2:35 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಆಧುನಿಕ ಜಗತ್ತಿನಲ್ಲೂ ಗ್ರಂಥಾಲಯ ಮಹತ್ವ ಕಳೆದುಕೊಂಡಿಲ್ಲ; ಗ್ರಂಥಾಲಯ ನಮ್ಮ ಸಂಪತ್ತು: ವಾಮನ್ ಕುದ್ರೋಳಿ

14/08/2025, 10:05

ಮಂಗಳೂರು(reporterkarnataka.com): ಆಧುನಿಕ ಜಗತ್ತಿನ ಈ ಡಿಜಿಟಲ್ ಯುಗದಲ್ಲೂ, ಗ್ರಂಥಾಲಯ ತನ್ನ ಮಹತ್ವವನ್ನು ಎಲ್ಲೂ ಕಳೆದುಕೊಳ್ಳದೆ ಕಾಲಕ್ಕೆ ತಕ್ಕಂತೆ ಹೊಸತನವನ್ನು ಮೈಗೂಡಿಸಿಕೊಂಡು ತನ್ನ ಅನಿವಾರ್ಯತೆಯನ್ನು ಸದಾ ಜಾರಿಯಲ್ಲಿರಿಸಿಕೊಂಡುದನ್ನು ನಾವು ಇವತ್ತಿಗೂ ಕಾಣುತಿದ್ದೇವೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ನಿವೃತ್ತ ಸಹಾಯಕ ಗ್ರಂಥಪಾಲಕ ವಾಮನ್ ಕುದ್ರೋಳಿ ಹೇಳಿದರು.
ಅವರು ಇತ್ತೀಚಿಗೆ ಮಂಗಳೂರು ವಿವಿ ಕಾಲೇಜಿನಲ್ಲಿ ಕಾಲೇಜು ಗ್ರಂಥಾಲಯ ಹಾಗೂ ಆಂತರಿಕ ಗುಣಮಟ್ಟ ಖಾತರಿ ಕೋಶದ ಸಹಯೋಗದೊಂದಿಗೆ ಆಯೋಜಿಸಿದ್ದ ಗ್ರಂಥಾಲಯ ಪಿತಾಮಹ ಡಾ. ಎಸ್. ಆರ್. ರಂಗನಾಥ್ ಅವರ 133ನೇ ಸಂಸ್ಮರಣಾ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ಜ್ಞಾನದಾಹಿಗಳಿಗೆ, ಜಿಜ್ಞಾಸುಗಳಿಗೆ ಗ್ರಂಥಾಲಯ ಒಂದು ವರವಾಗಿದೆ. ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್ ರಂಗನಾಥ್ ಅವರು ಗ್ರಂಥಾಲಯದ ಮೇಲ್ಮೆಗೆ ‘ ಕೋಲೋನ್ ಕ್ಲಾಸಿಫಿಕೇಷನ್ ‘ ಮೂಲಕ ಆವಿಷ್ಕಾರ ಭಾಷ್ಯಾಸೂತ್ರವನ್ನು ಸಿದ್ದಪಡಿಸಿ ಜಗತ್ತಿಗೆ ನೀಡಿದ ಕಾರಣವಾಗಿ ಓದುಗರು ಗ್ರಂಥಾಲಯಕ್ಕೆ ತುಂಬಾ ಹತ್ತಿರವಾಗುವಂತಾಯಿತು ಮತ್ತು ತನ್ನ ಅಸ್ತಿತ್ವವನ್ನು ಮತ್ತಷ್ಟು ವೃದ್ಧಿಸಿಕೊಳ್ಳಲು ಕಾರಣವಾಯಿತು. ಹಾಗೆ, ವಿದ್ಯಾರ್ಥಿಗಳು ಹೆಚ್ಚು ಹೆಚ್ಚಾಗಿ ಗ್ರಂಥಾಲಯವನ್ನು ಬಳಸಿಕೊಳ್ಳಬೇಕು ಎಂದು ಅವರು ನುಡಿದರು.
ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಗಣಪತಿ ಗೌಡ ಎಸ್. ಅವರು ವಹಿಸಿ, ಗ್ರಂಥಾಲಯ ಸಂಸ್ಥೆಯೊಂದಕ್ಕೆ ಮೆದುಳು ಇದ್ದಂತೆ. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಗ್ರಂಥಾಲಯದ ಪಾತ್ರ ಪ್ರಮುಖವಾಗಿದೆಯೆಂದರು.
ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕ ಡಾ. ಸಿದ್ದರಾಜು ಉಪಸ್ಥಿತರಿದ್ದರು.
ಗ್ರಂಥಪಾಲಕಿ. ಡಾ. ವನಜಾ ಸ್ವಾಗತಿಸಿದರು. ವಿದ್ಯಾರ್ಥಿ ಸಂದೀಪ್ ಸಮಯಿ ಕಾರ್ಯಕ್ರಮ ನಿರೂಪಿಸಿದರು. ಡಾ. ಸಿದ್ದರಾಜು ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು