7:47 PM Thursday5 - February 2026
ಬ್ರೇಕಿಂಗ್ ನ್ಯೂಸ್
*ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್…

ಇತ್ತೀಚಿನ ಸುದ್ದಿ

LIC | ದೇಶದ ಅತಿದೊಡ್ಡ ವಿಮಾ ಸಂಸ್ಥೆ ಭಾರತೀಯ ಜೀವ ವಿಮಾ ನಿಗಮದಿಂದ ಹೊಸ ಪಾಲಿಸಿ ಜೀವನ್ ಉತ್ಸವ್ ಪ್ಲಾನ್ ಬಿಡುಗಡೆ

07/12/2023, 14:04

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ದೇಶದ ಅತಿದೊಡ್ಡ ವಿಮಾ ಸಂಸ್ಥೆ ಭಾರತೀಯ ಜೀವ ವಿಮಾ ನಿಗಮ (LIC) ಇದೀಗ ಹೊಸ ಪಾಲಿಸಿಯೊಂದನ್ನು ಹೊಸ ಜೀವನ್ ಉತ್ಸವ್ ಪ್ಲಾನ್ (LIC Jeevan Utsav) ಬಿಡುಗಡೆ ಮಾಡಿದೆ.
ಎಲ್‌ಐಸಿ ಪ್ರತಿನಿಧಿಗಳು ಜನರ ಭವಿಷ್ಯದ ದೃಷ್ಟಿಯಿಂದ ಹೆಚ್ಚು ಪಾಲಿಸಿ ಮಾಡಿಸಬೇಕು. ಅದಕ್ಕೆ ಪೂರಕವಾಗಿ ಭಾರತೀಯ ಜೀವ ವಿಮಾ ನಿಗಮ ಹೊಸದಾಗಿ ಹೊಸ ಜೀವನ್ ಉತ್ಸವ್ ಪ್ಲಾನ್ (LIC Jeevan Utsav) ಪರಿಚಯಿಸಿರುವ ಪಾಲಿಸಿಗಳ ಪರಿಚಯ ಮಾಡಿಕೊಡಬೇಕು ಎಂದು ತಾಲ್ಲೂಕು ಎಲ್‌ಐಸಿ ಉಪ ಶಾಖಾ ಕಚೇರಿ ವ್ಯವಸ್ಥಾಪಕ ಎಸ್.ವಿ.ಪ್ರಸಾದ್‌ ಹೇಳಿದರು.
ಪಟ್ಟಣದ ಎಲ್‌ಐಸಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ತಾಲ್ಲೂಕು ಎಲ್‌ಐಸಿ ಏಜೆಂಟರ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿನಿಧಿಗಳು ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಬೇಕು. ಪಾಲಿಸಿ ಪಡೆದವರಿಗೆ ಉತ್ತಮ ಸೇವೆ ನೀಡಬೇಕು ಎಂದು ಹೇಳಿದರು.
ಎಷ್ಟೋ ಪಾಲಿಸಿದಾರರಿಗೆ ಎಲ್‌ಐಸಿ ವತಿಯಿಂದ ಸಿಗುವ ಸೌಲಭ್ಯಗಳ ಬಗ್ಗೆ ತಿಳಿದಿರುವುದಿಲ್ಲ. ಹಾಗಾಗಿ ಸೌಲಭ್ಯಗಳಿಂದ ವಂಚಿತರಾಗುತ್ತಾರೆ. ಆದ್ದರಿಂದ ಪ್ರತಿ ಪಾಲಿಸಿದಾರನಿಗೆ ಅರಿವು ಮೂಡಿಸುವ ಜವಾಬ್ದಾರಿ ಪ್ರತಿನಿಧಿಗಳದಾಗಿದೆ ಎಂದು ಹೇಳಿದರು.
ಪ್ರತಿನಿಧಿಗಳು ನಗರ ಹಾಗೂ ಪಟ್ಟಣಗಳನ್ನು ಮಾತ್ರ ಕೇಂದ್ರೀಕರಿಸದೆ, ಗ್ರಾಮೀಣ ಪ್ರದೇಶದಲ್ಲಿ ಸಂಚರಿಸಿ ಪಾಲಿಸಿ ಮಾಡಿಸಬೇಕು. ಹಾಗೆ ಮಾಡುವುದರಿಂದ ಬಡವರು ಹಾಗೂ ಜನಸಾಮಾನ್ಯರಿಗೆ ಹೆಚ್ಚಿನ ಪ್ರಯೋಜನವಾಗುತ್ತದೆ. ನಿಗಮದ ಉದ್ದೇಶವೂ ಈಡೇರುತ್ತದೆ ಎಂದು ಹೇಳಿದರು. ಎಲ್‌ಐಸಿ ಅಧಿಕಾರಿ ಡಿ. ರವಿಶಂಕರ್, ಎಲ್‌ಐಸಿ ಅಭಿವೃದ್ಧಿ ಅಧಿಕಾರಿ ರವೀಂದ್ರಯ್ಯ ಆ‌ರ್.ಕುಲಕರ್ಣಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು