟ್ಟಿನ ಪ್ರಯತ್ನ ಅಗತ್ಯ ಎಂದು ಖಾದರ್ ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ವಿದ್ಯಾರ್ಥಿ ಜೀವನ ಭವಿಷ್ಯವನ್ನು ನಿರ್ಮಿಸುವ ಮುಖ್ಯ ಹಂತ. ಈ ಸಂದರ್ಭದಲ್ಲಿ ಸ್ವಯಂ ನಿಯಂತ್ರಣ ಸಾಧಿಸಿದರೆ ಮುಂದಿನ ಜೀವನ ಯಶಸ್ವಿಯಾಗುತ್ತದೆ. ಕ್ಷಣಿಕ ಆಕರ್ಷಣೆಗಳಿಂದ ದೂರವಿದ್ದು, ಅಧ್ಯಯನದಲ್ಲಿ ಏಕಾಗ್ರತೆ ಸಾಧಿಸಿದರೆ ಉತ್ತಮ ಜೀವನ ಖಚಿತ ಎಂದು ಸಲಹೆ ನೀಡಿದರು.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಭಗವಾನ್ ಬಿ.ಸಿ. ಮಾತನಾಡಿ, ದೇಶದ ಯುವ ಸಮುದಾಯ ವಿಶೇಷವಾಗಿ ಕರ್ನಾಟಕದ ವಿದ್ಯಾರ್ಥಿಗಳು ಡ್ರಗ್ ಮಾಫಿಯಾಕ್ಕೆ ಗುರಿಯಾಗುತ್ತಿರುವುದು ಗಂಭೀರ ಸಮಸ್ಯೆ ಎಂದು ಆತಂಕ ವ್ಯಕ್ತಪಡಿಸಿದರು.
ಪಂಜಾಬ್, ಕೇರಳ ಮತ್ತು ಉತ್ತರ ಭಾರತದ ರಾಜ್ಯಗಳ ನಂತರ ಡ್ರಗ್ ಪೆಡ್ಲರ್‌ಗಳ ದೃಷ್ಟಿ ಕರ್ನಾಟಕದತ್ತ ತಿರುಗಿದೆ. ದೇಶದಾದ್ಯಂತ 20–30% ವಿದ್ಯಾರ್ಥಿಗಳು ಒಂದಲ್ಲೊಂದು ಮಾದಕ ದ್ರವ್ಯದ ಪ್ರಭಾವಕ್ಕೆ ಒಳಗಾಗಿರುವುದು ಆತಂಕಕಾರಿ ವಿಷಯ. ವಿದ್ಯಾರ್ಥಿಗಳನ್ನು ಈ ವಿಷಜಾಲದಿಂದ ರಕ್ಷಿಸುವ ನಿಟ್ಟಿನಲ್ಲಿ RGUHS ರಾಜ್ಯವ್ಯಾಪಿ ನಶಾಮುಕ್ತ ಕ್ಯಾಂಪಸ್ ಅಭಿಯಾನ ಆರಂಭಿಸಿದೆ ಎಂದು ಅವರು ತಿಳಿಸಿದರು.
3.50 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ರಕ್ಷಣೆ ನಮ್ಮ ಆದ್ಯತೆ. ಕ್ಯಾಂಪಸ್‌ಗಳ ಸುತ್ತಮುತ್ತ ಮಾದಕ ವಸ್ತುಗಳ ಮಾರಾಟಕ್ಕೆ ನಿರ್ಬಂಧ ಹೇರಲಾಗಿದೆ. ಪ್ರತಿಯೊಂದು ಕಾಲೇಜಿನಲ್ಲೂ ಟಾಸ್ಕ್ ಫೋರ್ಸ್ ಸಮಿತಿ ರಚಿಸಲಾಗಿದೆ. ಜಾಗೃತಿ ಜಾಥಾ, ಕಾರ್ಯಾಗಾರಗಳು, ಅಭಿಯಾನಗಳ ಮೂಲಕ ವಿದ್ಯಾರ್ಥಿಗಳನ್ನು ಡ್ರಗ್ಸ್, ತಂಬಾಕು, ಮದ್ಯಪಾನದ ದುಷ್ಪರಿಣಾಮಗಳಿಂದ ದೂರವಿಡುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ವಿವರಿಸಿದರು.
ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ನಶಾಮುಕ್ತ ಜೀವನವೇ ಆರೋಗ್ಯಪೂರ್ಣ ಜೀವನ. ಇಂದು ಇಲ್ಲಿ ಸೇರಿರುವ ನೀವು 12,000 ಕ್ಕೂ ಹೆಚ್ಚು ವಿದ್ಯಾರ್ಥಿಗಳು—‘ನಾನು ಯಾವುದೇ ದುಶ್ಚಟಗಳಿಗೆ ಒಳಗಾಗುವುದಿಲ್ಲ, ಡ್ರಗ್ ಫೆಡ್ಲರ್‌ಗಳ ಬಲೆಗೆ ಬೀಳುವುದಿಲ್ಲ, ನನ್ನ ಸ್ನೇಹಿತರನ್ನೂ ವ್ಯಸನಕ್ಕೆ ನೂಕುವುದಿಲ್ಲ, ಕ್ಯಾಂಪಸ್‌ನಲ್ಲಿ ಯಾವುದೇ ಮಾದಕ ವಸ್ತು ಕಂಡುಬಂದರೂ ಸುಮ್ಮನಿರುವುದಿಲ್ಲ” ಎಂದು ಪ್ರತಿಜ್ಞೆ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಸಾವಿರಾರು ವಿದ್ಯಾರ್ಥಿಗಳು ಜಾಥಾದಲ್ಲಿ ಉತ್ಸಾಹಭರಿತವಾಗಿ ಭಾಗವಹಿಸಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಅಂಗಾಂಗ ದಾನ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ನಗರದ ಪ್ರಮುಖ ಬೀದಿಗಳಲ್ಲಿ ಘೋಷಣೆಗಳನ್ನು ಕೂಗುತ್ತ ಜಾಗೃತಿ ಮೂಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು