12:57 AM Sunday22 - March 2026
ಬ್ರೇಕಿಂಗ್ ನ್ಯೂಸ್
ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ

ಇತ್ತೀಚಿನ ಸುದ್ದಿ

LIC | ದೇಶದ ಅತಿದೊಡ್ಡ ವಿಮಾ ಸಂಸ್ಥೆ ಭಾರತೀಯ ಜೀವ ವಿಮಾ ನಿಗಮದಿಂದ ಹೊಸ ಪಾಲಿಸಿ ಜೀವನ್ ಉತ್ಸವ್ ಪ್ಲಾನ್ ಬಿಡುಗಡೆ

07/12/2023, 14:04

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ದೇಶದ ಅತಿದೊಡ್ಡ ವಿಮಾ ಸಂಸ್ಥೆ ಭಾರತೀಯ ಜೀವ ವಿಮಾ ನಿಗಮ (LIC) ಇದೀಗ ಹೊಸ ಪಾಲಿಸಿಯೊಂದನ್ನು ಹೊಸ ಜೀವನ್ ಉತ್ಸವ್ ಪ್ಲಾನ್ (LIC Jeevan Utsav) ಬಿಡುಗಡೆ ಮಾಡಿದೆ.
ಎಲ್‌ಐಸಿ ಪ್ರತಿನಿಧಿಗಳು ಜನರ ಭವಿಷ್ಯದ ದೃಷ್ಟಿಯಿಂದ ಹೆಚ್ಚು ಪಾಲಿಸಿ ಮಾಡಿಸಬೇಕು. ಅದಕ್ಕೆ ಪೂರಕವಾಗಿ ಭಾರತೀಯ ಜೀವ ವಿಮಾ ನಿಗಮ ಹೊಸದಾಗಿ ಹೊಸ ಜೀವನ್ ಉತ್ಸವ್ ಪ್ಲಾನ್ (LIC Jeevan Utsav) ಪರಿಚಯಿಸಿರುವ ಪಾಲಿಸಿಗಳ ಪರಿಚಯ ಮಾಡಿಕೊಡಬೇಕು ಎಂದು ತಾಲ್ಲೂಕು ಎಲ್‌ಐಸಿ ಉಪ ಶಾಖಾ ಕಚೇರಿ ವ್ಯವಸ್ಥಾಪಕ ಎಸ್.ವಿ.ಪ್ರಸಾದ್‌ ಹೇಳಿದರು.
ಪಟ್ಟಣದ ಎಲ್‌ಐಸಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ತಾಲ್ಲೂಕು ಎಲ್‌ಐಸಿ ಏಜೆಂಟರ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿನಿಧಿಗಳು ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಬೇಕು. ಪಾಲಿಸಿ ಪಡೆದವರಿಗೆ ಉತ್ತಮ ಸೇವೆ ನೀಡಬೇಕು ಎಂದು ಹೇಳಿದರು.
ಎಷ್ಟೋ ಪಾಲಿಸಿದಾರರಿಗೆ ಎಲ್‌ಐಸಿ ವತಿಯಿಂದ ಸಿಗುವ ಸೌಲಭ್ಯಗಳ ಬಗ್ಗೆ ತಿಳಿದಿರುವುದಿಲ್ಲ. ಹಾಗಾಗಿ ಸೌಲಭ್ಯಗಳಿಂದ ವಂಚಿತರಾಗುತ್ತಾರೆ. ಆದ್ದರಿಂದ ಪ್ರತಿ ಪಾಲಿಸಿದಾರನಿಗೆ ಅರಿವು ಮೂಡಿಸುವ ಜವಾಬ್ದಾರಿ ಪ್ರತಿನಿಧಿಗಳದಾಗಿದೆ ಎಂದು ಹೇಳಿದರು.
ಪ್ರತಿನಿಧಿಗಳು ನಗರ ಹಾಗೂ ಪಟ್ಟಣಗಳನ್ನು ಮಾತ್ರ ಕೇಂದ್ರೀಕರಿಸದೆ, ಗ್ರಾಮೀಣ ಪ್ರದೇಶದಲ್ಲಿ ಸಂಚರಿಸಿ ಪಾಲಿಸಿ ಮಾಡಿಸಬೇಕು. ಹಾಗೆ ಮಾಡುವುದರಿಂದ ಬಡವರು ಹಾಗೂ ಜನಸಾಮಾನ್ಯರಿಗೆ ಹೆಚ್ಚಿನ ಪ್ರಯೋಜನವಾಗುತ್ತದೆ. ನಿಗಮದ ಉದ್ದೇಶವೂ ಈಡೇರುತ್ತದೆ ಎಂದು ಹೇಳಿದರು. ಎಲ್‌ಐಸಿ ಅಧಿಕಾರಿ ಡಿ. ರವಿಶಂಕರ್, ಎಲ್‌ಐಸಿ ಅಭಿವೃದ್ಧಿ ಅಧಿಕಾರಿ ರವೀಂದ್ರಯ್ಯ ಆ‌ರ್.ಕುಲಕರ್ಣಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು